AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಬಾಕ್ಸ್ ಆಫೀಸ್​ನಲ್ಲಿ 300 ಕೋಟಿ ರೂ. ಕ್ಲಬ್ ಸೇರಿದ ‘ಕಾಂತಾರ’ ಚಿತ್ರ; ರಿಷಬ್ ಶೆಟ್ಟಿ ಓಟಕ್ಕಿಲ್ಲ ಬ್ರೇಕ್

‘ಕಾಂತಾರ’ ಸಿನಿಮಾ ಕನ್ನಡದಲ್ಲಿ ರಿಲೀಸ್ ಆಗಿದ್ದು ಸೆಪ್ಟೆಂಬರ್ 30ರಂದು. ಈಗಲೂ ಅನೇಕ ಕಡೆಗಳಲ್ಲಿ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ. ಹಿಂದಿಯಲ್ಲಂತೂ ಸಿನಿಮಾದ ಕಲೆಕ್ಷನ್ ತಗ್ಗುವ ಮಾತೇ ಇಲ್ಲ.

ವಿಶ್ವ ಬಾಕ್ಸ್ ಆಫೀಸ್​ನಲ್ಲಿ 300 ಕೋಟಿ ರೂ. ಕ್ಲಬ್ ಸೇರಿದ ‘ಕಾಂತಾರ’ ಚಿತ್ರ; ರಿಷಬ್ ಶೆಟ್ಟಿ ಓಟಕ್ಕಿಲ್ಲ ಬ್ರೇಕ್
ಕಾಂತಾರ
TV9 Web
| Edited By: |

Updated on: Nov 03, 2022 | 11:25 AM

Share

ನಟನಾಗಿ ನಿರ್ದೇಶಕನಾಗಿ ‘ಕಾಂತಾರ’  ಚಿತ್ರದ (Kantara Movie) ಮೂಲಕ ರಿಷಬ್ ಶೆಟ್ಟಿ ಅವರು ದೊಡ್ಡ ಯಶಸ್ಸು ಕಂಡಿದ್ದಾರೆ. ಈ ಸಿನಿಮಾದಿಂದ ರಿಷಬ್ ಶೆಟ್ಟಿ (Rishab Shetty) ಅವರು ಗೆದ್ದು ಬೀಗಿದ್ದಾರೆ. ಸಿನಿಮಾ ತೆರೆಗೆ ಬಂದು ಹಲವು ವಾರಗಳು ಕಳೆದರೂ ಚಿತ್ರದ ಓಟ ನಿಲ್ಲುತ್ತಿಲ್ಲ. ಬಾಲಿವುಡ್​ನಲ್ಲಿ ದೊಡ್ಡ ದೊಡ್ಡ ಸಿನಿಮಾಗಳು ರಿಲೀಸ್ ಆದ ಹೊರತಾಗಿಯೂ ಈ ಚಿತ್ರಕ್ಕೆ ಯಾವುದೇ ಸಮಸ್ಯೆ ಉಂಟಾಗಿಲ್ಲ. ಈಗ ಈ ಚಿತ್ರ ವಿಶ್ವ ಮಟ್ಟದಲ್ಲಿ 300 ಕೋಟಿ ರೂಪಾಯಿ ಕ್ಲಬ್ ಸೇರಿದೆ ಎಂದು ವರದಿ ಆಗಿದೆ. ಇದು ಚಿತ್ರತಂಡದ ಖುಷಿಯನ್ನು ಹೆಚ್ಚಿಸಿದೆ.

‘ಕಾಂತಾರ’ ಸಿನಿಮಾ ಕನ್ನಡದಲ್ಲಿ ರಿಲೀಸ್ ಆಗಿದ್ದು ಸೆಪ್ಟೆಂಬರ್ 30ರಂದು. ಈಗಲೂ ಅನೇಕ ಕಡೆಗಳಲ್ಲಿ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ. ಹಿಂದಿಯಲ್ಲಂತೂ ಸಿನಿಮಾದ ಕಲೆಕ್ಷನ್ ತಗ್ಗುವ ಮಾತೇ ಇಲ್ಲ. ಹಿಂದಿಯಲ್ಲಿ ಈ ಚಿತ್ರ ವೀಕೆಂಡ್ ಸಂದರ್ಭದಲ್ಲಿ ನಾಲ್ಕು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದರೆ ವಾರದ ದಿನಗಳಲ್ಲಿ 2 ಕೋಟಿ ರೂಪಾಯಿ ಆಸುಪಾಸಲ್ಲಿ ಕಲೆಕ್ಷನ್ ಮಾಡುತ್ತಿದೆ. ತೆಲುಗು, ತಮಿಳು ಹಾಗೂ ಮಲಯಾಳಂನಲ್ಲೂ ಸಿನಿಮಾ ಉತ್ತಮ ಕಮಾಯಿ ಮಾಡುತ್ತಿದೆ. ಇದರಿಂದ ಸಹಜವಾಗಿಯೇ ಚಿತ್ರದ ಕಲೆಕ್ಷನ್ ಹೆಚ್ಚಿದೆ.

ಹಿಂದಿಯಲ್ಲಿ ಈ ಸಿನಿಮಾದ ಗಳಿಕೆ 50 ಕೋಟಿ ರೂಪಾಯಿ ಸಮೀಪಿಸಿದೆ. ಕನ್ನಡದಲ್ಲೂ ಈ ಚಿತ್ರ ನೂರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ತೆಲುಗು ಮಂದಿ ಚಿತ್ರವನ್ನು ಸಾಕಷ್ಟು ಇಷ್ಟಪಟ್ಟಿದ್ದಾರೆ. ಈ ಎಲ್ಲಾ ಕಾರಣದಿಂದ ಚಿತ್ರದ ಗಳಿಕೆ 300 ಕೋಟಿ ರೂಪಾಯಿ ದಾಟಿದೆ. ಇನ್ನೂ ಕೆಲವು ವಾರ ಚಿತ್ರದ ಅಬ್ಬರ ಹೀಗೆಯೇ ಇರಲಿದೆ ಎಂಬುದು ಬಾಕ್ಸ್ ಆಫೀಸ್ ಪಂಡಿತರ ಅಭಿಪ್ರಾಯ.

ಇದನ್ನೂ ಓದಿ: ಕೋಯಿಕ್ಕೋಡ್ ಆಯ್ತು ಈಗ ಪಾಲಕ್ಕಾಡ್ ಕೋರ್ಟ್ ಸರದಿ; ‘ಕಾಂತಾರ’ ತಂಡಕ್ಕೆ ಸಂಕಷ್ಟ ತಂದ ಕೇರಳ ನ್ಯಾಯಾಲಯದ ಆದೇಶ

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಚಿತ್ರದಿಂದ ದೊಡ್ಡ ಮಟ್ಟದ ಗೆಲುವು ಕಂಡಿದ್ದಾರೆ. ಈ ಚಿತ್ರದಿಂದ ಅವರಿಗೆ ಸಾಲು ಸಾಲು ಆಫರ್​ಗಳು ಬರುತ್ತಿವೆ. ಅಲ್ಲು ಅರವಿಂದ್ ಜತೆ ಅವರು ಸಿನಿಮಾ ಮಾಡುತ್ತಿದ್ದಾರೆ. ಇತ್ತೀಚೆಗೆ ಅಲ್ಲು ಅರವಿಂದ್ ಅವರು ಘೋಷಣೆ ಮಾಡಿದ್ದರು. ‘ಕೆಜಿಎಫ್’ ಚಿತ್ರ ನಿರ್ಮಾಣ ಮಾಡಿದ್ದ ‘ಹೊಂಬಾಳೆ ಫಿಲ್ಮ್ಸ್​’ ‘ಕಾಂತಾರ’ ಚಿತ್ರವನ್ನು ನಿರ್ಮಾಣ ಮಾಡಿದೆ. ಈ ಕಾರಣಕ್ಕೆ ಪರಭಾಷೆಯಲ್ಲಿ ಸಿನಿಮಾಗೆ ದೊಡ್ಡ ಮಟ್ಟದ ಹೈಪ್ ಸಿಕ್ಕಿದೆ.

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!