AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್ ರೇಸ್​ಗೆ ‘ಕಾಂತಾರ’, ಸಿನಿಮಾಗೆ ಪ್ರೀಕ್ವೆಲ್​; ವಿಜಯ್ ಕಿರಗಂದೂರು ಕೊಟ್ರು ಬಿಗ್​​ ಅಪ್​ಡೇಟ್

For Your Consideration ಮೂಲಕ ‘ಆರ್​ಆರ್​ಆರ್​’ ಸಿನಿಮಾ ಆಸ್ಕರ್​ ರೇಸ್​ಗೆ ಎಂಟ್ರಿ ಪಡೆಯಲು ಪ್ರಯತ್ನಿಸಿತ್ತು. ಈಗ ‘ಕಾಂತಾರ’ ಸಿನಿಮಾ ಕೂಡ ಇದೇ ರೀತಿಯ ಪ್ರಯತ್ನ ಮಾಡಿದೆ.

ಆಸ್ಕರ್ ರೇಸ್​ಗೆ ‘ಕಾಂತಾರ’, ಸಿನಿಮಾಗೆ ಪ್ರೀಕ್ವೆಲ್​; ವಿಜಯ್ ಕಿರಗಂದೂರು ಕೊಟ್ರು ಬಿಗ್​​ ಅಪ್​ಡೇಟ್
ವಿಜಯ್ ಕಿರಗಂದೂರು
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Dec 22, 2022 | 9:11 AM

Share

ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ ಬಗ್ಗೆ ದಿನಕ್ಕೊಂದು ಹೊಸ ವಿಚಾರ ಹುಟ್ಟಿಕೊಳ್ಳುತ್ತಿದೆ. ಈ ಸಿನಿಮಾ ದಿನಕ್ಕೊಂದು ದಾಖಲೆ ಮಾಡುತ್ತಲೇ ಇದೆ. ಈ ಚಿತ್ರ ನೋಡಿದ ಅನೇಕರು ಮಂತ್ರಮುಗ್ಧರಾಗಿದ್ದಾರೆ. ಒಟಿಟಿಗೆ ಕಾಲಿಟ್ಟ ಈ ಚಿತ್ರವನ್ನು ಪ್ರೇಕ್ಷಕರು ಹಲವು ಬಾರಿ ವೀಕ್ಷಣೆ ಮಾಡಿದ್ದಾರೆ. ಈಗ ರಿಷಬ್ ಶೆಟ್ಟಿ ಅವರ ‘ಕಾಂತಾರ’ (Kantara Movie) ಆಸ್ಕರ್​ ರೇಸ್​ಗೆ ಇಳಿಯಲು ಪ್ರಯತ್ನ ಮಾಡಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್​​ನ ವಿಜಯ್ ಕಿರಗಂದೂರು ಅವರು ಮಾಹಿತಿ ನೀಡಿದ್ದಾರೆ. ‘ಆರ್​ಆರ್​ಆರ್​’ ಮಾದರಿಯಲ್ಲೇ ‘ಕಾಂತಾರ’ ಕೂಡ ಆಸ್ಕರ್​ ರೇಸ್​ಗೆ ತೆರಳಲು ಪ್ರಯತ್ನಿಸಿದೆ. ಕನ್ನಡದ ಸಿನಿಮಾವೊಂದು ಆಸ್ಕರ್​ ರೇಸ್​ಗೆ ಇಳಿಯುತ್ತಿರುವುದು ಇದೇ ಮೊದಲು ಅನ್ನೋದು ವಿಶೇಷ.

ಫಿಲ್ಮ್​ ಫೆಡರೇಷನ್​ ಆಫ್​ ಇಂಡಿಯಾ’ ಕಡೆಯಿಂದ ‘ಆರ್​ಆರ್​ಆರ್​’ ಸಿನಿಮಾ ಆಸ್ಕರ್​ ಸ್ಪರ್ಧೆಗೆ ಅರ್ಹತೆ ಪಡೆದಿರಲಿಲ್ಲ. ಈ ಕಾರಣಕ್ಕೆ For Your Consideration ಮೂಲಕ ‘ಆರ್​ಆರ್​ಆರ್​’ ಸಿನಿಮಾ ಆಸ್ಕರ್​ ರೇಸ್​ಗೆ ಎಂಟ್ರಿ ಪಡೆಯಲು ಪ್ರಯತ್ನಿಸಿತ್ತು. ಈಗ ‘ಕಾಂತಾರ’ ಸಿನಿಮಾ ಕೂಡ ಇದೇ ರೀತಿಯ ಪ್ರಯತ್ನ ಮಾಡಿದೆ. ಇಂಡಿಯಾ ಟುಡೆಗೆ ನೀಡಿದ ಸಂದರ್ಶನದಲ್ಲಿ ವಿಜಯ್ ಅವರು ಈ ಬಗ್ಗೆ ಮಾತನಾಡಿದ್ದಾರೆ.

‘ಆಸ್ಕರ್​ ರೇಸ್​​ನಲ್ಲಿ ಸ್ಪರ್ಧೆ ಮಾಡಲು ನಾವು ಅರ್ಜಿ ಸಲ್ಲಿಕೆ ಮಾಡಿದ್ದೇವೆ. ಅಂತಿಮ ನಾಮನಿರ್ದೇಶನ ಪಟ್ಟಿ ಇನ್ನಷ್ಟೇ ಬರಬೇಕಿದೆ’ ಎಂದು ಅವರು ಹೇಳಿದ್ದಾರೆ. ಈ ಮೂಲಕ ಕುತೂಹಲ ಹೆಚ್ಚಿಸಿದ್ದಾರೆ. ‘ಕಾಂತಾರ’ ಚಿತ್ರಕ್ಕೆ ಸೀಕ್ವೆಲ್ ಬರಲಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಈ ಬಗ್ಗೆಯೂ ವಿಜಯ್ ಅವರು ಮಾತನಾಡಿದ್ದಾರೆ. ‘ರಿಷಬ್ ಶೆಟ್ಟಿ ಅವರು ಬೇರೆ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರು ಮರಳಿದ ನಂತರದಲ್ಲಿ ಈ ಸಿನಿಮಾಗೆ ಸೀಕ್ವೆಲ್ ಮಾಡಬೇಕೋ ಅಥವಾ ಪ್ರೀಕ್ವೆಲ್ ಮಾಡಬೇಕೋ ಎಂಬ ಬಗ್ಗೆ ಚರ್ಚೆ ಮಾಡುತ್ತೇವೆ. ‘ಕಾಂತಾರ 2’ ಮಾಡಲು ನಾವು ಪ್ಲ್ಯಾನ್ ಮಾಡಿಕೊಂಡಿರುವುದು ನಿಜ ಆದರೆ, ಅದಕ್ಕೆ ಟೈಮ್​​ಲೈನ್​’ ಎಂದಿದ್ದಾರೆ ವಿಜಯ್.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

ಇದನ್ನೂ ಓದಿ: Lionel Messi: ‘ಕಾಂತಾರ’ ರೀತಿ ಕಾಣಿಸಿದ ಮೆಸ್ಸಿ-ಮರಡೋನಾ; ವಿಶ್ವ ಮಟ್ಟದಲ್ಲಿ ಕನ್ನಡ ಸಿನಿಮಾ ಕ್ರೇಜ್​

‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ರಿಷಬ್ ಈ ಚಿತ್ರಕ್ಕಾಗಿ ನಾಲ್ಕು ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. ಹಲವು ಆಫರ್​ಗಳು ಅವರನ್ನು ಅರಸಿ ಬರುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:12 am, Thu, 22 December 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!