AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಯಿಕ್ಕೋಡ್ ಆಯ್ತು ಈಗ ಪಾಲಕ್ಕಾಡ್ ಕೋರ್ಟ್ ಸರದಿ; ‘ಕಾಂತಾರ’ ತಂಡಕ್ಕೆ ಸಂಕಷ್ಟ ತಂದ ಕೇರಳ ನ್ಯಾಯಾಲಯದ ಆದೇಶ

‘ಮಾತೃಭೂಮಿ ಮ್ಯೂಸಿಕ್’​ ಪಾಲಕ್ಕಾಡ್​ನ ಜಿಲ್ಲಾ ನ್ಯಾಯಾಲಯದಲ್ಲಿ ಈ ಸಂಬಂಧ ಕೇಸ್ ದಾಖಲು ಮಾಡಿತ್ತು. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ ಹೊಸ ಆದೇಶ ನೀಡಿದೆ.

ಕೋಯಿಕ್ಕೋಡ್ ಆಯ್ತು ಈಗ ಪಾಲಕ್ಕಾಡ್ ಕೋರ್ಟ್ ಸರದಿ; ‘ಕಾಂತಾರ’ ತಂಡಕ್ಕೆ ಸಂಕಷ್ಟ ತಂದ ಕೇರಳ ನ್ಯಾಯಾಲಯದ ಆದೇಶ
ಕಾಂತಾರ
TV9 Web
| Edited By: |

Updated on:Nov 03, 2022 | 6:36 AM

Share

ಇತ್ತೀಚೆಗೆ ಕೇರಳದ ಕೋಯಿಕ್ಕೋಡ್ ಕೋರ್ಟ್ ‘ಕಾಂತಾರ’ (Kantara Movie) ಚಿತ್ರದ ‘ವರಾಹ ರೂಪಂ.. ಹಾಡಿಗೆ’ ತಡೆ ನೀಡಿ ಆದೇಶ ಹೊರಡಿಸಿತ್ತು. ಇದಾದ ಕೆಲವೇ ದಿನಗಳಲ್ಲಿ ಸಿನಿಮಾ ತಂಡಕ್ಕೆ ಪಾಲಕ್ಕಾಡ್ ಕೋರ್ಟ್​​ನಿಂದ ಶಾಕ್ ಎದುರಾಗಿದೆ. ಮೊದಲ ಆದೇಶ ಹೊರ ಬಿದ್ದ ಬೆನ್ನಲ್ಲೇ ಪಾಲಕ್ಕಾಡ್ ಕೋರ್ಟ್ ಕೂಡ ಈಗ ಮತ್ತೊಂದು ಆದೇಶ ನೀಡಿದೆ. ‘ವರಾಹ ರೂಪಂ..’ ಹಾಡಿಗೆ ತಡೆ ನೀಡಿ ಕೇರಳದ (Kerala Court) ಈ ಸ್ಥಳೀಯ ನ್ಯಾಯಾಲಯವು ಆದೇಶ ಹೊರಡಿಸಿದೆ.

‘ಕಾಂತಾರ’ ಚಿತ್ರದ ‘ವರಾಹ ರೂಪಂ..’ ಹಾಡು ವಿವಾದದ ಕೇಂದ್ರ ಬಿಂದು ಆಗಿದೆ. ‘ತೈಕ್ಕುಡಂ ಬ್ರಿಡ್ಜ್​​’ ಬ್ಯಾಂಡ್​ನ ‘ನವರಸಂ..’ ಹಾಡಿನ ಟ್ಯೂನ್​ ‘ವರಾಹ ರೂಪಂ..’ನಲ್ಲಿ ಬಳಕೆ ಆಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ‘ತೈಕ್ಕುಡಂ ಬ್ರಿಡ್ಜ್​​’ ಕೇಸ್ ಕೂಡ ದಾಖಲು ಮಾಡಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಕೇರಳದ ಸ್ಥಳೀಯ ನ್ಯಾಯಾಲಯ ‘ವರಾಹ ರೂಪಂ..’ ಹಾಡಿಗೆ ತಡೆ ನೀಡಿತ್ತು. ಈಗ ಪಾಲಕ್ಕಾಡ್ ಕೋರ್ಟ್ ಕೂಡ ಇದೇ ಮಾದರಿಯ ಆದೇಶ ಹೊರಡಿಸಿದೆ.

‘ಮಾತೃಭೂಮಿ ಮ್ಯೂಸಿಕ್’​ ಪಾಲಕ್ಕಾಡ್​ನ ಜಿಲ್ಲಾ ನ್ಯಾಯಾಲಯದಲ್ಲಿ ಈ ಸಂಬಂಧ ಕೇಸ್ ದಾಖಲು ಮಾಡಿತ್ತು. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ, ‘ಮುಂದಿನ ಆದೇಶ ಬರುವವರೆಗೂ ಈ ಹಾಡನ್ನು ಎಲ್ಲಿಯೂ ಹಂಚಿಕೆ ಮಾಡುವಂತಿಲ್ಲ, ಪ್ರಸಾರ ಮಾಡುವಂತಿಲ್ಲ’ ಎಂದು ಹೇಳಿದೆ. ಈ ಮೂಲಕ ಹಾಡಿಗೆ ತಡೆಯಾಜ್ಞೆ ನೀಡಿದೆ.

ಇದನ್ನೂ ಓದಿ: ‘ಕಾಂತಾರ’ ಚಿತ್ರ ವೀಕ್ಷಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು ನೋಡಿ

‘ಕೋರ್ಟ್​ನ ಆದೇಶದ ಪ್ರತಿ ಕೈ ಸೇರಿದ ನಂತರದಲ್ಲಿ ಕಾಂತಾರ ತಂಡದವರು ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಅನ್ನೋದು ತುಂಬಾನೇ ಮುಖ್ಯ. ನಮಗೆ ಕ್ರೆಡಿಟ್ ಕೊಟ್ಟರೆ ಈ ಹಾಡನ್ನು ಅವರು ಪ್ಲೇ ಮಾಡಿಕೊಳ್ಳುವುದರಲ್ಲಿ ಯಾವುದೇ ಸಮಸ್ಯೆ ಇಲ್ಲ’ ಎಂದು ‘ತೈಕ್ಕುಡಂ ಬ್ರಿಡ್ಜ್​​’ ಬ್ಯಾಂಡ್​ನ ವಿಯಾನ್ ಫರ್ನಾಂಡಿಸ್ ಇತ್ತೀಚೆಗೆ ಪ್ರತಿಕ್ರಿಯೆ ನೀಡಿದ್ದರು.

Published On - 10:02 pm, Wed, 2 November 22

ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ