AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶ್ರೀರಾಮ ಕರೆ ಕಳಿಸಿದ್ದಾನೆ; ನನ್ನ ಪೂರ್ವಜನ್ಮದ ಪುಣ್ಯ’: ಅಯೋಧ್ಯೆಯ ಆಹ್ವಾನ ಸ್ವೀಕರಿಸಿದ ರಿಷಬ್​ ಶೆಟ್ಟಿ

ರಿಷಬ್​ ಶೆಟ್ಟಿ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದಾರೆ. ನಟನಾಗಿ, ನಿರ್ದೇಶಕನಾಗಿ ಅವರಿಗೆ ಬಹಳ ಬೇಡಿಕೆ ಇದೆ. ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡ ಅವರು ‘ಕಾಂತಾರ: ಚಾಪ್ಟರ್​ 1’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈಗ ಅವರು ಅಯೋಧ್ಯೆಗೆ ತೆರಳುವ ಅವಕಾಶ ಪಡೆದಿದ್ದಾರೆ. ಈ ಅವಕಾಶಕ್ಕಾಗಿ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

‘ಶ್ರೀರಾಮ ಕರೆ ಕಳಿಸಿದ್ದಾನೆ; ನನ್ನ ಪೂರ್ವಜನ್ಮದ ಪುಣ್ಯ’: ಅಯೋಧ್ಯೆಯ ಆಹ್ವಾನ ಸ್ವೀಕರಿಸಿದ ರಿಷಬ್​ ಶೆಟ್ಟಿ
ಅಯೋಧ್ಯೆಯ ಆಹ್ವಾನ ಸ್ವೀಕರಿಸಿದ ರಿಷಬ್​ ಶೆಟ್ಟಿ
ಮದನ್​ ಕುಮಾರ್​
|

Updated on: Jan 19, 2024 | 10:24 PM

Share

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ (Ram Mandir Inauguration) ಸಕಲ ತಯಾರಿ ನಡೆದಿದೆ. ಜನವರಿ 22ರಂದು ನಡೆಯುವ ಅಭೂತಪೂರ್ವ ಸಮಾರಂಭಕ್ಕಾಗಿ ಬಹುಕೋಟಿ ಜನರು ಕಾದಿದ್ದಾರೆ. ರಾಮ ಮಂದಿರ (Ram Mandir) ಉದ್ಘಾಟನೆಯ ಕ್ಷಣವನ್ನು ನೇರವಾಗಿ ಕಣ್ತುಂಬಿಕೊಳ್ಳುವ ಅವಕಾಶ ಕೆಲವೇ ಮಂದಿಗೆ ಸಿಗಲಿದೆ. ಭಾರತೀಯ ಚಿತ್ರರಂಗದ ಹಲವು ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಲಾಗಿದೆ. ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರನ್ನೂ ಆಹ್ವಾನಿಸಲಾಗಿದೆ. ಅಯೋಧ್ಯೆಯಿಂದ ಬಂದ ಆಹ್ವಾನ ಪತ್ರಿಕೆಯನ್ನು ರಿಷಬ್​ ಶೆಟ್ಟಿ (Rishab Shetty) ಸ್ವೀಕರಿಸಿದ್ದಾರೆ. ಈ ಸಂದರ್ಭದ ಫೋಟೋವನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇಂಥ ಮಹತ್ವದ ಅವಕಾಶ ಸಿಕ್ಕಿದ್ದಕ್ಕೆ ಅವರಿಗೆ ಬಹಳ ಖುಷಿ ಆಗಿದೆ.

‘ಶ್ರೀರಾಮ ಜಯ ರಾಮ ಜಯ ಜಯ ರಾಮ. ಬಾಲ್ಯದಿಂದಲೂ ನಮ್ಮ ಮನೆಗಳಲ್ಲಿ ರಾಮನಾಮವ ಭಜಿಸುತ್ತಾ, ರಾಮ ಪ್ರೇಮವ ಭುಜಿಸುತ್ತಾ, ಆತನ ಆದರ್ಶಪ್ರಾಯ ಜೀವನದ ಕಥೆಗಳನ್ನು ಗುರು ಹಿರಿಯರಿಂದ ಕೇಳುತ್ತಾ ಬೆಳೆದವರು ನಾವು. ಇಂದು ಆ ಶ್ರೀರಾಮ ತಾನು ಮಗುವಾಗಿ ಆಡಿದ, ಪ್ರಭುವಾಗಿ ಆಳಿದ ಆ ಅಯೋಧ್ಯೆಗೆ ಬರುವಂತೆ ಕರೆ ಕಳಿಸಿದ್ದಾನೆ. ಇದು ನನ್ನ ಪೂರ್ವ ಜನ್ಮದ ಪುಣ್ಯವೇ ಸರಿ! ಶ್ರೀರಾಮನಿಗೆ ಜಯವಾಗಲಿ, ಅಯೋಧ್ಯೆಗೆ ಜಯವಾಗಲಿ’ ಎಂದು ರಿಷಬ್​ ಶೆಟ್ಟಿ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ಉದ್ಘಾಟನೆ: ಶಾರುಖ್​, ಸಲ್ಮಾನ್​, ಆಮಿರ್​ ಖಾನ್​ಗೆ ನೀಡಿಲ್ಲ ಆಹ್ವಾನ

ರಿಷಬ್​ ಶೆಟ್ಟಿ ಅವರು ‘ಕಾಂತಾರ’ ಸಿನಿಮಾದ ಯಶಸ್ಸಿನಿಂದ ಪ್ಯಾನ್​ ಇಂಡಿಯಾ ಸ್ಟಾರ್​ ಆದರು. ನಟನಾಗಿ, ನಿರ್ದೇಶಕನಾಗಿ ಅವರಿಗೆ ಬಹಳ ಬೇಡಿಕೆ ಇದೆ. ರಾಷ್ಟ್ರ ಮಟ್ಟದಲ್ಲಿ ಅವರು ಗುರುತಿಸಿಕೊಂಡಿದ್ದಾರೆ. ಈಗ ‘ಕಾಂತಾರ: ಚಾಪ್ಟರ್​ 1’ ಸಿನಿಮಾದ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಇದರ ನಡುವೆ ಅವರು ಅಯೋಧ್ಯೆಗೆ ತೆರಳುವ ಅವಕಾಶ ಪಡೆದಿದ್ದಾರೆ. ಈ ಅವಕಾಶಕ್ಕಾಗಿ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

ರಿಷಬ್​ ಶೆಟ್ಟಿ ಜೊತೆ ಅಮಿತಾಭ್​ ಬಚ್ಚನ್​, ರಜನಿಕಾಂತ್​, ಯಶ್​, ಆಲಿಯಾ ಭಟ್​, ರಣಬೀರ್​ ಕಪೂರ್​, ಅಕ್ಷಯ್​ ಕುಮಾರ್​, ಕಂಗನಾ ರಣಾವತ್​, ಆಯುಷ್ಮಾನ್​ ಖುರಾನಾ, ರಣದೀಪ್​ ಹೂಡಾ, ಅನುಷ್ಕಾ ಶರ್ಮಾ, ಅನುಪಮ್​ ಖೇರ್​, ಅಜಯ್​ ದೇವಗನ್​, ಮಾಧುರಿ ದೀಕ್ಷಿತ್​, ಪ್ರಭಾಸ್​, ರಾಮ್​ ಚರಣ್​, ಮೋಹನ್​ಲಾಲ್​, ಸಂಜಯ್​ ಲೀಲಾ ಬನ್ಸಾಲಿ, ಸನ್ನಿ ಡಿಯೋಲ್​, ಚಿರಂಜೀವಿ ಮುಂತಾದ ಸೆಲೆಬ್ರಿಟಿಗಳು ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ