AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಭಾಷೆಯಲ್ಲಿ 100 ಕೋಟಿ ರೂಪಾಯಿ ಬಾಚಿದ ‘ಕಾಂತಾರ’; ಹಿಂದಿಯಲ್ಲಿ ನಿಂತಿಲ್ಲ ಅಬ್ಬರ

‘ಕಾಂತಾರ’ ಸಿನಿಮಾ ಸೆಪ್ಟೆಂಬರ್ 30ರಂದು ಕನ್ನಡದಲ್ಲಿ ರಿಲೀಸ್ ಆಯಿತು. ಇದಾದ ಕೆಲ ವಾರಗಳ ಬಳಿಕ ಹಿಂದಿಯಲ್ಲಿ, ತೆಲುಗಿನಲ್ಲಿ ಹಾಗೂ ತಮಿಳಿನಲ್ಲಿ ಸಿನಿಮಾ ಬಿಡುಗಡೆ ಆಯಿತು. ಈ ಚಿತ್ರ ನೋಡಿದ ಪರಭಾಷಿಗರು ಭೇಷ್ ಎಂದರು.

ಪರಭಾಷೆಯಲ್ಲಿ 100 ಕೋಟಿ ರೂಪಾಯಿ ಬಾಚಿದ ‘ಕಾಂತಾರ’; ಹಿಂದಿಯಲ್ಲಿ ನಿಂತಿಲ್ಲ ಅಬ್ಬರ
ಕಾಂತಾರ
TV9 Web
| Edited By: |

Updated on: Oct 28, 2022 | 7:40 PM

Share

‘ಕಾಂತಾರ’ ಸಿನಿಮಾ (Kantara Movie) ನಿತ್ಯ ಹೊಸ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಕಡಿಮೆ ಬಜೆಟ್​ನಲ್ಲಿ ಸಿದ್ಧವಾದ ಈ ಚಿತ್ರ ನೂರಾರು ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಚಿತ್ರದಿಂದ ಹೊಂಬಾಳೆ ಫಿಲ್ಮ್ಸ್​ಗೆ ಒಳ್ಳೆಯ ಲಾಭ ಆಗಿದೆ. ಈ ಚಿತ್ರದಿಂದ ರಿಷಬ್ ಶೆಟ್ಟಿ (Rishab Shetty) ಅವರು ವಿಶ್ವ ಮಟ್ಟದಲ್ಲಿ ಖ್ಯಾತಿ ಪಡೆದರು. ‘ಕಾಂತಾರ’ ರಿಲೀಸ್ ಆಗಿ ಒಂದು ತಿಂಗಳಾಗಿದೆ. ಆದಾಗ್ಯೂ ಈ ಚಿತ್ರದ ಅಬ್ಬರ ಕಡಿಮೆ ಆಗುತ್ತಿಲ್ಲ. ಸಿನಿಮಾ ನೋಡಿದ ಬಹುತೇಕರು ಮೆಚ್ಚುಗೆಯ ಮಾತನ್ನು ಆಡಿದ್ದಾರೆ. ಡಬ್ ಆಗಿ ತೆರೆಕಂಡ ಮೂರು ಭಾಷೆಗಳಲ್ಲಿ ‘ಕಾಂತಾರ’ 100 ಕೋಟಿ ರೂಪಾಯಿ ಬಾಚಿದೆ. ಈ ಮೂಲಕ ಚಿತ್ರ ಒಳ್ಳೆಯ ಕಮಾಯಿ ಮಾಡುತ್ತಿದೆ.

‘ಕಾಂತಾರ’ ಸಿನಿಮಾ ಸೆಪ್ಟೆಂಬರ್ 30ರಂದು ಕನ್ನಡದಲ್ಲಿ ರಿಲೀಸ್ ಆಯಿತು. ಇದಾದ ಕೆಲ ವಾರಗಳ ಬಳಿಕ ಹಿಂದಿಯಲ್ಲಿ, ತೆಲುಗಿನಲ್ಲಿ ಹಾಗೂ ತಮಿಳಿನಲ್ಲಿ ಸಿನಿಮಾ ಬಿಡುಗಡೆ ಆಯಿತು. ಈ ಚಿತ್ರ ನೋಡಿದ ಪರಭಾಷಿಗರು ಭೇಷ್ ಎಂದರು. ಮೂಲಗಳ ಪ್ರಕಾರ ತೆಲುಗು, ತಮಿಳು ಹಾಗೂ ಹಿಂದಿ ಸೇರಿ ಈ ಚಿತ್ರ 100 ಕೋಟಿ ರೂಪಾಯಿ ಬಾಚಿಕೊಂಡಿದೆ.

ಹಿಂದಿಯಲ್ಲಿ ಈ ಚಿತ್ರ ಅಬ್ಬರಿಸುತ್ತಿದೆ. ಈ ಬಗ್ಗೆ ಪಕ್ಕಾ ಲೆಕ್ಕ ಸಿಕ್ಕಿದೆ. ಗುರುವಾರ (ಅಕ್ಟೋಬರ್ 27) ಈ ಚಿತ್ರ ಬಾಲಿವುಡ್​ನಲ್ಲಿ 2.60 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಸಿನಿಮಾದ ಹಿಂದಿ ಭಾಗದ ಕಲೆಕ್ಷನ್ 31.70 ಕೋಟಿ ರೂಪಾಯಿ ಆಗಿದೆ. ಇದು ಚಿತ್ರತಂಡದ ಖುಷಿಯನ್ನು ಹೆಚ್ಚಿಸಿದೆ. ಕನ್ನಡದ ಚಿತ್ರ ಬಾಲಿವುಡ್​ನಲ್ಲಿ ಇಷ್ಟು ಒಳ್ಳೆಯ ಗಳಿಕೆ ಮಾಡುತ್ತಿರುವುದು ಕರ್ನಾಟಕದವರ ಪಾಲಿಗೆ ಹೆಮ್ಮೆಯ ವಿಚಾರ.

ಇದನ್ನೂ ಓದಿ: ಬಾಲಿವುಡ್​ಗೆ ಖುಷಿ ತಂದ ದೀಪಾವಳಿ; ‘ಕಾಂತಾರ’ ಎದುರು ‘ರಾಮ್ ಸೇತು’, ‘ಥ್ಯಾಂಕ್​ ಗಾಡ್’ ಕಲೆಕ್ಷನ್ ಎಷ್ಟು?

ಈ ಮೊದಲು ಹಿಂದಿಗೆ ಡಬ್ ಆಗಿ ತೆರೆಕಂಡಿದ್ದ ‘ಕೆಜಿಎಫ್’ ಚಿತ್ರ 44 ಕೋಟಿ ರೂಪಾಯಿ ಬಾಚಿಕೊಂಡಿತ್ತು. ‘ಕಾಂತಾರ’ ಚಿತ್ರ ನುಗ್ಗುತ್ತಿರುವ ವೇಗ ನೋಡಿದರೆ ಈ ಸಿನಿಮಾ ಬಾಲಿವುಡ್​ನಲ್ಲಿ ‘ಕೆಜಿಎಫ್’ ದಾಖಲೆಯನ್ನು ಮುರಿಯುವ ಎಲ್ಲಾ ಸಾಧ್ಯತೆ ಗೋಚರವಾಗುತ್ತಿದೆ. ‘ಕಾಂತಾರ’ ಚಿತ್ರಮಂದಿರದಲ್ಲಿ ಅಬ್ಬರಿಸುತ್ತಿರುವ ಮಧ್ಯೆ ಈ ಚಿತ್ರ ಒಟಿಟಿಗೆ ಯಾವಾಗ ತೆರೆಗೆ ಬರಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು