Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಬಂಗಾರದ ಬೆಳೆ ತೆಗೆದ ‘ಕಾಂತಾರ’; ಇಲ್ಲಿದೆ ಸಂಪೂರ್ಣ ಲೆಕ್ಕಾಚಾರ

‘ಕಾಂತಾರ’ ಸಿನಿಮಾ ಕರ್ನಾಟಕದಲ್ಲಿ ಎಷ್ಟು ಗಳಿಕೆ ಮಾಡಿದೆ ಎನ್ನುವ ಬಗ್ಗೆ ಈವರೆಗೆ ಅಧಿಕೃತವಾಗಿ ಲೆಕ್ಕಾಚಾರ ಸಿಕ್ಕಿಲ್ಲ. ಆದರೆ, 1 ಕೋಟಿ ಟಿಕೆಟ್​​ಗಳು ಮಾರಾಟ ಆಗಿವೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಪ್ರತಿ ಟಿಕೆಟ್​ಗೆ ಸರಾಸರಿ 130-150 ರೂಪಾಯಿ ಹಿಡಿದರೂ ಈ ಚಿತ್ರದ ಒಟ್ಟೂ ಗಳಿಕೆ 150 ಕೋಟಿ ರೂಪಾಯಿ ಆಸುಪಾಸಿನಲ್ಲಿರಲಿದೆ.

ಕರ್ನಾಟಕದಲ್ಲಿ ಬಂಗಾರದ ಬೆಳೆ ತೆಗೆದ ‘ಕಾಂತಾರ’; ಇಲ್ಲಿದೆ ಸಂಪೂರ್ಣ ಲೆಕ್ಕಾಚಾರ
ರಿಷಬ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Nov 10, 2022 | 2:36 PM

‘ಕಾಂತಾರ’ ಸಿನಿಮಾ (Kantara Movie) ಕನ್ನಡದಲ್ಲಿ ರಿಲೀಸ್ ಆಗಿ 40 ದಿನಗಳ ಮೇಲಾಗಿದೆ. ಆದಾಗ್ಯೂ ಸಿನಿಮಾದ ಅಬ್ಬರ ಕಡಿಮೆ ಆಗಿಲ್ಲ. ಈಗಲೂ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶಿಸಿರುವ ಈ ಚಿತ್ರ ಮಾಡಿದ ದಾಖಲೆಗಳಿಗೆ ಲೆಕ್ಕವೇ ಇಲ್ಲ. ಈಗ ಬಾಲಿವುಡ್​ನಲ್ಲೂ ಈ ಚಿತ್ರ ಅಬ್ಬರಿಸುತ್ತಿದೆ. ಹಿಂದಿಯಲ್ಲಿ ಈ ಚಿತ್ರದ ಗಳಿಕೆ 70 ಕೋಟಿ ರೂಪಾಯಿ ಸಮೀಪಿಸಿದೆ. ಹಾಗಾದರೆ, ‘ಕಾಂತಾರ’ ಸಿನಿಮಾ ಕರ್ನಾಟಕದಲ್ಲಿ ಗಳಿಕೆ ಮಾಡಿದ್ದು ಎಷ್ಟು? ಆ ಬಗ್ಗೆ ಇಲ್ಲಿದೆ ವಿವರ.

‘ಕಾಂತಾರ’ ಸಿನಿಮಾ ಕರ್ನಾಟಕದಲ್ಲಿ ಎಷ್ಟು ಗಳಿಕೆ ಮಾಡಿದೆ ಎನ್ನುವ ಬಗ್ಗೆ ಈವರೆಗೆ ಅಧಿಕೃತವಾಗಿ ಲೆಕ್ಕಾಚಾರ ಸಿಕ್ಕಿಲ್ಲ. ಆದರೆ, 1 ಕೋಟಿ ಟಿಕೆಟ್​​ಗಳು ಮಾರಾಟ ಆಗಿವೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಪ್ರತಿ ಟಿಕೆಟ್​ಗೆ ಸರಾಸರಿ 130-150 ರೂಪಾಯಿ ಹಿಡಿದರೂ ಈ ಚಿತ್ರದ ಒಟ್ಟೂ ಗಳಿಕೆ 150 ಕೋಟಿ ರೂಪಾಯಿ ಆಸುಪಾಸಿನಲ್ಲಿರಲಿದೆ. ಬಾಲಿವುಡ್​​ ಗಳಿಕೆಯನ್ನು ಸೇರಿದೆ ಸಿನಿಮಾದ ಕಲೆಕ್ಷನ್ 200 ಕೋಟಿ ರೂಪಾಯಿ ಮೇಲಾಗಲಿದೆ. ತಮಿಳು , ತೆಲುಗು ಹಾಗೂ ಮಲಯಾಳಂ ಕಲೆಕ್ಷನ್ ಸೇರಿದರೆ ಈ ಚಿತ್ರದ ಬಾಕ್ಸ್ ಆಫೀಸ್ ಕಲೆಕ್ಷನ್ 300 ಕೋಟಿ ರೂ. ದಾಟಿದೆ.

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

‘ಹೊಂಬಾಳೆ ಫಿಲ್ಮ್ಸ್​’ ಕಾಂತಾರ ಚಿತ್ರವನ್ನು ನಿರ್ಮಾಣ ಮಾಡಿದೆ. ಕಡಿಮೆ ಬಜೆಟ್​ನಲ್ಲಿ ಸಿದ್ಧವಾದ ಈ ಚಿತ್ರದಿಂದ ತಂಡಕ್ಕೆ ಸಖತ್ ಲಾಭ ಆಗಿದೆ. ವಿಜಯ್ ಕಿರಗಂದೂರು ಅವರು ಈ ಚಿತ್ರದಿಂದ ಬಂಗಾರದ ಬೆಳೆ ತೆಗೆದಿದ್ದಾರೆ. ಅದೇ ರೀತಿ ರಿಷಬ್ ಶೆಟ್ಟಿ ಅವರ ಖ್ಯಾತಿ ದ್ವಿಗುಣಗೊಂಡಿದೆ. ರಿಷಬ್ ಅವರಿಗೆ ಪರಭಾಷೆಗಳಿಂದ ಸಾಕಷ್ಟು ಆಫರ್​ಗಳು ಬರೋಕೆ ಆರಂಭ ಆಗಿದೆ.

ಇದನ್ನೂ ಓದಿ: Manasi Sudhir: ‘ಕಾಂತಾರ’ ಚಿತ್ರದ ಶಿವನ ತಾಯಿ ಕಮಲಾ ಅಲಿಯಾಸ್​ ಮಾನಸಿ ಸುಧೀರ್​ ಬಗ್ಗೆ ಇಲ್ಲಿದೆ ಇಂಟರೆಸ್ಟಿಂಗ್​ ವಿಚಾರ

‘ಕಾಂತಾರ’ ಚಿತ್ರದಲ್ಲಿ ಕಾಡಿನ ಕಥೆ ಇದೆ. ಕಾಡನ್ನು ಹಾಗೂ ಕಾಡಿನ ಪ್ರಾಣಿಗಳನ್ನು ಉಳಿಸಬೇಕು ಎನ್ನುವ ಸಂದೇಶ ಈ ಚಿತ್ರದಿಂದ ಸಿಕ್ಕಿದೆ. ಭೂತ ಕೋಲದ ವಿಚಾರದಿಂದ ಚಿತ್ರದ ಮೆರುಗು ಹೆಚ್ಚಿದೆ. ಈ ಚಿತ್ರ ನವೆಂಬರ್ ಅಂತ್ಯಕ್ಕೆ ಒಟಿಟಿಗೆ ಕಾಲಿಡಲಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಲಭ್ಯವಾಗಬೇಕಿದೆ.

Published On - 2:35 pm, Thu, 10 November 22

ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್