AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್ ರೇಸ್​ಗೆ ‘ಕಾಂತಾರ’, ಸಿನಿಮಾಗೆ ಪ್ರೀಕ್ವೆಲ್​; ವಿಜಯ್ ಕಿರಗಂದೂರು ಕೊಟ್ರು ಬಿಗ್​​ ಅಪ್​ಡೇಟ್

For Your Consideration ಮೂಲಕ ‘ಆರ್​ಆರ್​ಆರ್​’ ಸಿನಿಮಾ ಆಸ್ಕರ್​ ರೇಸ್​ಗೆ ಎಂಟ್ರಿ ಪಡೆಯಲು ಪ್ರಯತ್ನಿಸಿತ್ತು. ಈಗ ‘ಕಾಂತಾರ’ ಸಿನಿಮಾ ಕೂಡ ಇದೇ ರೀತಿಯ ಪ್ರಯತ್ನ ಮಾಡಿದೆ.

ಆಸ್ಕರ್ ರೇಸ್​ಗೆ ‘ಕಾಂತಾರ’, ಸಿನಿಮಾಗೆ ಪ್ರೀಕ್ವೆಲ್​; ವಿಜಯ್ ಕಿರಗಂದೂರು ಕೊಟ್ರು ಬಿಗ್​​ ಅಪ್​ಡೇಟ್
ವಿಜಯ್ ಕಿರಗಂದೂರು
TV9 Web
| Edited By: |

Updated on:Dec 22, 2022 | 9:11 AM

Share

ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ ಬಗ್ಗೆ ದಿನಕ್ಕೊಂದು ಹೊಸ ವಿಚಾರ ಹುಟ್ಟಿಕೊಳ್ಳುತ್ತಿದೆ. ಈ ಸಿನಿಮಾ ದಿನಕ್ಕೊಂದು ದಾಖಲೆ ಮಾಡುತ್ತಲೇ ಇದೆ. ಈ ಚಿತ್ರ ನೋಡಿದ ಅನೇಕರು ಮಂತ್ರಮುಗ್ಧರಾಗಿದ್ದಾರೆ. ಒಟಿಟಿಗೆ ಕಾಲಿಟ್ಟ ಈ ಚಿತ್ರವನ್ನು ಪ್ರೇಕ್ಷಕರು ಹಲವು ಬಾರಿ ವೀಕ್ಷಣೆ ಮಾಡಿದ್ದಾರೆ. ಈಗ ರಿಷಬ್ ಶೆಟ್ಟಿ ಅವರ ‘ಕಾಂತಾರ’ (Kantara Movie) ಆಸ್ಕರ್​ ರೇಸ್​ಗೆ ಇಳಿಯಲು ಪ್ರಯತ್ನ ಮಾಡಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್​​ನ ವಿಜಯ್ ಕಿರಗಂದೂರು ಅವರು ಮಾಹಿತಿ ನೀಡಿದ್ದಾರೆ. ‘ಆರ್​ಆರ್​ಆರ್​’ ಮಾದರಿಯಲ್ಲೇ ‘ಕಾಂತಾರ’ ಕೂಡ ಆಸ್ಕರ್​ ರೇಸ್​ಗೆ ತೆರಳಲು ಪ್ರಯತ್ನಿಸಿದೆ. ಕನ್ನಡದ ಸಿನಿಮಾವೊಂದು ಆಸ್ಕರ್​ ರೇಸ್​ಗೆ ಇಳಿಯುತ್ತಿರುವುದು ಇದೇ ಮೊದಲು ಅನ್ನೋದು ವಿಶೇಷ.

ಫಿಲ್ಮ್​ ಫೆಡರೇಷನ್​ ಆಫ್​ ಇಂಡಿಯಾ’ ಕಡೆಯಿಂದ ‘ಆರ್​ಆರ್​ಆರ್​’ ಸಿನಿಮಾ ಆಸ್ಕರ್​ ಸ್ಪರ್ಧೆಗೆ ಅರ್ಹತೆ ಪಡೆದಿರಲಿಲ್ಲ. ಈ ಕಾರಣಕ್ಕೆ For Your Consideration ಮೂಲಕ ‘ಆರ್​ಆರ್​ಆರ್​’ ಸಿನಿಮಾ ಆಸ್ಕರ್​ ರೇಸ್​ಗೆ ಎಂಟ್ರಿ ಪಡೆಯಲು ಪ್ರಯತ್ನಿಸಿತ್ತು. ಈಗ ‘ಕಾಂತಾರ’ ಸಿನಿಮಾ ಕೂಡ ಇದೇ ರೀತಿಯ ಪ್ರಯತ್ನ ಮಾಡಿದೆ. ಇಂಡಿಯಾ ಟುಡೆಗೆ ನೀಡಿದ ಸಂದರ್ಶನದಲ್ಲಿ ವಿಜಯ್ ಅವರು ಈ ಬಗ್ಗೆ ಮಾತನಾಡಿದ್ದಾರೆ.

‘ಆಸ್ಕರ್​ ರೇಸ್​​ನಲ್ಲಿ ಸ್ಪರ್ಧೆ ಮಾಡಲು ನಾವು ಅರ್ಜಿ ಸಲ್ಲಿಕೆ ಮಾಡಿದ್ದೇವೆ. ಅಂತಿಮ ನಾಮನಿರ್ದೇಶನ ಪಟ್ಟಿ ಇನ್ನಷ್ಟೇ ಬರಬೇಕಿದೆ’ ಎಂದು ಅವರು ಹೇಳಿದ್ದಾರೆ. ಈ ಮೂಲಕ ಕುತೂಹಲ ಹೆಚ್ಚಿಸಿದ್ದಾರೆ. ‘ಕಾಂತಾರ’ ಚಿತ್ರಕ್ಕೆ ಸೀಕ್ವೆಲ್ ಬರಲಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಈ ಬಗ್ಗೆಯೂ ವಿಜಯ್ ಅವರು ಮಾತನಾಡಿದ್ದಾರೆ. ‘ರಿಷಬ್ ಶೆಟ್ಟಿ ಅವರು ಬೇರೆ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರು ಮರಳಿದ ನಂತರದಲ್ಲಿ ಈ ಸಿನಿಮಾಗೆ ಸೀಕ್ವೆಲ್ ಮಾಡಬೇಕೋ ಅಥವಾ ಪ್ರೀಕ್ವೆಲ್ ಮಾಡಬೇಕೋ ಎಂಬ ಬಗ್ಗೆ ಚರ್ಚೆ ಮಾಡುತ್ತೇವೆ. ‘ಕಾಂತಾರ 2’ ಮಾಡಲು ನಾವು ಪ್ಲ್ಯಾನ್ ಮಾಡಿಕೊಂಡಿರುವುದು ನಿಜ ಆದರೆ, ಅದಕ್ಕೆ ಟೈಮ್​​ಲೈನ್​’ ಎಂದಿದ್ದಾರೆ ವಿಜಯ್.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

ಇದನ್ನೂ ಓದಿ: Lionel Messi: ‘ಕಾಂತಾರ’ ರೀತಿ ಕಾಣಿಸಿದ ಮೆಸ್ಸಿ-ಮರಡೋನಾ; ವಿಶ್ವ ಮಟ್ಟದಲ್ಲಿ ಕನ್ನಡ ಸಿನಿಮಾ ಕ್ರೇಜ್​

‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ರಿಷಬ್ ಈ ಚಿತ್ರಕ್ಕಾಗಿ ನಾಲ್ಕು ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. ಹಲವು ಆಫರ್​ಗಳು ಅವರನ್ನು ಅರಸಿ ಬರುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:12 am, Thu, 22 December 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ