AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾವು ಓದಿದ ಕೆರಾಡಿ ಕನ್ನಡ ಮಾಧ್ಯಮ ಶಾಲೆ ದತ್ತು ಪಡೆದ ನಟ, ನಿರ್ದೇಶಕ ರಿಷಬ್​ ಶೆಟ್ಟಿ

ರಿಷಬ್​ ಶೆಟ್ಟಿ ಅವರಿಗೆ ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ, ಅಭಿಮಾನ ಇದೆ. ಹಾಗಾಗಿ ಕೆರಾಡಿಯ ಕನ್ನಡ ಮಾಧ್ಯಮ ಶಾಲೆಗೆ ತೆರಳಿ ಒಂದಷ್ಟು ಸಮಯ ಕಳೆದಿದ್ದಾರೆ. ಅಲ್ಲಿನ ಮಕ್ಕಳು ಮತ್ತು ಶಿಕ್ಷಕರ ಜೊತೆ ಅವರು ಮಾತುಕತೆ ಮಾಡಿದ್ದಾರೆ. ಈ ವೇಳೆ ಶಾಲೆಯನ್ನು ದತ್ತು ಪಡೆಯುವ ಬಗ್ಗೆ ತಿಳಿಸಿದ್ದಾರೆ.

ತಾವು ಓದಿದ ಕೆರಾಡಿ ಕನ್ನಡ ಮಾಧ್ಯಮ ಶಾಲೆ ದತ್ತು ಪಡೆದ ನಟ, ನಿರ್ದೇಶಕ ರಿಷಬ್​ ಶೆಟ್ಟಿ
ಕೆರಾಡಿ ಶಾಲೆಯಲ್ಲಿ ರಿಷಬ್​​ ಶೆಟ್ಟಿ
ಮದನ್​ ಕುಮಾರ್​
|

Updated on: Dec 17, 2023 | 3:07 PM

Share

ನಟ ರಿಷಬ್​ ಶೆಟ್ಟಿ (Rishab Shetty) ಅವರು ಸಿನಿಮಾ ಮಾತ್ರವಲ್ಲದೇ ಒಂದಷ್ಟು ಸಾಮಾಜಿಕ ಕೆಲಸಗಳ ಮೂಲಕವೂ ಗಮನ ಸೆಳೆಯುತ್ತಿದ್ದಾರೆ. ಕನ್ನಡದ ಶಾಲೆಗಳ ಉಳಿವಿಗಾಗಿ ಅವರು ಪ್ರಯತ್ನಿಸುತ್ತಿದ್ದಾರೆ. ಅದರ ಅಂಗವಾಗಿ, ತಾವು ಓದಿದ ಕೆರಾಡಿ ಕನ್ನಡ ಮಾಧ್ಯಮ ಶಾಲೆಯನ್ನು (Kannada Medium School) ಅವರು ದತ್ತು ತೆಗೆದುಕೊಂಡಿದ್ದಾರೆ. ರಿಷಬ್​ ಶೆಟ್ಟಿ ಅವರ ಈ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಸದ್ಯ ‘ಕಾಂತಾರ: ಚಾಪ್ಟರ್​ 1’ (Kantara: Chapter 1) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿರುವ ರಿಷಬ್​ ಶೆಟ್ಟಿ ಅವರು ತಾವು ಓದಿದ ಶಾಲೆಗೆ ಭೇಟಿ ನೀಡಿದ್ದಾರೆ.

ರಿಷಬ್​ ಶೆಟ್ಟಿ ಅವರಿಗೆ ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ, ಅಭಿಮಾನ ಇದೆ. ತಮ್ಮ ಸಿನಿಮಾಗಳಲ್ಲಿ ಕೂಡ ಕರಾವಳಿಯ ವಿಷಯಗಳನ್ನು ಆಯ್ದುಕೊಳ್ಳುತ್ತಾರೆ. ‘ಕಾಂತಾರ: ಚಾಪ್ಟರ್​ 1’ ಚಿತ್ರದ ಕೆಲಸಗಳ ಬಿಡುವಿನಲ್ಲಿ ಕೆರಾಡಿಯ ಕನ್ನಡ ಮಾಧ್ಯಮ ಶಾಲೆಗೆ ತೆರಳಿ ಒಂದಷ್ಟು ಸಮಯ ಕಳೆದಿದ್ದಾರೆ. ಅಲ್ಲಿನ ಮಕ್ಕಳು ಮತ್ತು ಶಿಕ್ಷಕರ ಜೊತೆ ಅವರು ಮಾತುಕತೆ ಮಾಡಿದ್ದಾರೆ.

ಇದನ್ನೂ ಓದಿ: ‘ಕಾಂತಾರ ಪ್ರೀಕ್ವೆಲ್​ನಲ್ಲಿ ನಟಿಸಲು ಅವಕಾಶ ಕೊಡಿ’; ರಿಷಬ್​ ಶೆಟ್ಟಿ ಬಳಿ ಚಾನ್ಸ್​ ಕೇಳಿದ ಖ್ಯಾತ ನಟಿ

ಸಾಮಾಜಿಕ ಕೆಲಸಗಳಿಗಾಗಿ ರಿಷಬ್​ ಶೆಟ್ಟಿ ಅವರು ತಮ್ಮದೇ ಫೌಂಡೇಶನ್​ ಆರಂಭಿಸಿದ್ದಾರೆ. ‘ರಿಷಬ್​ ಶೆಟ್ಟಿ ಫೌಂಡೇಶನ್​’ ಮೂಲಕ ಅನೇಕ ಕಾರ್ಯಗಳು ಆಗುತ್ತಿವೆ. ಕನ್ನಡ ಶಾಲೆಯನ್ನು ಉಳಿಸುವ ಮತ್ತು ಬೆಳೆಸುವ ಕಾರ್ಯದಲ್ಲಿ ಅವರು ನಿರತರಾಗಿದ್ದಾರು. ಕೆರಾಡಿಯ ಕನ್ನಡ ಮಾಧ್ಯಮ ಶಾಲೆಯನ್ನು ದತ್ತು ಪಡೆದಿದ್ದಕ್ಕಾಗಿ ರಿಷಬ್​ ಶೆಟ್ಟಿ ಅವರಿಗೆ ಊರಿನ ಹಿರಿಯರು ಮತ್ತು ಪ್ರಮುಖರು ಅಭಿನಂದನೆ ತಿಳಿಸಿದ್ದಾರೆ.

ಇದನ್ನೂ ಓದಿ: ರಿಷಬ್​ ಶೆಟ್ಟಿ-ಪ್ರಗತಿ ಶೆಟ್ಟಿ ಫ್ಯಾಮಿಲಿಯ ಚಂದದ​ ಫೋಟೋಗಳು ಇಲ್ಲಿವೆ..

ನಟನಾಗಿ, ನಿರ್ದೇಶಕನಾಗಿ ಮತ್ತು ನಿರ್ಮಾಪಕನಾಗಿ ರಿಷಬ್​ ಶೆಟ್ಟಿ ಅವರು ಕನ್ನಡ ಚಿತ್ರರಂಗದಲ್ಲಿ ನೆಲೆ ಕಂಡುಕೊಂಡಿದ್ದಾರೆ. ‘ಕಿರಿಕ್​ ಪಾರ್ಟಿ’, ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’, ‘ಕಾಂತಾರ’ ರೀತಿಯ ಸಿನಿಮಾಗಳ ಮೂಲಕ ಅವರು ತಮ್ಮ ಛಾಪು ಮೂಡಿಸಿದ್ದಾರೆ. ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಸಿನಿಮಾದಲ್ಲಿ ಕನ್ನಡ ಶಾಲೆಯ ಉಳಿವಿನ ಬಗ್ಗೆ ಸಂದೇಶ ನೀಡಿದ್ದರು. ರಿಯಲ್​ ಲೈಫ್​ನಲ್ಲಿಯೂ ಅದೇ ಕಾರ್ಯವನ್ನು ಮಾಡುವ ಮೂಲಕ ರಿಷಬ್​ ಶೆಟ್ಟಿ ಅವರು ಅನೇಕರಿಗೆ ಮಾದರಿ ಆಗಿದ್ದಾರೆ. ‘ಕಾಂತಾರ’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದಾರೆ. ಅವರ ನಿರ್ದೇಶನದಲ್ಲಿ ಮೂಡಿಬರಲಿರುವ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಬಗ್ಗೆ ಭಾರಿ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?