AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ರಿಷಬ್​ ಶೆಟ್ಟಿ ಕಂಬಳದ ಕೋಣ ಓಡಿಸುವುದು ಕಲಿತಿದ್ದು ಹೇಗೆ? ಇಲ್ಲಿದೆ ಮೇಕಿಂಗ್​ ವಿಡಿಯೋ

Kantara Making Video: ಮೇಕಿಂಗ್ ವಿಡಿಯೋ ನೋಡಿ ರಿಷಬ್​ ಶೆಟ್ಟಿ ಅಭಿಮಾನಿಗಳ ನಿರೀಕ್ಷೆ ಹೆಚ್ಚಿದೆ. ‘ಕಾಂತಾರ’ ಸಿನಿಮಾ ಮೇಲಿರುವ ಕ್ರೇಜ್​ ಇನ್ನೂ ಜಾಸ್ತಿ ಆಗಿದೆ.

Kantara: ರಿಷಬ್​ ಶೆಟ್ಟಿ ಕಂಬಳದ ಕೋಣ ಓಡಿಸುವುದು ಕಲಿತಿದ್ದು ಹೇಗೆ? ಇಲ್ಲಿದೆ ಮೇಕಿಂಗ್​ ವಿಡಿಯೋ
ರಿಷಬ್ ಶೆಟ್ಟಿ
TV9 Web
| Edited By: |

Updated on: Sep 22, 2022 | 2:24 PM

Share

ರಿಷಬ್​ ಶೆಟ್ಟಿ ಅವರು ಕನ್ನಡ ಚಿತ್ರರಂಗದಲ್ಲಿ ಯಶಸ್ವಿ ನಟ, ನಿರ್ದೇಶಕ ಹಾಗೂ ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದಾರೆ. ಅವರ ಸಿನಿಮಾಗಳಲ್ಲಿ ಏನಾದರೊಂದು ವಿಶೇಷತೆ ಇದ್ದೇ ಇರುತ್ತದೆ. ಈಗ ಅವರು ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ’ (Kantara) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸೆಪ್ಟೆಂಬರ್​ 30ರಂದು ಈ ಚಿತ್ರ ಬಿಡುಗಡೆ ಆಗಲಿದೆ. ಈಗಾಗಲೇ ರಿಲೀಸ್​ ಆಗಿರುವ ಟ್ರೇಲರ್​ ಕಂಡು ಫ್ಯಾನ್ಸ್​ ಫಿದಾ ಆಗಿದ್ದಾರೆ. ಇನ್ನೇನಿದ್ದರೂ ಪೂರ್ತಿ ಸಿನಿಮಾವನ್ನು ಚಿತ್ರಮಂದಿರದಲ್ಲಿ ಕಣ್ತುಂಬಿಕೊಳ್ಳುವುದಷ್ಟೇ ಬಾಕಿ. ಈ ಚಿತ್ರದಲ್ಲಿ ರಿಷಬ್​ ಶೆಟ್ಟಿ (Rishab Shetty) ಅವರು ಕಂಬಳ ಸ್ಪರ್ಧೆಯ ದೃಶ್ಯಗಳಲ್ಲಿ ನಟಿಸಿದ್ದಾರೆ. ಆ ಸನ್ನಿವೇಶಕ್ಕಾಗಿ ಅವರು ನಿಜವಾಗಿಯೂ ಕಂಬಳದ (Kambala) ಕೋಣಗಳನ್ನು ಓಡಿಸುವುದು ಕಲಿತಿದ್ದಾರೆ.

ರಿಷಬ್​ ಶೆಟ್ಟಿ ಅವರು ಕಂಬಳದ ಕೋಣಗಳನ್ನು ಓಡಿಸುವುದನ್ನು ಕಲಿತಿದ್ದು ಕೆಲವೇ ದಿನಗಳಲ್ಲಿ ಎಂಬುದು ಗಮನಾರ್ಹ ವಿಚಾರ. ಕೆಸರು ಗದ್ದೆಯಲ್ಲಿ ಅವರು ಹಾಕಿದ ಪರಿಶ್ರಮದ ಬಗ್ಗೆ ಇಂಚಿಂಚೂ ವಿವರ ನೀಡುವಂತಹ ವಿಡಿಯೋವನ್ನು ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಬಿಡುಗಡೆ ಮಾಡಿದೆ. ಈ ಮೇಕಿಂಗ್​ ವಿಡಿಯೋದಲ್ಲಿ ಸ್ವತಃ ರಿಷಬ್​ ಶೆಟ್ಟಿ ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಕರಾವಳಿ ಭಾಗದಲ್ಲಿ ‘ಕಾಂತಾರ’ ಚಿತ್ರದ ಕಥೆ ಸಾಗುತ್ತದೆ. ಹಾಗಾಗಿ ಕಥೆಯಲ್ಲಿ ಕಂಬಳ ಸ್ಪರ್ಧೆಯ ದೃಶ್ಯಗಳು ಕೂಡ ಬರಲಿವೆ.

ರಿಷಬ್​ ಶೆಟ್ಟಿ ಅವರು ಕಂಬಳದ ಕೋಣಗಳನ್ನು ಓಡಿಸುವುದು ಕಲಿಯುತ್ತಾರೆ ಎಂಬುದರ ಬಗ್ಗೆ ಆರಂಭದಲ್ಲಿ ಚಿತ್ರತಂಡದ ಅನೇಕರಿಗೆ ಅನುಮಾನ ಇತ್ತು. ಆದರೆ ರಿಷಬ್​ ಅವರು ಹೊಸ ಹುಮ್ಮಸ್ಸಿನಿಂದ ಕಲಿತುಕೊಂಡರು. ಕೇವಲ ಒಂದು ತಿಂಗಳಲ್ಲಿ ವೃತ್ತಿಪರ ಕಂಬಳದ ಓಟಗಾರನಂತೆ ಅವರು ತಯಾರಾಗಿಬಿಟ್ಟರು. ಆದರೆ ಆ ಜರ್ನಿ ಅಷ್ಟು ಸುಲಭದ್ದಾಗಿರಲಿಲ್ಲ. ಹಲವು ದಿನ ಅಭ್ಯಾಸ ಮಾಡಿದ ಬಳಿಕ ಅವರು ಚಿತ್ರೀಕರಣದಲ್ಲಿ ಭಾಗವಹಿಸಿದರು.

ಇದನ್ನೂ ಓದಿ
Image
Kantara: ‘ಕಾಂತಾರ’ ಚಿತ್ರಕ್ಕೆ ಪುನೀತ್​ ಹೀರೋ ಆಗ್ಬೇಕಿತ್ತು; ಆ ಸ್ಥಾನಕ್ಕೆ ರಿಷಬ್ ಶೆಟ್ಟಿ ಬಂದಿದ್ದು ಹೇಗೆ? ಇಲ್ಲಿದೆ ಉತ್ತರ
Image
Kantara: ಧೂಳೆಬ್ಬಿಸಿದ ‘ಕಾಂತಾರ’ ಟ್ರೇಲರ್​; ಹೇಗಿದೆ ರಿಷಬ್​ ಶೆಟ್ಟಿ-ಕಿಶೋರ್​ ಮುಖಾಮುಖಿ?
Image
‘ಸಿಂಗಾರ ಸಿರಿಯೆ..’ ಹಾಡಿಗೆ ತಲೆದೂಗಿದ ಪ್ರೇಕ್ಷಕರು; ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಚಿತ್ರಕ್ಕೆ ಸಿಕ್ತು ಮೈಲೇಜ್
Image
ದಸರಾ ಹಬ್ಬಕ್ಕೆ ಬರಲಿದೆ ‘ಕಾಂತಾರ’; ರಿಷಬ್​ ಶೆಟ್ಟಿ ಚಿತ್ರದ ರಿಲೀಸ್​ ಡೇಟ್​ ಘೋಷಿಸಿದ ‘ಹೊಂಬಾಳೆ ಫಿಲ್ಮ್ಸ್​’

ಕೆಸರು ಗದ್ದೆಯಲ್ಲಿ ಈ ಸನ್ನಿವೇಶಗಳ ಸಂಪೂರ್ಣ ಚಿತ್ರೀಕರಣ ನಡೆಯಿತು. ದುಬಾರಿ ಕ್ಯಾಮೆರಾಗಳನ್ನು ಇಟ್ಟುಕೊಂಡು ಶೂಟಿಂಗ್​ ಮಾಡುವುದು ಎಷ್ಟು ಕಷ್ಟ ಆಗಿತ್ತು ಎಂಬುದನ್ನು ಛಾಯಾಗ್ರಾಹಕ ಅರವಿಂದ್​ ಕಶ್ಯಪ್​ ಅವರು ವಿವರಿಸಿದ್ದಾರೆ. ಈ ಮೇಕಿಂಗ್ ವಿಡಿಯೋ ನೋಡಿ ಅಭಿಮಾನಿಗಳ ನಿರೀಕ್ಷೆ ಹೆಚ್ಚಿದೆ. ‘ಕಾಂತಾರ’ ಸಿನಿಮಾ ಮೇಲಿರುವ ಕ್ರೇಜ್​ ಇನ್ನೂ ಜಾಸ್ತಿ ಆಗಿದೆ.

ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ ಮೂಲಕ ವಿಜಯ್​ ಕಿರಗಂದೂರು ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ರಿಷಬ್​ ಶೆಟ್ಟಿ ಜೊತೆ ಸಪ್ತಮಿ ಗೌಡ, ಕಿಶೋರ್​, ಅಚ್ಯುತ್​ ಕುಮಾರ್​, ಪ್ರಮೋದ್​ ಶೆಟ್ಟಿ ಮುಂತಾದವರು ‘ಕಾಂತಾರ’ ಚಿತ್ರದಲ್ಲಿ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು