AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ‘ಕಾಂತಾರ’ ಶಿವನ ಪಾತ್ರದಲ್ಲಿ ಪುನೀತ್​; ಹೇಗಿದೆ ನೋಡಿ ಅಭಿಮಾನಿ ಕಲ್ಪನೆಯಲ್ಲಿ ಮೂಡಿದ ಪೋಸ್ಟರ್​

Puneeth Rajkumar | Kantara Movie: ‘ಕಾಂತಾರ’ ಚಿತ್ರದ ಕಥಾನಾಯಕ ಶಿವನ ಪಾತ್ರವನ್ನು ಪುನೀತ್​ ನಿರ್ವಹಿಸಿದ್ದರೆ ಹೇಗಿರುತ್ತಿತ್ತು ಎಂದು ಈ ರೀತಿಯಾಗಿ ಕಲ್ಪಿಸಿಕೊಳ್ಳಲಾಗಿದೆ. ಇದನ್ನು ನೋಡಿ ಅಭಿಮಾನಿಗಳು ಎಮೋಷನಲ್​ ಆಗುತ್ತಿದ್ದಾರೆ.

Kantara: ‘ಕಾಂತಾರ’ ಶಿವನ ಪಾತ್ರದಲ್ಲಿ ಪುನೀತ್​; ಹೇಗಿದೆ ನೋಡಿ ಅಭಿಮಾನಿ ಕಲ್ಪನೆಯಲ್ಲಿ ಮೂಡಿದ ಪೋಸ್ಟರ್​
ಡಿಜಿಟಲ್ ಆರ್ಟಿಸ್ಟ್ ಕುಶಾಲ್ ಹಿರೇಮಠ್ ರಚಿಸಿದ ಪೋಸ್ಟರ್
TV9 Web
| Edited By: |

Updated on:Nov 11, 2022 | 9:12 AM

Share

ತುಳುನಾಡಿನ ಸಂಸ್ಕೃತಿಯನ್ನು ಸಾರುವ ‘ಕಾಂತಾರ’ (Kantara) ಸಿನಿಮಾ ಭರ್ಜರಿ ಗೆಲುವು ಕಂಡಿದೆ. ಕನ್ನಡ ಚಿತ್ರರಂಗಕ್ಕೆ ಈ ಸಿನಿಮಾ ಹೆಮ್ಮೆ ತಂದಿದೆ. ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಗೆ ಬಹುದೊಡ್ಡ ಗೆಲುವು ಸಿಕ್ಕಿದೆ. ರಿಷಬ್​ ಶೆಟ್ಟಿ (Rishab Shetty) ನಟನೆ ಮತ್ತು ನಿರ್ದೇಶನದ ಬಗ್ಗೆ ಪರಭಾಷೆ ಮಂದಿ ಕೂಡ ಶಹಭಾಷ್​ ಎಂದಿದ್ದಾರೆ. ಗಲ್ಲಾ ಪೆಟ್ಟಿಗೆಯಲ್ಲಿ ಈ ಸಿನಿಮಾ 300 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಆರಂಭದಲ್ಲಿ ಈ ಕಥೆಯನ್ನು ಪುನೀತ್ ರಾಜ್​ಕುಮಾರ್ ಅವರಿಗೆ ಹೇಳಲಾಗಿತ್ತು. ಕಾರಣಾಂತರ ಅವರು ಈ ಚಿತ್ರದಲ್ಲಿ ನಟಿಸಲಿಲ್ಲ. ಒಂದು ವೇಳೆ ನಟಿಸಿದ್ದರೆ ಅವರ ಗೆಟಪ್​ ಹೇಗಿರುತ್ತಿತ್ತು? ಕಲಾವಿದರೊಬ್ಬರ ಕಲ್ಪನೆಯಲ್ಲಿ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ‘ಕಾಂತಾರ’ ಗೆಟಪ್​ನಲ್ಲಿ ಪುನೀತ್​ ರಾಜ್​ಕುಮಾರ್ (Puneeth Rajkumar) ಅವರ ಪೋಸ್ಟರ್​ ಸಿದ್ಧಗೊಂಡಿದ್ದು, ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಡಿಜಿಟಲ್​ ಆರ್ಟಿಸ್ಟ್​ ಕುಶಾಲ್​ ಹಿರೇಮಠ್​ ಅವರು ಈ ಪೋಸ್ಟರ್​ ರಚಿಸಿದ್ದಾರೆ. ಪುನೀತ್​ ಅವರ ಬೇರೆ ಫೋಟೋವನ್ನು ಬಳಸಿಕೊಂಡು ಈ ರೀತಿ ವಿನ್ಯಾಸ ಮಾಡಲಾಗಿದೆ. ‘ಕಾಂತಾರ’ ಚಿತ್ರದ ಕಥಾನಾಯಕ ಶಿವನ ಪಾತ್ರವನ್ನು ಪುನೀತ್​ ನಿರ್ವಹಿಸಿದ್ದರೆ ಅವರ ಗೆಟಪ್​ ಹೇಗಿರುತ್ತಿತ್ತು ಎಂದು ಈ ರೀತಿಯಾಗಿ ಅವರು ಕಲ್ಪಿಸಿಕೊಂಡಿದ್ದಾರೆ. ಈ ಫೋಟೋ ನೋಡಿ ಅಪ್ಪು ಅಭಿಮಾನಿಗಳು ಎಮೋಷನಲ್​ ಆಗುತ್ತಿದ್ದಾರೆ.

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

‘ಹೊಂಬಾಳೆ ಫಿಲ್ಮ್ಸ್​’ ನಿರ್ಮಾಣ ಸಂಸ್ಥೆ ಜೊತೆಗೆ ಪುನೀತ್​ ರಾಜ್​ಕುಮಾರ್​ ಅವರು ಆಪ್ತ ಒಡನಾಟ ಹೊಂದಿದ್ದಾರೆ. ‘ಕಾಂತಾರ’ ಚಿತ್ರವನ್ನು ಅವರೇ ಮಾಡಬೇಕು ಎಂದು ಆರಂಭದಲ್ಲಿ ಅಂದುಕೊಳ್ಳಲಾಗಿತ್ತು. ಆದರೆ ಈ ಪಾತ್ರಕ್ಕೆ ರಿಷಬ್​ ಶೆಟ್ಟಿ ಅವರು ಸೂಕ್ತ ಎಂದು ಸ್ವತಃ ಪುನೀತ್​ ಸೂಚಿಸಿದ ಬಳಿಕ ಆ ಪಾತ್ರ ರಿಷಬ್​ ಪಾಲಾಯಿತು. ಇಂದು ‘ಕಾಂತಾರ’ ಎಲ್ಲೆಡೆ ಜಯಭೇರಿ ಭಾರಿಸುತ್ತಿದೆ. ಈ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಪುನೀತ್​ ರಾಜ್​ಕುಮಾರ್​ ಅವರು ನಮ್ಮೊಂದಿಗೆ ಇಲ್ಲವಲ್ಲ ಎಂದು ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

ಕನ್ನಡ ಪಾತ್ರವಲ್ಲದೇ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗೂ ಡಬ್​ ಆಗಿ ‘ಕಾಂತಾರ’ ತೆರೆಕಂಡಿದೆ. ಹಿಂದಿ ಪ್ರೇಕ್ಷಕರು ಈ ಸಿನಿಮಾವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಉತ್ತರ ಭಾರತದಲ್ಲಿ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಹಿಂದಿ ವರ್ಷನ್​ನಿಂದ ಈವರೆಗೂ 70 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ. ರಿಷಬ್​ ಶೆಟ್ಟಿ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿ ಮಿಂಚುತ್ತಿದ್ದಾರೆ. ಒಂದು ವೇಳೆ ಪುನೀತ್​ ರಾಜ್​ಕುಮಾರ್​ ಅವರು ಇದ್ದಿದ್ದರೆ ಈ ಚಿತ್ರದ ಗೆಲುವನ್ನು ಖಂಡಿತ ಸಂಭ್ರಮಿಸುತ್ತಿದ್ದರು.

ಪುನೀತ್​ ರಾಜ್​ಕುಮಾರ್​ ಅವರ ಕನಸಿನ ಪ್ರಾಜೆಕ್ಟ್​ ‘ಗಂಧದ ಗುಡಿ’ ಬಿಡುಗಡೆಯಾಗಿ ಮೆಚ್ಚುಗೆ ಪಡೆದುಕೊಂಡಿದೆ. ಕರ್ನಾಟಕದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ಬಗ್ಗೆ ತಿಳಿಸಿಕೊಡುವ ಈ ಸಾಕ್ಷ್ಯಚಿತ್ರಕ್ಕೆ ಅಮೋಘವರ್ಷ ನಿರ್ದೇಶನ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:12 am, Fri, 11 November 22

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ