AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ‘ಕಾಂತಾರ’ ಶಿವನ ಪಾತ್ರದಲ್ಲಿ ಪುನೀತ್​; ಹೇಗಿದೆ ನೋಡಿ ಅಭಿಮಾನಿ ಕಲ್ಪನೆಯಲ್ಲಿ ಮೂಡಿದ ಪೋಸ್ಟರ್​

Puneeth Rajkumar | Kantara Movie: ‘ಕಾಂತಾರ’ ಚಿತ್ರದ ಕಥಾನಾಯಕ ಶಿವನ ಪಾತ್ರವನ್ನು ಪುನೀತ್​ ನಿರ್ವಹಿಸಿದ್ದರೆ ಹೇಗಿರುತ್ತಿತ್ತು ಎಂದು ಈ ರೀತಿಯಾಗಿ ಕಲ್ಪಿಸಿಕೊಳ್ಳಲಾಗಿದೆ. ಇದನ್ನು ನೋಡಿ ಅಭಿಮಾನಿಗಳು ಎಮೋಷನಲ್​ ಆಗುತ್ತಿದ್ದಾರೆ.

Kantara: ‘ಕಾಂತಾರ’ ಶಿವನ ಪಾತ್ರದಲ್ಲಿ ಪುನೀತ್​; ಹೇಗಿದೆ ನೋಡಿ ಅಭಿಮಾನಿ ಕಲ್ಪನೆಯಲ್ಲಿ ಮೂಡಿದ ಪೋಸ್ಟರ್​
ಡಿಜಿಟಲ್ ಆರ್ಟಿಸ್ಟ್ ಕುಶಾಲ್ ಹಿರೇಮಠ್ ರಚಿಸಿದ ಪೋಸ್ಟರ್
Follow us
TV9 Web
| Updated By: ಮದನ್​ ಕುಮಾರ್​

Updated on:Nov 11, 2022 | 9:12 AM

ತುಳುನಾಡಿನ ಸಂಸ್ಕೃತಿಯನ್ನು ಸಾರುವ ‘ಕಾಂತಾರ’ (Kantara) ಸಿನಿಮಾ ಭರ್ಜರಿ ಗೆಲುವು ಕಂಡಿದೆ. ಕನ್ನಡ ಚಿತ್ರರಂಗಕ್ಕೆ ಈ ಸಿನಿಮಾ ಹೆಮ್ಮೆ ತಂದಿದೆ. ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಗೆ ಬಹುದೊಡ್ಡ ಗೆಲುವು ಸಿಕ್ಕಿದೆ. ರಿಷಬ್​ ಶೆಟ್ಟಿ (Rishab Shetty) ನಟನೆ ಮತ್ತು ನಿರ್ದೇಶನದ ಬಗ್ಗೆ ಪರಭಾಷೆ ಮಂದಿ ಕೂಡ ಶಹಭಾಷ್​ ಎಂದಿದ್ದಾರೆ. ಗಲ್ಲಾ ಪೆಟ್ಟಿಗೆಯಲ್ಲಿ ಈ ಸಿನಿಮಾ 300 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಆರಂಭದಲ್ಲಿ ಈ ಕಥೆಯನ್ನು ಪುನೀತ್ ರಾಜ್​ಕುಮಾರ್ ಅವರಿಗೆ ಹೇಳಲಾಗಿತ್ತು. ಕಾರಣಾಂತರ ಅವರು ಈ ಚಿತ್ರದಲ್ಲಿ ನಟಿಸಲಿಲ್ಲ. ಒಂದು ವೇಳೆ ನಟಿಸಿದ್ದರೆ ಅವರ ಗೆಟಪ್​ ಹೇಗಿರುತ್ತಿತ್ತು? ಕಲಾವಿದರೊಬ್ಬರ ಕಲ್ಪನೆಯಲ್ಲಿ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ‘ಕಾಂತಾರ’ ಗೆಟಪ್​ನಲ್ಲಿ ಪುನೀತ್​ ರಾಜ್​ಕುಮಾರ್ (Puneeth Rajkumar) ಅವರ ಪೋಸ್ಟರ್​ ಸಿದ್ಧಗೊಂಡಿದ್ದು, ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಡಿಜಿಟಲ್​ ಆರ್ಟಿಸ್ಟ್​ ಕುಶಾಲ್​ ಹಿರೇಮಠ್​ ಅವರು ಈ ಪೋಸ್ಟರ್​ ರಚಿಸಿದ್ದಾರೆ. ಪುನೀತ್​ ಅವರ ಬೇರೆ ಫೋಟೋವನ್ನು ಬಳಸಿಕೊಂಡು ಈ ರೀತಿ ವಿನ್ಯಾಸ ಮಾಡಲಾಗಿದೆ. ‘ಕಾಂತಾರ’ ಚಿತ್ರದ ಕಥಾನಾಯಕ ಶಿವನ ಪಾತ್ರವನ್ನು ಪುನೀತ್​ ನಿರ್ವಹಿಸಿದ್ದರೆ ಅವರ ಗೆಟಪ್​ ಹೇಗಿರುತ್ತಿತ್ತು ಎಂದು ಈ ರೀತಿಯಾಗಿ ಅವರು ಕಲ್ಪಿಸಿಕೊಂಡಿದ್ದಾರೆ. ಈ ಫೋಟೋ ನೋಡಿ ಅಪ್ಪು ಅಭಿಮಾನಿಗಳು ಎಮೋಷನಲ್​ ಆಗುತ್ತಿದ್ದಾರೆ.

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

‘ಹೊಂಬಾಳೆ ಫಿಲ್ಮ್ಸ್​’ ನಿರ್ಮಾಣ ಸಂಸ್ಥೆ ಜೊತೆಗೆ ಪುನೀತ್​ ರಾಜ್​ಕುಮಾರ್​ ಅವರು ಆಪ್ತ ಒಡನಾಟ ಹೊಂದಿದ್ದಾರೆ. ‘ಕಾಂತಾರ’ ಚಿತ್ರವನ್ನು ಅವರೇ ಮಾಡಬೇಕು ಎಂದು ಆರಂಭದಲ್ಲಿ ಅಂದುಕೊಳ್ಳಲಾಗಿತ್ತು. ಆದರೆ ಈ ಪಾತ್ರಕ್ಕೆ ರಿಷಬ್​ ಶೆಟ್ಟಿ ಅವರು ಸೂಕ್ತ ಎಂದು ಸ್ವತಃ ಪುನೀತ್​ ಸೂಚಿಸಿದ ಬಳಿಕ ಆ ಪಾತ್ರ ರಿಷಬ್​ ಪಾಲಾಯಿತು. ಇಂದು ‘ಕಾಂತಾರ’ ಎಲ್ಲೆಡೆ ಜಯಭೇರಿ ಭಾರಿಸುತ್ತಿದೆ. ಈ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಪುನೀತ್​ ರಾಜ್​ಕುಮಾರ್​ ಅವರು ನಮ್ಮೊಂದಿಗೆ ಇಲ್ಲವಲ್ಲ ಎಂದು ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

ಕನ್ನಡ ಪಾತ್ರವಲ್ಲದೇ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗೂ ಡಬ್​ ಆಗಿ ‘ಕಾಂತಾರ’ ತೆರೆಕಂಡಿದೆ. ಹಿಂದಿ ಪ್ರೇಕ್ಷಕರು ಈ ಸಿನಿಮಾವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಉತ್ತರ ಭಾರತದಲ್ಲಿ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಹಿಂದಿ ವರ್ಷನ್​ನಿಂದ ಈವರೆಗೂ 70 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ. ರಿಷಬ್​ ಶೆಟ್ಟಿ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿ ಮಿಂಚುತ್ತಿದ್ದಾರೆ. ಒಂದು ವೇಳೆ ಪುನೀತ್​ ರಾಜ್​ಕುಮಾರ್​ ಅವರು ಇದ್ದಿದ್ದರೆ ಈ ಚಿತ್ರದ ಗೆಲುವನ್ನು ಖಂಡಿತ ಸಂಭ್ರಮಿಸುತ್ತಿದ್ದರು.

ಪುನೀತ್​ ರಾಜ್​ಕುಮಾರ್​ ಅವರ ಕನಸಿನ ಪ್ರಾಜೆಕ್ಟ್​ ‘ಗಂಧದ ಗುಡಿ’ ಬಿಡುಗಡೆಯಾಗಿ ಮೆಚ್ಚುಗೆ ಪಡೆದುಕೊಂಡಿದೆ. ಕರ್ನಾಟಕದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ಬಗ್ಗೆ ತಿಳಿಸಿಕೊಡುವ ಈ ಸಾಕ್ಷ್ಯಚಿತ್ರಕ್ಕೆ ಅಮೋಘವರ್ಷ ನಿರ್ದೇಶನ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:12 am, Fri, 11 November 22

ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ