AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಭಾಷೆಯಲ್ಲಿ 100 ಕೋಟಿ ರೂಪಾಯಿ ಬಾಚಿದ ‘ಕಾಂತಾರ’; ಹಿಂದಿಯಲ್ಲಿ ನಿಂತಿಲ್ಲ ಅಬ್ಬರ

‘ಕಾಂತಾರ’ ಸಿನಿಮಾ ಸೆಪ್ಟೆಂಬರ್ 30ರಂದು ಕನ್ನಡದಲ್ಲಿ ರಿಲೀಸ್ ಆಯಿತು. ಇದಾದ ಕೆಲ ವಾರಗಳ ಬಳಿಕ ಹಿಂದಿಯಲ್ಲಿ, ತೆಲುಗಿನಲ್ಲಿ ಹಾಗೂ ತಮಿಳಿನಲ್ಲಿ ಸಿನಿಮಾ ಬಿಡುಗಡೆ ಆಯಿತು. ಈ ಚಿತ್ರ ನೋಡಿದ ಪರಭಾಷಿಗರು ಭೇಷ್ ಎಂದರು.

ಪರಭಾಷೆಯಲ್ಲಿ 100 ಕೋಟಿ ರೂಪಾಯಿ ಬಾಚಿದ ‘ಕಾಂತಾರ’; ಹಿಂದಿಯಲ್ಲಿ ನಿಂತಿಲ್ಲ ಅಬ್ಬರ
ಕಾಂತಾರ
TV9 Web
| Edited By: |

Updated on: Oct 28, 2022 | 7:40 PM

Share

‘ಕಾಂತಾರ’ ಸಿನಿಮಾ (Kantara Movie) ನಿತ್ಯ ಹೊಸ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಕಡಿಮೆ ಬಜೆಟ್​ನಲ್ಲಿ ಸಿದ್ಧವಾದ ಈ ಚಿತ್ರ ನೂರಾರು ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಚಿತ್ರದಿಂದ ಹೊಂಬಾಳೆ ಫಿಲ್ಮ್ಸ್​ಗೆ ಒಳ್ಳೆಯ ಲಾಭ ಆಗಿದೆ. ಈ ಚಿತ್ರದಿಂದ ರಿಷಬ್ ಶೆಟ್ಟಿ (Rishab Shetty) ಅವರು ವಿಶ್ವ ಮಟ್ಟದಲ್ಲಿ ಖ್ಯಾತಿ ಪಡೆದರು. ‘ಕಾಂತಾರ’ ರಿಲೀಸ್ ಆಗಿ ಒಂದು ತಿಂಗಳಾಗಿದೆ. ಆದಾಗ್ಯೂ ಈ ಚಿತ್ರದ ಅಬ್ಬರ ಕಡಿಮೆ ಆಗುತ್ತಿಲ್ಲ. ಸಿನಿಮಾ ನೋಡಿದ ಬಹುತೇಕರು ಮೆಚ್ಚುಗೆಯ ಮಾತನ್ನು ಆಡಿದ್ದಾರೆ. ಡಬ್ ಆಗಿ ತೆರೆಕಂಡ ಮೂರು ಭಾಷೆಗಳಲ್ಲಿ ‘ಕಾಂತಾರ’ 100 ಕೋಟಿ ರೂಪಾಯಿ ಬಾಚಿದೆ. ಈ ಮೂಲಕ ಚಿತ್ರ ಒಳ್ಳೆಯ ಕಮಾಯಿ ಮಾಡುತ್ತಿದೆ.

‘ಕಾಂತಾರ’ ಸಿನಿಮಾ ಸೆಪ್ಟೆಂಬರ್ 30ರಂದು ಕನ್ನಡದಲ್ಲಿ ರಿಲೀಸ್ ಆಯಿತು. ಇದಾದ ಕೆಲ ವಾರಗಳ ಬಳಿಕ ಹಿಂದಿಯಲ್ಲಿ, ತೆಲುಗಿನಲ್ಲಿ ಹಾಗೂ ತಮಿಳಿನಲ್ಲಿ ಸಿನಿಮಾ ಬಿಡುಗಡೆ ಆಯಿತು. ಈ ಚಿತ್ರ ನೋಡಿದ ಪರಭಾಷಿಗರು ಭೇಷ್ ಎಂದರು. ಮೂಲಗಳ ಪ್ರಕಾರ ತೆಲುಗು, ತಮಿಳು ಹಾಗೂ ಹಿಂದಿ ಸೇರಿ ಈ ಚಿತ್ರ 100 ಕೋಟಿ ರೂಪಾಯಿ ಬಾಚಿಕೊಂಡಿದೆ.

ಹಿಂದಿಯಲ್ಲಿ ಈ ಚಿತ್ರ ಅಬ್ಬರಿಸುತ್ತಿದೆ. ಈ ಬಗ್ಗೆ ಪಕ್ಕಾ ಲೆಕ್ಕ ಸಿಕ್ಕಿದೆ. ಗುರುವಾರ (ಅಕ್ಟೋಬರ್ 27) ಈ ಚಿತ್ರ ಬಾಲಿವುಡ್​ನಲ್ಲಿ 2.60 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಸಿನಿಮಾದ ಹಿಂದಿ ಭಾಗದ ಕಲೆಕ್ಷನ್ 31.70 ಕೋಟಿ ರೂಪಾಯಿ ಆಗಿದೆ. ಇದು ಚಿತ್ರತಂಡದ ಖುಷಿಯನ್ನು ಹೆಚ್ಚಿಸಿದೆ. ಕನ್ನಡದ ಚಿತ್ರ ಬಾಲಿವುಡ್​ನಲ್ಲಿ ಇಷ್ಟು ಒಳ್ಳೆಯ ಗಳಿಕೆ ಮಾಡುತ್ತಿರುವುದು ಕರ್ನಾಟಕದವರ ಪಾಲಿಗೆ ಹೆಮ್ಮೆಯ ವಿಚಾರ.

ಇದನ್ನೂ ಓದಿ: ಬಾಲಿವುಡ್​ಗೆ ಖುಷಿ ತಂದ ದೀಪಾವಳಿ; ‘ಕಾಂತಾರ’ ಎದುರು ‘ರಾಮ್ ಸೇತು’, ‘ಥ್ಯಾಂಕ್​ ಗಾಡ್’ ಕಲೆಕ್ಷನ್ ಎಷ್ಟು?

ಈ ಮೊದಲು ಹಿಂದಿಗೆ ಡಬ್ ಆಗಿ ತೆರೆಕಂಡಿದ್ದ ‘ಕೆಜಿಎಫ್’ ಚಿತ್ರ 44 ಕೋಟಿ ರೂಪಾಯಿ ಬಾಚಿಕೊಂಡಿತ್ತು. ‘ಕಾಂತಾರ’ ಚಿತ್ರ ನುಗ್ಗುತ್ತಿರುವ ವೇಗ ನೋಡಿದರೆ ಈ ಸಿನಿಮಾ ಬಾಲಿವುಡ್​ನಲ್ಲಿ ‘ಕೆಜಿಎಫ್’ ದಾಖಲೆಯನ್ನು ಮುರಿಯುವ ಎಲ್ಲಾ ಸಾಧ್ಯತೆ ಗೋಚರವಾಗುತ್ತಿದೆ. ‘ಕಾಂತಾರ’ ಚಿತ್ರಮಂದಿರದಲ್ಲಿ ಅಬ್ಬರಿಸುತ್ತಿರುವ ಮಧ್ಯೆ ಈ ಚಿತ್ರ ಒಟಿಟಿಗೆ ಯಾವಾಗ ತೆರೆಗೆ ಬರಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?