AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಯಿಕ್ಕೋಡ್ ಆಯ್ತು ಈಗ ಪಾಲಕ್ಕಾಡ್ ಕೋರ್ಟ್ ಸರದಿ; ‘ಕಾಂತಾರ’ ತಂಡಕ್ಕೆ ಸಂಕಷ್ಟ ತಂದ ಕೇರಳ ನ್ಯಾಯಾಲಯದ ಆದೇಶ

‘ಮಾತೃಭೂಮಿ ಮ್ಯೂಸಿಕ್’​ ಪಾಲಕ್ಕಾಡ್​ನ ಜಿಲ್ಲಾ ನ್ಯಾಯಾಲಯದಲ್ಲಿ ಈ ಸಂಬಂಧ ಕೇಸ್ ದಾಖಲು ಮಾಡಿತ್ತು. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ ಹೊಸ ಆದೇಶ ನೀಡಿದೆ.

ಕೋಯಿಕ್ಕೋಡ್ ಆಯ್ತು ಈಗ ಪಾಲಕ್ಕಾಡ್ ಕೋರ್ಟ್ ಸರದಿ; ‘ಕಾಂತಾರ’ ತಂಡಕ್ಕೆ ಸಂಕಷ್ಟ ತಂದ ಕೇರಳ ನ್ಯಾಯಾಲಯದ ಆದೇಶ
ಕಾಂತಾರ
TV9 Web
| Edited By: |

Updated on:Nov 03, 2022 | 6:36 AM

Share

ಇತ್ತೀಚೆಗೆ ಕೇರಳದ ಕೋಯಿಕ್ಕೋಡ್ ಕೋರ್ಟ್ ‘ಕಾಂತಾರ’ (Kantara Movie) ಚಿತ್ರದ ‘ವರಾಹ ರೂಪಂ.. ಹಾಡಿಗೆ’ ತಡೆ ನೀಡಿ ಆದೇಶ ಹೊರಡಿಸಿತ್ತು. ಇದಾದ ಕೆಲವೇ ದಿನಗಳಲ್ಲಿ ಸಿನಿಮಾ ತಂಡಕ್ಕೆ ಪಾಲಕ್ಕಾಡ್ ಕೋರ್ಟ್​​ನಿಂದ ಶಾಕ್ ಎದುರಾಗಿದೆ. ಮೊದಲ ಆದೇಶ ಹೊರ ಬಿದ್ದ ಬೆನ್ನಲ್ಲೇ ಪಾಲಕ್ಕಾಡ್ ಕೋರ್ಟ್ ಕೂಡ ಈಗ ಮತ್ತೊಂದು ಆದೇಶ ನೀಡಿದೆ. ‘ವರಾಹ ರೂಪಂ..’ ಹಾಡಿಗೆ ತಡೆ ನೀಡಿ ಕೇರಳದ (Kerala Court) ಈ ಸ್ಥಳೀಯ ನ್ಯಾಯಾಲಯವು ಆದೇಶ ಹೊರಡಿಸಿದೆ.

‘ಕಾಂತಾರ’ ಚಿತ್ರದ ‘ವರಾಹ ರೂಪಂ..’ ಹಾಡು ವಿವಾದದ ಕೇಂದ್ರ ಬಿಂದು ಆಗಿದೆ. ‘ತೈಕ್ಕುಡಂ ಬ್ರಿಡ್ಜ್​​’ ಬ್ಯಾಂಡ್​ನ ‘ನವರಸಂ..’ ಹಾಡಿನ ಟ್ಯೂನ್​ ‘ವರಾಹ ರೂಪಂ..’ನಲ್ಲಿ ಬಳಕೆ ಆಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ‘ತೈಕ್ಕುಡಂ ಬ್ರಿಡ್ಜ್​​’ ಕೇಸ್ ಕೂಡ ದಾಖಲು ಮಾಡಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಕೇರಳದ ಸ್ಥಳೀಯ ನ್ಯಾಯಾಲಯ ‘ವರಾಹ ರೂಪಂ..’ ಹಾಡಿಗೆ ತಡೆ ನೀಡಿತ್ತು. ಈಗ ಪಾಲಕ್ಕಾಡ್ ಕೋರ್ಟ್ ಕೂಡ ಇದೇ ಮಾದರಿಯ ಆದೇಶ ಹೊರಡಿಸಿದೆ.

‘ಮಾತೃಭೂಮಿ ಮ್ಯೂಸಿಕ್’​ ಪಾಲಕ್ಕಾಡ್​ನ ಜಿಲ್ಲಾ ನ್ಯಾಯಾಲಯದಲ್ಲಿ ಈ ಸಂಬಂಧ ಕೇಸ್ ದಾಖಲು ಮಾಡಿತ್ತು. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ, ‘ಮುಂದಿನ ಆದೇಶ ಬರುವವರೆಗೂ ಈ ಹಾಡನ್ನು ಎಲ್ಲಿಯೂ ಹಂಚಿಕೆ ಮಾಡುವಂತಿಲ್ಲ, ಪ್ರಸಾರ ಮಾಡುವಂತಿಲ್ಲ’ ಎಂದು ಹೇಳಿದೆ. ಈ ಮೂಲಕ ಹಾಡಿಗೆ ತಡೆಯಾಜ್ಞೆ ನೀಡಿದೆ.

ಇದನ್ನೂ ಓದಿ: ‘ಕಾಂತಾರ’ ಚಿತ್ರ ವೀಕ್ಷಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು ನೋಡಿ

‘ಕೋರ್ಟ್​ನ ಆದೇಶದ ಪ್ರತಿ ಕೈ ಸೇರಿದ ನಂತರದಲ್ಲಿ ಕಾಂತಾರ ತಂಡದವರು ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಅನ್ನೋದು ತುಂಬಾನೇ ಮುಖ್ಯ. ನಮಗೆ ಕ್ರೆಡಿಟ್ ಕೊಟ್ಟರೆ ಈ ಹಾಡನ್ನು ಅವರು ಪ್ಲೇ ಮಾಡಿಕೊಳ್ಳುವುದರಲ್ಲಿ ಯಾವುದೇ ಸಮಸ್ಯೆ ಇಲ್ಲ’ ಎಂದು ‘ತೈಕ್ಕುಡಂ ಬ್ರಿಡ್ಜ್​​’ ಬ್ಯಾಂಡ್​ನ ವಿಯಾನ್ ಫರ್ನಾಂಡಿಸ್ ಇತ್ತೀಚೆಗೆ ಪ್ರತಿಕ್ರಿಯೆ ನೀಡಿದ್ದರು.

Published On - 10:02 pm, Wed, 2 November 22

Follow Us
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್