AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ’ ಸಾಧನೆ; ಎರಡು ವಿಭಾಗದಲ್ಲಿ ಆಸ್ಕರ್​ಗೆ ಅರ್ಹತೆ ಪಡೆದ ರಿಷಬ್ ಸಿನಿಮಾ  

Kantara For Oscar: ಸ್ಕರ್ ಸದಸ್ಯರು​ ಮತ ಚಲಾಯಿಸಿದರೆ ‘ಕಾಂತಾರ’ ಸಿನಿಮಾ ಮುಖ್ಯ ನಾಮಿನೇಷನ್​ಗೆ ಎಂಟ್ರಿ ಕೊಡಲಿದೆ. 301 ಸಿನಿಮಾಗಳು ಅರ್ಹತೆ ಸುತ್ತನ್ನು ಪಾಸ್ ಮಾಡಿವೆ. 

‘ಕಾಂತಾರ’ ಸಾಧನೆ; ಎರಡು ವಿಭಾಗದಲ್ಲಿ ಆಸ್ಕರ್​ಗೆ ಅರ್ಹತೆ ಪಡೆದ ರಿಷಬ್ ಸಿನಿಮಾ  
ಕಾಂತಾರ ಚಿತ್ರದಲ್ಲಿ ರಿಷಬ್ ಶೆಟ್ಟಿ
TV9 Web
| Edited By: |

Updated on:Jan 10, 2023 | 12:19 PM

Share

ರಿಷಬ್ ಶೆಟ್ಟಿ (Rishab Shetty) ನಟನೆಯ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಈಗ ಹೊಸ ಮೈಲಿಗಲ್ಲು ಸ್ಥಾಪಿಸುವ ಸೂಚನೆ ನೀಡಿದೆ. ಈ ಚಿತ್ರ ಈಗ ಆಸ್ಕರ್​ ರೇಸ್​​ಗೆ ಎಂಟ್ರಿ ಕೊಟ್ಟಿದೆ. ಅತ್ಯುತ್ತಮ ಚಿತ್ರ ಹಾಗೂ ಅತ್ಯುತ್ತಮ ನಟ ವಿಭಾಗದಲ್ಲಿ ‘ಕಾಂತಾರಾ’ ಅರ್ಹತೆ ಸುತ್ತನ್ನು ಪಾಸ್ ಮಾಡಿದೆ. ಅಂದರೆ, ಆಸ್ಕರ್ ಸದಸ್ಯರು​ ಮತ ಚಲಾಯಿಸಿದರೆ ‘ಕಾಂತಾರ’ ಸಿನಿಮಾ (Kantara Movie) ಮುಖ್ಯ ನಾಮಿನೇಷನ್​ಗೆ ಎಂಟ್ರಿ ಕೊಡಲಿದೆ. 301 ಸಿನಿಮಾಗಳು ಅರ್ಹತೆ ಸುತ್ತನ್ನು ಪಾಸ್ ಮಾಡಿವೆ.

ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್​ ಟ್ವೀಟ್ ಮಾಡಿದೆ. ‘ಕಾಂತಾರ ಸಿನಿಮಾ 2 ಆಸ್ಕರ್ ಅರ್ಹತೆ ಪಡೆದಿರುವ ವಿಚಾರ ತಿಳಿಸಲು ಸಂತಸವಾಗುತ್ತಿದೆ. ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ’ ಎಂದು ಬರೆದುಕೊಳ್ಳಲಾಗಿದೆ. ಇತ್ತೀಚೆಗಷ್ಟೇ ‘ಕಾಂತಾರ’ ಸಿನಿಮಾ 100 ದಿನ ಪೂರೈಸಿತ್ತು. ಈ ಸಂತಸವನ್ನು ಚಿತ್ರತಂಡ ಹಂಚಿಕೊಂಡಿತ್ತು. ಅದೇ ರೀತಿ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಕೂಡ ಆಸ್ಕರ್ ಅರ್ಹತೆ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.

ಟಿವಿಯಲ್ಲಿ ಕಾಂತಾರ

ಟಿವಿಯಲ್ಲಿ ‘ಕಾಂತಾರ’ ಚಿತ್ರ ಯಾವಾಗ ಪ್ರಸಾರ ಆಗಲಿದೆ ಎಂಬ ಕುತೂಹಲ ಇತ್ತು. ಇದಕ್ಕೆ ಉತ್ತರ ಸಿಕ್ಕಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಈ ಚಿತ್ರ ಪ್ರಸಾರ ಕಾಣಲಿದೆ. ‘ಹೊಂಬಾಳೆ ಫಿಲ್ಮ್ಸ್​​’ ಬ್ಯಾನರ್​ ಅಡಿಯಲ್ಲಿ ಮೂಡಿಬಂದ ‘ಕಾಂತಾರ’ ಚಿತ್ರದಲ್ಲಿ ತುಳುನಾಡಿನ ಸಂಸ್ಕೃತಿಯಾದ ಕಂಬಳ, ಭೂತಕೋಲ ಮುಂತಾದ ವಿಚಾರಗಳ ಬಗ್ಗೆ ಹೇಳಲಾಗಿದೆ. ರಿಷಬ್​ ಶೆಟ್ಟಿ ಅವರಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ. ಇನ್ನುಳಿದ ಪ್ರಮುಖ ಪಾತ್ರಗಳಲ್ಲಿ ಅಚ್ಯುತ್​ ಕುಮಾರ್​, ಪ್ರಮೋದ್​​ ಶೆಟ್ಟಿ, ಕಿಶೋರ್​ ಮುಂತಾದವರು ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:43 am, Tue, 10 January 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ