AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಭಾಷೆಯಲ್ಲಿ 100 ಕೋಟಿ ರೂಪಾಯಿ ಬಾಚಿದ ‘ಕಾಂತಾರ’; ಹಿಂದಿಯಲ್ಲಿ ನಿಂತಿಲ್ಲ ಅಬ್ಬರ

‘ಕಾಂತಾರ’ ಸಿನಿಮಾ ಸೆಪ್ಟೆಂಬರ್ 30ರಂದು ಕನ್ನಡದಲ್ಲಿ ರಿಲೀಸ್ ಆಯಿತು. ಇದಾದ ಕೆಲ ವಾರಗಳ ಬಳಿಕ ಹಿಂದಿಯಲ್ಲಿ, ತೆಲುಗಿನಲ್ಲಿ ಹಾಗೂ ತಮಿಳಿನಲ್ಲಿ ಸಿನಿಮಾ ಬಿಡುಗಡೆ ಆಯಿತು. ಈ ಚಿತ್ರ ನೋಡಿದ ಪರಭಾಷಿಗರು ಭೇಷ್ ಎಂದರು.

ಪರಭಾಷೆಯಲ್ಲಿ 100 ಕೋಟಿ ರೂಪಾಯಿ ಬಾಚಿದ ‘ಕಾಂತಾರ’; ಹಿಂದಿಯಲ್ಲಿ ನಿಂತಿಲ್ಲ ಅಬ್ಬರ
ಕಾಂತಾರ
TV9 Web
| Edited By: |

Updated on: Oct 28, 2022 | 7:40 PM

Share

‘ಕಾಂತಾರ’ ಸಿನಿಮಾ (Kantara Movie) ನಿತ್ಯ ಹೊಸ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಕಡಿಮೆ ಬಜೆಟ್​ನಲ್ಲಿ ಸಿದ್ಧವಾದ ಈ ಚಿತ್ರ ನೂರಾರು ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಚಿತ್ರದಿಂದ ಹೊಂಬಾಳೆ ಫಿಲ್ಮ್ಸ್​ಗೆ ಒಳ್ಳೆಯ ಲಾಭ ಆಗಿದೆ. ಈ ಚಿತ್ರದಿಂದ ರಿಷಬ್ ಶೆಟ್ಟಿ (Rishab Shetty) ಅವರು ವಿಶ್ವ ಮಟ್ಟದಲ್ಲಿ ಖ್ಯಾತಿ ಪಡೆದರು. ‘ಕಾಂತಾರ’ ರಿಲೀಸ್ ಆಗಿ ಒಂದು ತಿಂಗಳಾಗಿದೆ. ಆದಾಗ್ಯೂ ಈ ಚಿತ್ರದ ಅಬ್ಬರ ಕಡಿಮೆ ಆಗುತ್ತಿಲ್ಲ. ಸಿನಿಮಾ ನೋಡಿದ ಬಹುತೇಕರು ಮೆಚ್ಚುಗೆಯ ಮಾತನ್ನು ಆಡಿದ್ದಾರೆ. ಡಬ್ ಆಗಿ ತೆರೆಕಂಡ ಮೂರು ಭಾಷೆಗಳಲ್ಲಿ ‘ಕಾಂತಾರ’ 100 ಕೋಟಿ ರೂಪಾಯಿ ಬಾಚಿದೆ. ಈ ಮೂಲಕ ಚಿತ್ರ ಒಳ್ಳೆಯ ಕಮಾಯಿ ಮಾಡುತ್ತಿದೆ.

‘ಕಾಂತಾರ’ ಸಿನಿಮಾ ಸೆಪ್ಟೆಂಬರ್ 30ರಂದು ಕನ್ನಡದಲ್ಲಿ ರಿಲೀಸ್ ಆಯಿತು. ಇದಾದ ಕೆಲ ವಾರಗಳ ಬಳಿಕ ಹಿಂದಿಯಲ್ಲಿ, ತೆಲುಗಿನಲ್ಲಿ ಹಾಗೂ ತಮಿಳಿನಲ್ಲಿ ಸಿನಿಮಾ ಬಿಡುಗಡೆ ಆಯಿತು. ಈ ಚಿತ್ರ ನೋಡಿದ ಪರಭಾಷಿಗರು ಭೇಷ್ ಎಂದರು. ಮೂಲಗಳ ಪ್ರಕಾರ ತೆಲುಗು, ತಮಿಳು ಹಾಗೂ ಹಿಂದಿ ಸೇರಿ ಈ ಚಿತ್ರ 100 ಕೋಟಿ ರೂಪಾಯಿ ಬಾಚಿಕೊಂಡಿದೆ.

ಹಿಂದಿಯಲ್ಲಿ ಈ ಚಿತ್ರ ಅಬ್ಬರಿಸುತ್ತಿದೆ. ಈ ಬಗ್ಗೆ ಪಕ್ಕಾ ಲೆಕ್ಕ ಸಿಕ್ಕಿದೆ. ಗುರುವಾರ (ಅಕ್ಟೋಬರ್ 27) ಈ ಚಿತ್ರ ಬಾಲಿವುಡ್​ನಲ್ಲಿ 2.60 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಸಿನಿಮಾದ ಹಿಂದಿ ಭಾಗದ ಕಲೆಕ್ಷನ್ 31.70 ಕೋಟಿ ರೂಪಾಯಿ ಆಗಿದೆ. ಇದು ಚಿತ್ರತಂಡದ ಖುಷಿಯನ್ನು ಹೆಚ್ಚಿಸಿದೆ. ಕನ್ನಡದ ಚಿತ್ರ ಬಾಲಿವುಡ್​ನಲ್ಲಿ ಇಷ್ಟು ಒಳ್ಳೆಯ ಗಳಿಕೆ ಮಾಡುತ್ತಿರುವುದು ಕರ್ನಾಟಕದವರ ಪಾಲಿಗೆ ಹೆಮ್ಮೆಯ ವಿಚಾರ.

ಇದನ್ನೂ ಓದಿ: ಬಾಲಿವುಡ್​ಗೆ ಖುಷಿ ತಂದ ದೀಪಾವಳಿ; ‘ಕಾಂತಾರ’ ಎದುರು ‘ರಾಮ್ ಸೇತು’, ‘ಥ್ಯಾಂಕ್​ ಗಾಡ್’ ಕಲೆಕ್ಷನ್ ಎಷ್ಟು?

ಈ ಮೊದಲು ಹಿಂದಿಗೆ ಡಬ್ ಆಗಿ ತೆರೆಕಂಡಿದ್ದ ‘ಕೆಜಿಎಫ್’ ಚಿತ್ರ 44 ಕೋಟಿ ರೂಪಾಯಿ ಬಾಚಿಕೊಂಡಿತ್ತು. ‘ಕಾಂತಾರ’ ಚಿತ್ರ ನುಗ್ಗುತ್ತಿರುವ ವೇಗ ನೋಡಿದರೆ ಈ ಸಿನಿಮಾ ಬಾಲಿವುಡ್​ನಲ್ಲಿ ‘ಕೆಜಿಎಫ್’ ದಾಖಲೆಯನ್ನು ಮುರಿಯುವ ಎಲ್ಲಾ ಸಾಧ್ಯತೆ ಗೋಚರವಾಗುತ್ತಿದೆ. ‘ಕಾಂತಾರ’ ಚಿತ್ರಮಂದಿರದಲ್ಲಿ ಅಬ್ಬರಿಸುತ್ತಿರುವ ಮಧ್ಯೆ ಈ ಚಿತ್ರ ಒಟಿಟಿಗೆ ಯಾವಾಗ ತೆರೆಗೆ ಬರಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?