AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಯಿಕ್ಕೋಡ್ ಆಯ್ತು ಈಗ ಪಾಲಕ್ಕಾಡ್ ಕೋರ್ಟ್ ಸರದಿ; ‘ಕಾಂತಾರ’ ತಂಡಕ್ಕೆ ಸಂಕಷ್ಟ ತಂದ ಕೇರಳ ನ್ಯಾಯಾಲಯದ ಆದೇಶ

‘ಮಾತೃಭೂಮಿ ಮ್ಯೂಸಿಕ್’​ ಪಾಲಕ್ಕಾಡ್​ನ ಜಿಲ್ಲಾ ನ್ಯಾಯಾಲಯದಲ್ಲಿ ಈ ಸಂಬಂಧ ಕೇಸ್ ದಾಖಲು ಮಾಡಿತ್ತು. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ ಹೊಸ ಆದೇಶ ನೀಡಿದೆ.

ಕೋಯಿಕ್ಕೋಡ್ ಆಯ್ತು ಈಗ ಪಾಲಕ್ಕಾಡ್ ಕೋರ್ಟ್ ಸರದಿ; ‘ಕಾಂತಾರ’ ತಂಡಕ್ಕೆ ಸಂಕಷ್ಟ ತಂದ ಕೇರಳ ನ್ಯಾಯಾಲಯದ ಆದೇಶ
ಕಾಂತಾರ
TV9 Web
| Edited By: |

Updated on:Nov 03, 2022 | 6:36 AM

Share

ಇತ್ತೀಚೆಗೆ ಕೇರಳದ ಕೋಯಿಕ್ಕೋಡ್ ಕೋರ್ಟ್ ‘ಕಾಂತಾರ’ (Kantara Movie) ಚಿತ್ರದ ‘ವರಾಹ ರೂಪಂ.. ಹಾಡಿಗೆ’ ತಡೆ ನೀಡಿ ಆದೇಶ ಹೊರಡಿಸಿತ್ತು. ಇದಾದ ಕೆಲವೇ ದಿನಗಳಲ್ಲಿ ಸಿನಿಮಾ ತಂಡಕ್ಕೆ ಪಾಲಕ್ಕಾಡ್ ಕೋರ್ಟ್​​ನಿಂದ ಶಾಕ್ ಎದುರಾಗಿದೆ. ಮೊದಲ ಆದೇಶ ಹೊರ ಬಿದ್ದ ಬೆನ್ನಲ್ಲೇ ಪಾಲಕ್ಕಾಡ್ ಕೋರ್ಟ್ ಕೂಡ ಈಗ ಮತ್ತೊಂದು ಆದೇಶ ನೀಡಿದೆ. ‘ವರಾಹ ರೂಪಂ..’ ಹಾಡಿಗೆ ತಡೆ ನೀಡಿ ಕೇರಳದ (Kerala Court) ಈ ಸ್ಥಳೀಯ ನ್ಯಾಯಾಲಯವು ಆದೇಶ ಹೊರಡಿಸಿದೆ.

‘ಕಾಂತಾರ’ ಚಿತ್ರದ ‘ವರಾಹ ರೂಪಂ..’ ಹಾಡು ವಿವಾದದ ಕೇಂದ್ರ ಬಿಂದು ಆಗಿದೆ. ‘ತೈಕ್ಕುಡಂ ಬ್ರಿಡ್ಜ್​​’ ಬ್ಯಾಂಡ್​ನ ‘ನವರಸಂ..’ ಹಾಡಿನ ಟ್ಯೂನ್​ ‘ವರಾಹ ರೂಪಂ..’ನಲ್ಲಿ ಬಳಕೆ ಆಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ‘ತೈಕ್ಕುಡಂ ಬ್ರಿಡ್ಜ್​​’ ಕೇಸ್ ಕೂಡ ದಾಖಲು ಮಾಡಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಕೇರಳದ ಸ್ಥಳೀಯ ನ್ಯಾಯಾಲಯ ‘ವರಾಹ ರೂಪಂ..’ ಹಾಡಿಗೆ ತಡೆ ನೀಡಿತ್ತು. ಈಗ ಪಾಲಕ್ಕಾಡ್ ಕೋರ್ಟ್ ಕೂಡ ಇದೇ ಮಾದರಿಯ ಆದೇಶ ಹೊರಡಿಸಿದೆ.

‘ಮಾತೃಭೂಮಿ ಮ್ಯೂಸಿಕ್’​ ಪಾಲಕ್ಕಾಡ್​ನ ಜಿಲ್ಲಾ ನ್ಯಾಯಾಲಯದಲ್ಲಿ ಈ ಸಂಬಂಧ ಕೇಸ್ ದಾಖಲು ಮಾಡಿತ್ತು. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ, ‘ಮುಂದಿನ ಆದೇಶ ಬರುವವರೆಗೂ ಈ ಹಾಡನ್ನು ಎಲ್ಲಿಯೂ ಹಂಚಿಕೆ ಮಾಡುವಂತಿಲ್ಲ, ಪ್ರಸಾರ ಮಾಡುವಂತಿಲ್ಲ’ ಎಂದು ಹೇಳಿದೆ. ಈ ಮೂಲಕ ಹಾಡಿಗೆ ತಡೆಯಾಜ್ಞೆ ನೀಡಿದೆ.

ಇದನ್ನೂ ಓದಿ: ‘ಕಾಂತಾರ’ ಚಿತ್ರ ವೀಕ್ಷಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು ನೋಡಿ

‘ಕೋರ್ಟ್​ನ ಆದೇಶದ ಪ್ರತಿ ಕೈ ಸೇರಿದ ನಂತರದಲ್ಲಿ ಕಾಂತಾರ ತಂಡದವರು ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಅನ್ನೋದು ತುಂಬಾನೇ ಮುಖ್ಯ. ನಮಗೆ ಕ್ರೆಡಿಟ್ ಕೊಟ್ಟರೆ ಈ ಹಾಡನ್ನು ಅವರು ಪ್ಲೇ ಮಾಡಿಕೊಳ್ಳುವುದರಲ್ಲಿ ಯಾವುದೇ ಸಮಸ್ಯೆ ಇಲ್ಲ’ ಎಂದು ‘ತೈಕ್ಕುಡಂ ಬ್ರಿಡ್ಜ್​​’ ಬ್ಯಾಂಡ್​ನ ವಿಯಾನ್ ಫರ್ನಾಂಡಿಸ್ ಇತ್ತೀಚೆಗೆ ಪ್ರತಿಕ್ರಿಯೆ ನೀಡಿದ್ದರು.

Published On - 10:02 pm, Wed, 2 November 22

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ