AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಫೀವರ್; ಸಿನಿಮಾ ನೋಡಿದ ಬಳಿಕ ದೈವ ಬಂದಂತೆ ಆಡಿದ ಪ್ರೇಕ್ಷಕ

'ಕಾಂತಾರ: ಚಾಪ್ಟರ್ 1' ಸಿನಿಮಾ ಉತ್ತಮ ಪ್ರತಿಕ್ರಿಯೆ ಪಡೆದಿದೆ. ರಿಷಬ್ ಶೆಟ್ಟಿ ಅವರ ಗುಳಿಗ ದೈವದ ಅಭಿನಯಕ್ಕೆ ಪ್ರೇಕ್ಷಕರು ಮಂತ್ರಮುಗ್ಧರಾಗಿದ್ದಾರೆ. ಸಿನಿಮಾ ನೋಡಿ ಹೊರಬಂದ ಅಭಿಮಾನಿಯೊಬ್ಬ ದೈವ ಬಂದಂತೆ ವರ್ತಿಸಿರುವ ವಿಡಿಯೋ ವೈರಲ್ ಆಗಿದೆ. ರಿಷಬ್ ನಟನೆಗೆ ಫ್ಯಾನ್ಸ್ ಅಚ್ಚರಿ ವ್ಯಕ್ತಪಡಿಸಿದ್ದು, ಈ ಘಟನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಶುರುವಾಗಿದೆ.

‘ಕಾಂತಾರ: ಚಾಪ್ಟರ್ 1’ ಫೀವರ್; ಸಿನಿಮಾ ನೋಡಿದ ಬಳಿಕ ದೈವ ಬಂದಂತೆ ಆಡಿದ ಪ್ರೇಕ್ಷಕ
ರಿಷಬ್
ರಾಜೇಶ್ ದುಗ್ಗುಮನೆ
| Edited By: |

Updated on:Oct 02, 2025 | 4:20 PM

Share

‘ಕಾಂತಾರ: ಚಾಪ್ಟರ್ 1’ ಸಿನಿಮಾ ಫೀವರ್ ಜೋರಾಗಿದೆ. ಅಕ್ಟೋಬರ್ 2ರಂದು ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗಿದೆ. ಎಲ್ಲ ಕಡೆಗಳಿಂದ ಸಿನಿಮಾ ಪಾಸಿಟಿವ್ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಈ ಚಿತ್ರ ಮೊದಲ ದಿನ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡಲಿದೆ ಎಂಬ ಕುತೂಹಲ ಮೂಡಿದೆ. ಹೀಗಿರುವಾಗಲೇ ಒಂದು ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಪ್ರೇಕ್ಷಕ ದೈವ ಬಂದಂತೆ ಆಡಿದ್ದಾನೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ದೈವದ ವಿಚಾರ ಹೇಳಲಾಗಿದೆ. ‘ಕಾಂತಾರ’ದಲ್ಲಿ ಪಂಜುರ್ಲಿ ಬಗ್ಗೆ ಹೇಳಿದರೆ, ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ಗುಳಿಗ ದೈವವನ್ನು ಹೈಲೈಟ್ ಮಾಡಲಾಗಿದೆ. ರಿಷಬ್ ಅವರನ್ನು ಎಲ್ಲರೂ ಕೊಂಡಾಡಿದ್ದಾರೆ. ಅವರು ನಿಜವಾಗಿಯೂ ದೈವ ಬಂದಂತೆ ನಟಿಸಿದ್ದಾರೆ ಎಂಬುದು ಅನೇಕರ ಅಭಿಪ್ರಾಯ. ಈಗ ‘ಕಾಂತಾರ: ಚಾಪ್ಟರ್ 1’ ನೋಡಿ ಬಂದ ಅಭಿಮಾನಿಯೋರ್ವ ದೈವ ಬಂದಂತೆ ಆಡಿರುವ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ
Image
ಕ್ಲೈಮ್ಯಾಕ್ಸ್​ನಲ್ಲಿ ‘ಕಾಂತಾರ: ಚಾಪ್ಟರ್ 2’ ಬಗ್ಗೆ ಘೋಷಣೆ
Image
ಪ್ರೀಮಿಯರ್ ಶೋಗಳಿಂದಲೇ ಕೋಟಿ ಕೋಟಿ ಬಾಚಿದ ‘ಕಾಂತಾರ: ಚಾಪ್ಟರ್ 1’
Image
‘ಕಾಂತಾರ: ಚಾಪ್ಟರ್1’ ವಿಮರ್ಶೆ: ದಂತಕಥೆಯಲ್ಲಿ ಅದ್ದೂರಿತನ; ಇದು ದೈವದ ಕಥನ
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್1’ ವಿಮರ್ಶೆ: ದಂತಕಥೆಯಲ್ಲಿ ಅದ್ದೂರಿತನ; ಇದು ದೈವದ ಕಥನ

ರಿಷಬ್ ಶೆಟ್ಟಿ ಅವರು ‘ಓ..’ ಎಂದು ಸಿನಿಮಾದಲ್ಲಿ ಕೂಗುತ್ತಾರೆ. ಈ ವ್ಯಕ್ತಿ ಕೂಡ ‘ಓ..’ ಎಂದು ಕೂಗಾಡಿದ್ದಾನೆ. ಆ ಬಳಿಕ ‘ದೇವರ ದರ್ಶನ ಆಯ್ತು, ಸಿನಿಮಾ ಚೆನ್ನಾಗಿದೆ’ ಎಂದು ಆ ವ್ಯಕ್ತಿ ಹೇಳಿದ್ದಾನೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಇದನ್ನು ನಾಟಕ ಎಂದು ಕರೆದಿದ್ದಾರೆ.

ರಿಷಬ್ ಶೆಟ್ಟಿ ಅವರ ‘ಕಾಂತಾರ’ ಸಿನಿಮಾ ದೈವದ ಬಗ್ಗೆ ಇತ್ತು. ಈಗ ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲೂ ಅದೇ ವಿಷಯ ಹೇಳಲಾಗಿದೆ. ರಿಷಬ್ ಪರ್ಫಾರ್ಮೆನ್ಸ್​ನ ಎಲ್ಲರೂ ಕೊಂಡಾಡಿದ್ದಾರೆ. ರುಕ್ಮಿಣಿ ವಸಂತ್ ಸ್ಪೆಷಲ್ ಪ್ಯಾಕೇಜ್ ಆಗಿ ಕಾಣಿಸಿಕೊಂಡಿದ್ದಾರೆ. ಅವರನ್ನು ಎಲ್ಲರೂ ಹೊಗಳುತ್ತಿದ್ದಾರೆ. ಉಳಿದ ಅನೇಕ ಪಾತ್ರಗಳು ಮೆಚ್ಚುಗೆ ಪಡೆಯುವ ರೀತಿಯಲ್ಲಿ ಇವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:08 pm, Thu, 2 October 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ