Kantara: ‘ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರುತ್ತೆ ಅಂತ ರಿಷಬ್ ಶೆಟ್ಟಿ ಹೇಳಿದ್ದು ನಿಜವಲ್ಲ’: ನಟ ಚೇತನ್​ ತಕರಾರು

| Updated By: ಮದನ್​ ಕುಮಾರ್​

Updated on: Oct 19, 2022 | 10:43 AM

Kantara Movie | Bhoota Kola: ‘ಕಾಂತಾರ’ ಸಿನಿಮಾ ರಿಲೀಸ್​ ಆದ ಬಳಿಕ ಭೂತಕೋಲದ ಬಗ್ಗೆ ತಿಳಿದುಕೊಳ್ಳಲು ಜನರು ಆಸಕ್ತರಾಗಿದ್ದಾರೆ. ಇದೇ ವಿಷಯದ ಬಗ್ಗೆ ಚೇತನ್​ ಪೋಸ್ಟ್​ ಮಾಡಿದ್ದಾರೆ.

Kantara: ‘ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರುತ್ತೆ ಅಂತ ರಿಷಬ್ ಶೆಟ್ಟಿ ಹೇಳಿದ್ದು ನಿಜವಲ್ಲ’: ನಟ ಚೇತನ್​ ತಕರಾರು
ಚೇತನ್​ ಅಹಿಂಸಾ, ರಿಷಬ್​ ಶೆಟ್ಟಿ
Follow us on

ನಟ ‘ಆ ದಿನಗಳು’ ಚೇತನ್​ (Aa Dinagalu Chetan) ಅವರು ತಮ್ಮದೇ ದೃಷ್ಟಿಕೋನವನ್ನು ಮಂಡಿಸುವ ಮೂಲಕ ಆಗಾಗ ಸುದ್ದಿ ಆಗುತ್ತಾರೆ. ಆ ಕಾರಣದಿಂದ ಅವರು ಪರ-ವಿರೋಧಗಳನ್ನು ಕಟ್ಟಿಕೊಂಡಿದ್ದು ಕೂಡ ಉಂಟು. ಈಗ ಅವರು ಕಾಂತಾರ’ (Kantara) ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಈ ಚಿತ್ರದ ಕುರಿತು ತಮಗೆ ಅನಿಸಿದ್ದನ್ನು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ಅವರ ಪೋಸ್ಟ್​ ವೈರಲ್​ ಆಗಿದ್ದು, ಜನರು ಹಲವು ಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಚೇತನ್​ ಹೇಳುವ ಪ್ರಕಾರ, ‘ಕಾಂತಾರ’ ಚಿತ್ರದಲ್ಲಿ ತೋರಿಸಿದ ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುವುದಿಲ್ಲ. ಇದಕ್ಕೆ ಸಂಬಂಧಪಟ್ಟಂತೆ ರಿಷಬ್​ ಶೆಟ್ಟಿ (Rishab Shetty) ಅವರು ಹೇಳಿರುವುದು ನಿಜವಲ್ಲ ಎಂದು ಚೇತನ್​ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಈಗ ಚರ್ಚೆ ಶುರುವಾಗಿದೆ.

ಕನ್ನಡದ ‘ಕಾಂತಾರ’ ಸಿನಿಮಾ ದೇಶಾದ್ಯಂತ ಸದ್ದು ಮಾಡುತ್ತಿದೆ. ‘ಹೊಂಬಾಳೆ ಫಿಲ್ಮ್ಸ್​’ ಮೂಲಕ ಮೂಡಿಬಂದ ಈ ಚಿತ್ರವನ್ನು ರಿಷಬ್​ ಶೆಟ್ಟಿ ಅವರು ನಿರ್ದೇಶಿಸಿದ್ದಾರೆ. ಮುಖ್ಯ ಪಾತ್ರದಲ್ಲೂ ಅವರೇ ನಟಿಸಿದ್ದಾರೆ. ಬೇರೆ ಭಾಷೆಗಳಿಗೆ ಡಬ್​ ಆಗಿ ರಿಲೀಸ್​ ಆಗಿದ್ದು, ಎಲ್ಲರೂ ‘ಕಾಂತಾರ’ ಬಗ್ಗೆಯೇ ಮಾತನಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ನಟ ಚೇತನ್​ ಅವರು ಬೇರೊಂದು ಆಯಾಮವನ್ನು ಮುಂದಿಟ್ಟಿದ್ದಾರೆ.

ಭೂತಕೋಲ ಬಗ್ಗೆ ಚೇತನ್​ ಹೇಳಿದ್ದೇನು?

ಇದನ್ನೂ ಓದಿ
Kantara: ‘ಕಾಂತಾರ’ ಚಿತ್ರದಿಂದ ಅಲ್ಲು ಅರ್ಜುನ್​ ತಂದೆಗೆ ಭಾರಿ ಲಾಭ; ಎಷ್ಟಕ್ಕೆ ನಡೆಯಿತು ತೆಲುಗು ವ್ಯವಹಾರ?
Rishab Shetty: ಒಂದೇ ದಿನಕ್ಕೆ 15 ಕೋಟಿ ರೂಪಾಯಿ ಬಾಚಿದ ‘ಕಾಂತಾರ’; ಪರಭಾಷೆಯಲ್ಲಿ ಭರ್ಜರಿ ಕಮಾಯಿ
Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ
Rishab Shetty: ರಿಷಬ್​ ಶೆಟ್ಟಿ ಕಾಲಿಗೆ ಬಿದ್ದ ಖ್ಯಾತ ಯೂಟ್ಯೂಬರ್​; ಹಿಂದಿ ಪ್ರೇಕ್ಷಕರಲ್ಲಿ ಹೆಚ್ಚಿತು ‘ಕಾಂತಾರ’ ಸೆನ್ಸೇಷನ್​

‘ನಮ್ಮ ಕನ್ನಡದ ಚಲನಚಿತ್ರ ‘ಕಾಂತಾರ’ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ. ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ’ ಎಂದು ಚೇತನ್​ ಪೋಸ್ಟ್ ಮಾಡಿದ್ದಾರೆ.

ಪ್ರಚಾರದಲ್ಲಿ ರಿಷಬ್​ ಶೆಟ್ಟಿ ಬ್ಯುಸಿ:

ಚೇತನ್​ ಅವರ ಅಭಿಪ್ರಾಯಕ್ಕೆ ನಿರ್ದೇಶಕ ರಿಷಬ್​ ಶೆಟ್ಟಿ ಅವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬ ಕೌತುಕ ನಿರ್ಮಾಣ ಆಗಿದೆ. ‘ಕಾಂತಾರ’ ಸಿನಿಮಾ ರಿಲೀಸ್​ ಆದ ಬಳಿಕ ಭೂತಕೋಲದ ಬಗ್ಗೆ ತಿಳಿದುಕೊಳ್ಳಲು ಜನರು ಆಸಕ್ತರಾಗಿದ್ದಾರೆ. ಸದ್ಯ ರಿಷಬ್​ ಶೆಟ್ಟಿ ಅವರು ಸಿನಿಮಾದ ಯಶಸ್ಸನ್ನು ಸಂಭ್ರಮಿಸುವುದರ ಜೊತೆಗೆ ಪ್ರಚಾರ ಕಾರ್ಯದಲ್ಲೂ ಬ್ಯುಸಿ ಆಗಿದ್ದಾರೆ. ಆಂಧ್ರ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ ಅನೇಕ ಕಡೆಗಳಿಗೆ ತೆರಳಿ ಅವರು ಸಂದರ್ಶನ ನೀಡಿದ್ದಾರೆ.

ಭರ್ಜರಿ ಆಗಿದೆ ‘ಕಾಂತಾರ’ ಬಾಕ್ಸ್​ ಆಫೀಸ್​ ಕಲೆಕ್ಷನ್​:

ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಧೂಳೆಬ್ಬಿಸಿದೆ. ಎಲ್ಲ ಭಾಷೆಗಳಿಂದ 100 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಆಗಿದೆ. ಇಂದಿಗೂ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಒಟ್ಟಾರೆಯಾಗಿ ಈ ಚಿತ್ರ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:43 am, Wed, 19 October 22