AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಬ್ ಶೆಟ್ಟಿಗೆ ಅಮೆರಿಕದಲ್ಲಿ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ; ಒಬಾಮ ಭಾಷಣ ಮಾಡಿದ ಜಾಗದಲ್ಲಿ ಅವಾರ್ಡ್​ ಪಡೆದ ನಟ  

Rishab Shetty:ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್​​ನಲ್ಲಿ ರಿಷಬ್ ಶೆಟ್ಟಿಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಅವಾರ್ಡ್​ ನೀಡಿ ಗೌರವಿಸಲಾಗಿದೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

ರಿಷಬ್ ಶೆಟ್ಟಿಗೆ ಅಮೆರಿಕದಲ್ಲಿ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ; ಒಬಾಮ ಭಾಷಣ ಮಾಡಿದ ಜಾಗದಲ್ಲಿ ಅವಾರ್ಡ್​ ಪಡೆದ ನಟ  
ಅಮೆರಿಕದಲ್ಲಿ ಪ್ರಶಸ್ತಿ ಗೆದ್ದ ರಿಷಬ್
ರಾಜೇಶ್ ದುಗ್ಗುಮನೆ
|

Updated on:Jun 28, 2023 | 8:06 AM

Share

ನಟ, ನಿರ್ದೇಶಕ, ನಿರ್ಮಾಪಕನಾಗಿ ರಿಷಬ್ ಶೆಟ್ಟಿ (Rishab Shetty) ಅವರು ಗುರುತಿಸಿಕೊಂಡಿದ್ದಾರೆ. ‘ಕಾಂತಾರ’ ಸಿನಿಮಾ ಯಶಸ್ಸಿನ ಬಳಿಕ ಅವರು ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಹಲವು ಪ್ರಶಸ್ತಿಗಳು ಒಲಿದಿವೆ. ವಿಶೇಷ ಎಂದರೆ ಈಗ ರಿಷಬ್​​ಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ದೊರೆತಿದೆ. ಇದನ್ನು ಸ್ವೀಕರಿಸಲು ಪತ್ನಿ ಪ್ರಗತಿ ಶೆಟ್ಟಿ ಜೊತೆ ಅಮೆರಿಕದ ವಾಷಿಂಗ್ಟನ್​ನ (Washington) ಸಿಯಾಟಲ್​​ಗೆ ಭೇಟಿ ನೀಡಿದ್ದಾರೆ‌. ಅಲ್ಲಿನ ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್​​ನಲ್ಲಿ ರಿಷಬ್ ಶೆಟ್ಟಿಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಅವಾರ್ಡ್​ ನೀಡಿ ಗೌರವಿಸಲಾಗಿದೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

ವಾಷಿಂಗ್ಟನ್​ನ ಸಿಯಾಟಲ್​ನಲ್ಲಿರುವ ಸಹ್ಯಾದ್ರಿ ಕನ್ನಡ ಸಂಘ ಹಾಗೂ ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು ರಿಷಬ್ ಶೆಟ್ಟಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದರು. ಈಗ ಅದ್ದೂರಿ ಕಾರ್ಯಕ್ರಮದಲ್ಲಿ ಈ ಅವಾರ್ಡ್ ಸ್ವೀಕರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಸೆನೆಟರ್ ಡಾ. ದೆರೀಕ್ ಟ್ರಸ್ಫರ್ಡ್ ಹಾಜರಿ ಹಾಕಿದ್ದರು. ಈ ಕಾರ್ಯಕ್ರಮದಲ್ಲಿ 1800ಕ್ಕೂ ಹೆಚ್ಚು ಕನ್ನಡಿಗರು ಭಾಗಿಯಾಗಿದ್ದರು.

‘ನನಗೆ ಅನೇಕ ಕಾರ್ಯಕ್ರಮಕ್ಕೆ ಬರೋಕೆ ಆಹ್ವಾನ ಇತ್ತು. ಆದರೆ, ಯಾವುದಕ್ಕೂ ಬರೋಕೆ ಆಗಿರಲಿಲ್ಲ. ಆದರೆ, ಈ ಕಾರ್ಯಕ್ರಮಕ್ಕೆ ನಾನು ಆಗಮಿಸಿದೆ. ನನಗೆ ನಿಜಕ್ಕೂ ಖುಷಿ ಆಗುತ್ತಿದೆ. ಕನ್ನಡಿಗರ ನೋಡಲು ಸಾಕಷ್ಟು ಸಂತೋಷ ಆಗುತ್ತಿದೆ. ಕನ್ನಡಿಗರಿಂದಾಗಿ ನಾನು ಇಲ್ಲಿದ್ದೇನೆ’ ಎಂದರು ರಿಷಬ್ ಶೆಟ್ಟಿ.

‘ಕಾಂತಾರ’ ಚಿತ್ರವನ್ನು ವಿಶ್ವದ ಅನೇಕರು ನೋಡಿದ್ದಾರೆ. ಆ ಸಾಲಿನಲ್ಲಿ ಟ್ರಸ್ಫರ್ಡ್ ಕೂಡ ಇದ್ದಾರೆ! ಈ ಚಿತ್ರವನ್ನು ಯೂನಿವರ್ಸಲ್ ಸಿನಿಮಾ ಎಂದು ಅವರು ಕರೆದಿದ್ದಾರೆ. ಅಮೆರಿಕ ಹಾಗೂ ವಾಷಿಂಗ್ಟನ್​ಗೆ ಕನ್ನಡಿಗರು ಸಾಕಷ್ಟು ಕೊಡುಗೆ ನೀಡುತ್ತಿದ್ದಾರೆ ಎಂದು ಟ್ರಸ್ಫರ್ಡ್ ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಕಾಂತಾರ 2 ಸಿನಿಮಾದ ಬಗ್ಗೆ ಸಪ್ತಮಿ ಗೌಡ ಮಾತನಾಡಿದ್ದಾರೆ: ಲೀಲಾ ಇರ್ತಾಳಾ?

ವಾಷಿಂಗ್ಟನ್​ನ ಸಿಯಾಟಲ್ ನಗರದ ಪ್ಯಾರಾಮೌಂಟ್ ಥಿಯೇಟರ್​ಗೆ 95 ವರ್ಷಗಳ ಇತಿಹಾಸ ಇದೆ‌. ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಸೇರಿ ಹಲವು ಗಣ್ಯರು ಈ ವೇದಿಕೆ ಮೇಲೆ ನಿಂತು ಭಾಷಣ ಮಾಡಿದ್ದರು. ಅನೇಕ ಹೆಸರಾಂತ ಕಲಾವಿದರ ಕಾರ್ಯಕ್ರಮಗಳು ಇಲ್ಲಿ ನಡೆದಿದೆ‌ ಅನ್ನೋದು ವಿಶೇಷ. ಇಂಥ ಥಿಯೇಟರ್​​ನಲ್ಲಿ ರಿಷಬ್ ಶೆಟ್ಟಿ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪಡೆದಿರೋದು ವಿಶೇಷ. ಈ ಬಗ್ಗೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಚಿನ್ನದ ಲೇಪನ ಹೊಂದಿರುವ ಈ ಟ್ರೋಫಿ, ಸುಮಾರು ಐದು ಕೆಜಿ ತೂಕವಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:56 am, Wed, 28 June 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ