AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚೆ ಧರಿಸಿ ವೇದಿಕೆಗೆ ಬಂದು ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್​ ಶೆಟ್ಟಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ರಿಷಬ್​ ಶೆಟ್ಟಿ ಅವರು ‘ಅತ್ಯುತ್ತಮ ನಟ’ ನ್ಯಾಷನಲ್​ ಅವಾರ್ಡ್​ ಸ್ವೀಕರಿಸಿದ್ದಾರೆ. ಅವರಿಗೆ ಆಪ್ತರು, ಅಭಿಮಾನಿಗಳು ಹಾಗೂ ಅನೇಕ ಸೆಲೆಬ್ರಿಟಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಪಂಚೆ ಧರಿಸಿ, ದಕ್ಷಿಣ ಭಾರತದ ಸಾಂಪ್ರದಾಯಿಕ ಗೆಟಪ್​ನಲ್ಲಿ ರಿಷಬ್​ ಶೆಟ್ಟಿ ಅವರು ಗಮನ ಸೆಳೆದಿದ್ದಾರೆ.

ಪಂಚೆ ಧರಿಸಿ ವೇದಿಕೆಗೆ ಬಂದು ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್​ ಶೆಟ್ಟಿ
ರಿಷಬ್​ ಶೆಟ್ಟಿ
ಮದನ್​ ಕುಮಾರ್​
|

Updated on: Oct 08, 2024 | 8:19 PM

Share

ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರ ಪಾಲಿಗೆ ಇಂದು (ಅಕ್ಟೋಬರ್​ 8) ಬಹಳ ವಿಶೇಷವಾದ ದಿನ. ಯಾಕೆಂದರೆ, ಇಂದು ದೆಹಲಿಯಲ್ಲಿ ರಾಷ್ಟ್ರಪತಿಗಳ ಕೈಯಿಂದ ಅವರು ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ‘ಕಾಂತಾರ’ ಸಿನಿಮಾದಲ್ಲಿನ ನಟನೆಗಾಗಿ ಅವರಿಗೆ ಬೆಸ್ಟ್​ ಆ್ಯಕ್ಟರ್​ ನ್ಯಾಷನಲ್​ ಅವಾರ್ಡ್​ ಸಿಕ್ಕಿದೆ. ಪತ್ನಿ ಸಮೇತರಾಗಿ ದೆಹಲಿಗೆ ತೆರಳಿದ ರಿಷಬ್​ ಶೆಟ್ಟಿ ಅವರು ಪ್ರಶಸ್ತಿ ಸ್ವೀಕರಿಸಿ ಖುಷಿಪಟ್ಟಿದ್ದಾರೆ. ವಿಶೇಷ ಏನೆಂದರೆ, ಅವರು ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಪಂಚೆ ಧರಿಸಿ ಹೋಗಿದ್ದರು. ದಕ್ಷಿಣ ಭಾರತದ ಹೆಮ್ಮೆಯ ದಿರಿಸಿನಲ್ಲಿ ಅವರು ಎಲ್ಲರ ಗಮನ ಸೆಳೆದರು.

ರಿಷಬ್​ ಶೆಟ್ಟಿ ಅವರು ನಮ್ಮ ನೆಲದ ಸೊಗಡಿಗೆ ಹೆಚ್ಚು ಬೆಲೆ ನೀಡುತ್ತಾರೆ. ಅವರು ಸಿನಿಮಾಗಳಲ್ಲೂ ಅದು ಎದ್ದು ಕಾಣುತ್ತದೆ. ‘ಕಾಂತರ’ ಸಿನಿಮಾದ ಮೂಲಕ ಅವರು ದೇಸಿ ಕಹಾನಿಯನ್ನು ಹೇಳಿದ್ದರು. ಆ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಅವರ ನಟನೆಯನ್ನು ನೋಡಿ ಪ್ರೇಕ್ಷಕರು ಫಿದಾ ಆದರು. ‘ಕಾಂತಾರ’ ಸಿನಿಮಾದಿಂದ ರಿಷಬ್​ ಶೆಟ್ಟಿ ನ್ಯಾಷನಲ್​ ಸ್ಟಾರ್​ ಆದರು. ಎಷ್ಟೇ ಫೇಮ್​ ಸಿಕ್ಕರೂ ಕೂಡ ಅವರು ನೆಲೆದ ಸೊಗಡನ್ನು ಮರೆತಿಲ್ಲ.

ಪ್ಯಾನ್​ ಇಂಡಿಯಾ ಸ್ಟಾರ್​ ಆಗಿರುವ ರಿಷಬ್ ಶೆಟ್ಟಿ ಅವರು ಈಗಾಗಲೇ ಅನೇಕ ಕಾರ್ಯಕ್ರಮಗಳಿಗೆ ಪಂಚೆ ಧರಿಸಿ ಹೋಗಿದ್ದರು. ಸಾಮಾನ್ಯವಾಗಿ ಕಲಾವಿದರು ಅವಾರ್ಡ್​ ಫಂಕ್ಷನ್​ಗಳಿಗೆ ಹೋಗುವಾಗ ಸೂಟು-ಬೂಟು ಧರಿಸುತ್ತಿದ್ದರು. ಆದರೆ ಕೆಲವು ನಟರು ಅಪ್ಪಟ ಸಾಂಪ್ರದಾಯಿಕ ಉಡುಗೆಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಅಂಥವರ ಸಾಲಿನಲ್ಲಿ ರಿಷಬ್​ ಶೆಟ್ಟಿ ಕೂಡ ಇದ್ದಾರೆ. ಪಂಚೆ ಧರಿಸಿ ಅವರು ವೇದಿಕೆ ಏರಿದ್ದಾರೆ.

ಇದನ್ನೂ ಓದಿ: ಜೂ.ಎನ್​ಟಿಆರ್​ ಹಾಗೂ ಪ್ರಶಾಂತ್​ ನೀಲ್​ಗೆ ಹುಟ್ಟೂರು ಪರಿಚಯಿಸಿದ ರಿಷಬ್ ಶೆಟ್ಟಿ

2022ರಲ್ಲಿ ‘ಕಾಂತಾರ’ ಸಿನಿಮಾ ತೆರೆಕಂಡಿತು. ‘ಹೊಂಬಾಳೆ ಫಿಲ್ಸ್​’ ಮೂಲಕ ನಿರ್ಮಾಣ ಆದ ಈ ಚಿತ್ರಕ್ಕೆ ಸ್ವತಃ ರಿಷಬ್​ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಭೂತಕೋಲದ ಕಥೆ ಇರುವ ಈ ಸಿನಿಮಾದಲ್ಲಿ ಸಪ್ತಮಿ ಗೌಡ, ಕಿಶೋರ್​, ಅಚ್ಯುತ್​ ಕುಮಾರ್​, ಪ್ರಮೋದ್​ ಶೆಟ್ಟಿ ಮುಂತಾದವರು ಅಭಿನಯಿಸಿದ್ದಾರೆ. ರಿಷಬ್​ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶಕನಕ್ಕೆ ಫ್ಯಾನ್ಸ್​ ಫಿದಾ ಆದರು. ಕನ್ನಡ ಮಾತ್ರವಲ್ಲೇ ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿಯೂ ಈ ಸಿನಿಮಾ ಸೂಪರ್​ ಹಿಟ್​ ಆಯಿತು. ನ್ಯಾಷನಲ್​ ಅವಾರ್ಡ್​ ಪಡೆದ ರಿಷಬ್​ ಶೆಟ್ಟಿ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ