AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಭಾಷೆಯಲ್ಲಿ 100 ಕೋಟಿ ರೂಪಾಯಿ ಬಾಚಿದ ‘ಕಾಂತಾರ’; ಹಿಂದಿಯಲ್ಲಿ ನಿಂತಿಲ್ಲ ಅಬ್ಬರ

‘ಕಾಂತಾರ’ ಸಿನಿಮಾ ಸೆಪ್ಟೆಂಬರ್ 30ರಂದು ಕನ್ನಡದಲ್ಲಿ ರಿಲೀಸ್ ಆಯಿತು. ಇದಾದ ಕೆಲ ವಾರಗಳ ಬಳಿಕ ಹಿಂದಿಯಲ್ಲಿ, ತೆಲುಗಿನಲ್ಲಿ ಹಾಗೂ ತಮಿಳಿನಲ್ಲಿ ಸಿನಿಮಾ ಬಿಡುಗಡೆ ಆಯಿತು. ಈ ಚಿತ್ರ ನೋಡಿದ ಪರಭಾಷಿಗರು ಭೇಷ್ ಎಂದರು.

ಪರಭಾಷೆಯಲ್ಲಿ 100 ಕೋಟಿ ರೂಪಾಯಿ ಬಾಚಿದ ‘ಕಾಂತಾರ’; ಹಿಂದಿಯಲ್ಲಿ ನಿಂತಿಲ್ಲ ಅಬ್ಬರ
ಕಾಂತಾರ
TV9 Web
| Edited By: |

Updated on: Oct 28, 2022 | 7:40 PM

Share

‘ಕಾಂತಾರ’ ಸಿನಿಮಾ (Kantara Movie) ನಿತ್ಯ ಹೊಸ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಕಡಿಮೆ ಬಜೆಟ್​ನಲ್ಲಿ ಸಿದ್ಧವಾದ ಈ ಚಿತ್ರ ನೂರಾರು ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಚಿತ್ರದಿಂದ ಹೊಂಬಾಳೆ ಫಿಲ್ಮ್ಸ್​ಗೆ ಒಳ್ಳೆಯ ಲಾಭ ಆಗಿದೆ. ಈ ಚಿತ್ರದಿಂದ ರಿಷಬ್ ಶೆಟ್ಟಿ (Rishab Shetty) ಅವರು ವಿಶ್ವ ಮಟ್ಟದಲ್ಲಿ ಖ್ಯಾತಿ ಪಡೆದರು. ‘ಕಾಂತಾರ’ ರಿಲೀಸ್ ಆಗಿ ಒಂದು ತಿಂಗಳಾಗಿದೆ. ಆದಾಗ್ಯೂ ಈ ಚಿತ್ರದ ಅಬ್ಬರ ಕಡಿಮೆ ಆಗುತ್ತಿಲ್ಲ. ಸಿನಿಮಾ ನೋಡಿದ ಬಹುತೇಕರು ಮೆಚ್ಚುಗೆಯ ಮಾತನ್ನು ಆಡಿದ್ದಾರೆ. ಡಬ್ ಆಗಿ ತೆರೆಕಂಡ ಮೂರು ಭಾಷೆಗಳಲ್ಲಿ ‘ಕಾಂತಾರ’ 100 ಕೋಟಿ ರೂಪಾಯಿ ಬಾಚಿದೆ. ಈ ಮೂಲಕ ಚಿತ್ರ ಒಳ್ಳೆಯ ಕಮಾಯಿ ಮಾಡುತ್ತಿದೆ.

‘ಕಾಂತಾರ’ ಸಿನಿಮಾ ಸೆಪ್ಟೆಂಬರ್ 30ರಂದು ಕನ್ನಡದಲ್ಲಿ ರಿಲೀಸ್ ಆಯಿತು. ಇದಾದ ಕೆಲ ವಾರಗಳ ಬಳಿಕ ಹಿಂದಿಯಲ್ಲಿ, ತೆಲುಗಿನಲ್ಲಿ ಹಾಗೂ ತಮಿಳಿನಲ್ಲಿ ಸಿನಿಮಾ ಬಿಡುಗಡೆ ಆಯಿತು. ಈ ಚಿತ್ರ ನೋಡಿದ ಪರಭಾಷಿಗರು ಭೇಷ್ ಎಂದರು. ಮೂಲಗಳ ಪ್ರಕಾರ ತೆಲುಗು, ತಮಿಳು ಹಾಗೂ ಹಿಂದಿ ಸೇರಿ ಈ ಚಿತ್ರ 100 ಕೋಟಿ ರೂಪಾಯಿ ಬಾಚಿಕೊಂಡಿದೆ.

ಹಿಂದಿಯಲ್ಲಿ ಈ ಚಿತ್ರ ಅಬ್ಬರಿಸುತ್ತಿದೆ. ಈ ಬಗ್ಗೆ ಪಕ್ಕಾ ಲೆಕ್ಕ ಸಿಕ್ಕಿದೆ. ಗುರುವಾರ (ಅಕ್ಟೋಬರ್ 27) ಈ ಚಿತ್ರ ಬಾಲಿವುಡ್​ನಲ್ಲಿ 2.60 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಸಿನಿಮಾದ ಹಿಂದಿ ಭಾಗದ ಕಲೆಕ್ಷನ್ 31.70 ಕೋಟಿ ರೂಪಾಯಿ ಆಗಿದೆ. ಇದು ಚಿತ್ರತಂಡದ ಖುಷಿಯನ್ನು ಹೆಚ್ಚಿಸಿದೆ. ಕನ್ನಡದ ಚಿತ್ರ ಬಾಲಿವುಡ್​ನಲ್ಲಿ ಇಷ್ಟು ಒಳ್ಳೆಯ ಗಳಿಕೆ ಮಾಡುತ್ತಿರುವುದು ಕರ್ನಾಟಕದವರ ಪಾಲಿಗೆ ಹೆಮ್ಮೆಯ ವಿಚಾರ.

ಇದನ್ನೂ ಓದಿ: ಬಾಲಿವುಡ್​ಗೆ ಖುಷಿ ತಂದ ದೀಪಾವಳಿ; ‘ಕಾಂತಾರ’ ಎದುರು ‘ರಾಮ್ ಸೇತು’, ‘ಥ್ಯಾಂಕ್​ ಗಾಡ್’ ಕಲೆಕ್ಷನ್ ಎಷ್ಟು?

ಈ ಮೊದಲು ಹಿಂದಿಗೆ ಡಬ್ ಆಗಿ ತೆರೆಕಂಡಿದ್ದ ‘ಕೆಜಿಎಫ್’ ಚಿತ್ರ 44 ಕೋಟಿ ರೂಪಾಯಿ ಬಾಚಿಕೊಂಡಿತ್ತು. ‘ಕಾಂತಾರ’ ಚಿತ್ರ ನುಗ್ಗುತ್ತಿರುವ ವೇಗ ನೋಡಿದರೆ ಈ ಸಿನಿಮಾ ಬಾಲಿವುಡ್​ನಲ್ಲಿ ‘ಕೆಜಿಎಫ್’ ದಾಖಲೆಯನ್ನು ಮುರಿಯುವ ಎಲ್ಲಾ ಸಾಧ್ಯತೆ ಗೋಚರವಾಗುತ್ತಿದೆ. ‘ಕಾಂತಾರ’ ಚಿತ್ರಮಂದಿರದಲ್ಲಿ ಅಬ್ಬರಿಸುತ್ತಿರುವ ಮಧ್ಯೆ ಈ ಚಿತ್ರ ಒಟಿಟಿಗೆ ಯಾವಾಗ ತೆರೆಗೆ ಬರಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ