AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಬ್ ಶೆಟ್ಟಿ ನಿಜವಾದ ಹೆಸರೇನು? ಹೆಸರು ಬದಲಿಸಿದ ನಂತರ ಒಲಿಯಿತು ಅದೃಷ್ಟ

"ಕಾಂತಾರ" ಚಿತ್ರದ ಯಶಸ್ಸಿನ ನಂತರ ರಿಷಬ್ ಶೆಟ್ಟಿ ಪ್ಯಾನ್ ಇಂಡಿಯಾ ಸ್ಟಾರ್ ಆದರು. ಮೂಲತಃ ಪ್ರಶಾಂತ್ ಶೆಟ್ಟಿ ಎಂಬ ಹೆಸರಿದ್ದ ಇವರು, ಜ್ಯೋತಿಷಿ ತಂದೆ ಹಾಗೂ ಗೆಳೆಯನ ಸಲಹೆಯಂತೆ ತಮ್ಮ ಹೆಸರನ್ನು 'ರಿಷಬ್' ಎಂದು ಬದಲಾಯಿಸಿಕೊಂಡರು. ಈ ಬದಲಾವಣೆಯೇ ತಮ್ಮ ಅದೃಷ್ಟವನ್ನು ತಂದಿತು ಎಂಬುದು ಅವರ ನಂಬಿಕೆ. ಕುಂದಾಪುರದ ಕಿರಾದಿಯಲ್ಲಿ ಹುಟ್ಟಿದ ಇವರು, ಹೆಸರು ಬದಲಾದ ಮೇಲೆ ಜೀವನದಲ್ಲಿ ಯಶಸ್ಸು ಕಂಡರು.

ರಿಷಬ್ ಶೆಟ್ಟಿ ನಿಜವಾದ ಹೆಸರೇನು? ಹೆಸರು ಬದಲಿಸಿದ ನಂತರ ಒಲಿಯಿತು ಅದೃಷ್ಟ
ರಿಷಬ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 13, 2025 | 6:30 AM

Share

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿ ಗೆದ್ದರು. ಆ ಬಳಿಕ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ಮತ್ತೆ ಗೆದ್ದರು. ಈ ಚಿತ್ರದ ನಟನೆಗೆ, ಈ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಸಿಗಬೇಕು ಎಂದು ಅನೇಕರು ಕೋರಿಕೆ ಇಡುತ್ತಿದ್ದಾರೆ. ಈ ಚಿತ್ರದ ಬಳಿಕ ರಿಷಬ್ ಶೆಟ್ಟಿ ಅವರ ಜೀವನ ಮತ್ತಷ್ಟು ಬದಲಾಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅವರನ್ನು ಗುರುತಿಸುವ ಕೆಲಸ ಆಗುತ್ತಿದೆ. ಅವರು ಹೆಸರು ಬದಲಿಸಿಕೊಂಡ ಮೇಲೆ ಎಲ್ಲವೂ ಸರಿ ಆಯಿತು ಎಂಬುದು ಅವರ ಅಭಿಪ್ರಾಯ. ಈ ಮೊದಲು ವಿಡಿಯೋ ಒಂದರಲ್ಲಿ ಇದನ್ನು ಹೇಳಿಕೊಂಡರು.

ರಿಷಬ್ ಶೆಟ್ಟಿ ಅವರ ಮೂಲ ಹೆಸರು ಪ್ರಶಾಂತ್. ಅವರು ಹುಟ್ಟಿದ್ದು ಕರಾವಳಿಯ ಸುಂದರ ನಾಡು ಕುಂದಾಪುರದ ಕೆರಾಡಿಯಲ್ಲಿ.  ಓದಿನಲ್ಲಿ ಅವರು ಅಷ್ಟು ಮುಂದಿರಲಿಲ್ಲ. ಆದರೆ, ಸಣ್ಣ ವಯಸ್ಸಿನಲ್ಲೇ ಹೀರೋ ಆಗಬೇಕು ಎಂಬ ಕನಸು ಮಾತ್ರ ಹಾಗೆಯೇ ಇತ್ತು. ಅವರು ನಾಟಕಗಳ ಬಗ್ಗೆ ಆಸಕ್ತಿ ಹೊಂದಿದ್ದರು. ಉಪೇಂದ್ರ ಅವರ ಸಿನಿಮಾಗಳನ್ನು ನೋಡಿ ಚಿತ್ರರಂಗದ ಮೇಲಿನ ಆಸಕ್ತಿ ಹೆಚ್ಚಿತ್ತು. ರಿಷಬ್ ತಂದೆ ವೃತ್ತಿಯಲ್ಲಿ ಜ್ಯೋತಿಷಿ. ಅವರು ನೀಡಿದ ಒಂದು ಸಲಹೆ ಜೀವನ ಬದಲಿಸಿತು.

ರಿಷಬ್ ಶೆಟ್ಟಿ ಅವರು ಆರಂಭದಲ್ಲಿ ಹಲವು ಕೆಲಸಗಳನ್ನು ಮಾಡಿದ್ದರು. ಒಂದು ದಿನ ಯಾವುದೇ ಕೆಲಸ ಇರಲಿಲ್ಲ. ಆಗ ರಿಷಬ್ ಅವರ ಗೆಳೆಯ ಪ್ರಸಾದ್ ಎಂಬುವವರು ಒಂದು ಐಡಿಯಾ ಕೊಟ್ಟೇ ಬಿಟ್ಟರು. ಅದುವೇ ಹೆಸರು ಬದಲಿಸಿಕೊಳ್ಳುವುದು. ರಿಷಬ್ ಶೆಟ್ಟಿ ಹುಟ್ಟಿದ್ದು ಜುಲೈ 7ರಂದು. ಮುಂಜಾನೆ ಏಳು ಗಂಟೆಗೆ. ಇಲ್ಲಿ ಎಲ್ಲವೂ ಏಳೇ ಇದೆ. ಅದರ ಪ್ರಕಾರ ಹೆಸರು ಬದಲಿಸಿಕೊಳ್ಳುವಂತೆ ಗೆಳೆಯ ಸೂಚನೆ ನೀಡಿದ್ದ.

ಇದನ್ನೂ ಓದಿ
Image
‘ನಂದ ಗೋಕುಲ’ ಧಾರಾವಾಹಿಯಲ್ಲಿ ವಲ್ಲಭ-ಅಮೂಲ್ಯ ವಿವಾಹ; ದೊಡ್ಡ ಟ್ವಿಸ್ಟ್
Image
ಈ ವಾರ ಬಿಗ್ ಬಾಸ್​ನಿಂದ ಎಲಿಮಿನೇಟ್ ಆಗಿದ್ದು ಯಾರು? ಕಾದಿದೆ ದೊಡ್ಡ ಟ್ವಿಸ್
Image
ವಿದೇಶದಲ್ಲೂ ಆಸ್ತಿ ಹೊಂದಿದ್ದಾರೆ ಅಮಿತಾಭ್ ಬಚ್ಚನ್; ಇಲ್ಲಿದೆ ವಿವರ
Image
ಒಂದಲ್ಲ, ಎರಡಲ್ಲ ಆರು ಗಂಟೆ ಸ್ನಾನ ಮಾಡಿದ ಸತೀಶ್; ಒಡೆಯಿತು ತಾಳ್ಮೆಯ ಕಟ್ಟೆ

ರಿಷಬ್ ಶೆಟ್ಟಿ ತಡಮಾಡದೆ ತಂದೆಯ ಬಳಿ ತೆರಳಿ ಈ ಬಗ್ಗೆ ಹೇಳಿದ್ದರು. ಆಗ ರಿಷಬ್ ತಂದೆ R ಇಂದ ಬರುವ ಹೆಸರನ್ನು ಇಟ್ಟುಕೊಳ್ಳುವಂತೆ ಹೇಳಿದ್ದರು. ಆರ್ ಎಂದರೆ ರಾಜ್​ಕುಮಾರ್, ರಜನಿಕಾಂತ್ ಎಂದೆಲ್ಲ ವಿವರಿಸಿದ್ದರು. ಇದು ಅವರಿಗೂ ಹೌದೆನ್ನಿಸಿತು. ಹೆಸರು ಬದಲಿಸಿಕೊಂಡ ಮಾತ್ರಕ್ಕೆ ಏನೂ ಬದಲಾಗುವುದಿಲ್ಲ ಎಂಬುದು ರಿಷಬ್ ಅಂದುಕೊಂಡಿದ್ದರು.

ರಿಷಬ್ ಶೆಟ್ಟಿ ಅವರು ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು. ಅವರು ನಿರ್ದೇಶನ ಮಾಡಿದ ಮೊದಲ ಸಿನಿಮಾ ‘ರಿಕ್ಕಿ’. ಈ ಚಿತ್ರ ಸಾಧಾರಣ ಗೆಲುವು ಕಂಡಿತು. 2016ರಲ್ಲಿ ಈ ಚಿತ್ರ ಬಿಡುಗಡೆ ಆಯಿತು. ‘ಕಿರಿಕ್ ಪಾರ್ಟಿ’ ಕೂಡ ಅದೇ ವರ್ಷ ರಿಲೀಸ್ ಆಗಿ ಭರ್ಜರಿ ಮೆಚ್ಚುಗೆ ಪಡೆಯಿತು.

ಇದನ್ನೂ ಓದಿ: ಯಶಸ್ಸು ಅಂದರೆ ಇದು; ರಿಷಬ್ ಶೆಟ್ಟಿಗೆ ಮುಂಬೈನಲ್ಲಿ ಸಿಕ್ತು ವಿಶೇಷ ಗೌರವ

2018ರಲ್ಲಿ ರಿಲೀಸ್ ಆದ ಅವರ ನಿರ್ದೇಶನದ ‘ಸಹಿಪ್ರಾ ಶಾಲೆ ಕಸಾರಗೋಡು’ ಸಿನಿಮಾ ಮೆಚ್ಚುಗೆ ಪಡೆಯಿತು. ನಾಲ್ಕು ವರ್ಷಗಳ ಬಳಿಕ ರಿಲೀಸ್ ಆದ ‘ಕಾಂತಾರ’ ಸಿನಿಮಾ ಭರ್ಜರಿ ಮೆಚ್ಚುಗೆ ಪಡೆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ