AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚೆ ಧರಿಸಿ ವೇದಿಕೆಗೆ ಬಂದು ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್​ ಶೆಟ್ಟಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ರಿಷಬ್​ ಶೆಟ್ಟಿ ಅವರು ‘ಅತ್ಯುತ್ತಮ ನಟ’ ನ್ಯಾಷನಲ್​ ಅವಾರ್ಡ್​ ಸ್ವೀಕರಿಸಿದ್ದಾರೆ. ಅವರಿಗೆ ಆಪ್ತರು, ಅಭಿಮಾನಿಗಳು ಹಾಗೂ ಅನೇಕ ಸೆಲೆಬ್ರಿಟಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಪಂಚೆ ಧರಿಸಿ, ದಕ್ಷಿಣ ಭಾರತದ ಸಾಂಪ್ರದಾಯಿಕ ಗೆಟಪ್​ನಲ್ಲಿ ರಿಷಬ್​ ಶೆಟ್ಟಿ ಅವರು ಗಮನ ಸೆಳೆದಿದ್ದಾರೆ.

ಪಂಚೆ ಧರಿಸಿ ವೇದಿಕೆಗೆ ಬಂದು ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್​ ಶೆಟ್ಟಿ
ರಿಷಬ್​ ಶೆಟ್ಟಿ
Follow us
ಮದನ್​ ಕುಮಾರ್​
|

Updated on: Oct 08, 2024 | 8:19 PM

ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರ ಪಾಲಿಗೆ ಇಂದು (ಅಕ್ಟೋಬರ್​ 8) ಬಹಳ ವಿಶೇಷವಾದ ದಿನ. ಯಾಕೆಂದರೆ, ಇಂದು ದೆಹಲಿಯಲ್ಲಿ ರಾಷ್ಟ್ರಪತಿಗಳ ಕೈಯಿಂದ ಅವರು ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ‘ಕಾಂತಾರ’ ಸಿನಿಮಾದಲ್ಲಿನ ನಟನೆಗಾಗಿ ಅವರಿಗೆ ಬೆಸ್ಟ್​ ಆ್ಯಕ್ಟರ್​ ನ್ಯಾಷನಲ್​ ಅವಾರ್ಡ್​ ಸಿಕ್ಕಿದೆ. ಪತ್ನಿ ಸಮೇತರಾಗಿ ದೆಹಲಿಗೆ ತೆರಳಿದ ರಿಷಬ್​ ಶೆಟ್ಟಿ ಅವರು ಪ್ರಶಸ್ತಿ ಸ್ವೀಕರಿಸಿ ಖುಷಿಪಟ್ಟಿದ್ದಾರೆ. ವಿಶೇಷ ಏನೆಂದರೆ, ಅವರು ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಪಂಚೆ ಧರಿಸಿ ಹೋಗಿದ್ದರು. ದಕ್ಷಿಣ ಭಾರತದ ಹೆಮ್ಮೆಯ ದಿರಿಸಿನಲ್ಲಿ ಅವರು ಎಲ್ಲರ ಗಮನ ಸೆಳೆದರು.

ರಿಷಬ್​ ಶೆಟ್ಟಿ ಅವರು ನಮ್ಮ ನೆಲದ ಸೊಗಡಿಗೆ ಹೆಚ್ಚು ಬೆಲೆ ನೀಡುತ್ತಾರೆ. ಅವರು ಸಿನಿಮಾಗಳಲ್ಲೂ ಅದು ಎದ್ದು ಕಾಣುತ್ತದೆ. ‘ಕಾಂತರ’ ಸಿನಿಮಾದ ಮೂಲಕ ಅವರು ದೇಸಿ ಕಹಾನಿಯನ್ನು ಹೇಳಿದ್ದರು. ಆ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಅವರ ನಟನೆಯನ್ನು ನೋಡಿ ಪ್ರೇಕ್ಷಕರು ಫಿದಾ ಆದರು. ‘ಕಾಂತಾರ’ ಸಿನಿಮಾದಿಂದ ರಿಷಬ್​ ಶೆಟ್ಟಿ ನ್ಯಾಷನಲ್​ ಸ್ಟಾರ್​ ಆದರು. ಎಷ್ಟೇ ಫೇಮ್​ ಸಿಕ್ಕರೂ ಕೂಡ ಅವರು ನೆಲೆದ ಸೊಗಡನ್ನು ಮರೆತಿಲ್ಲ.

ಪ್ಯಾನ್​ ಇಂಡಿಯಾ ಸ್ಟಾರ್​ ಆಗಿರುವ ರಿಷಬ್ ಶೆಟ್ಟಿ ಅವರು ಈಗಾಗಲೇ ಅನೇಕ ಕಾರ್ಯಕ್ರಮಗಳಿಗೆ ಪಂಚೆ ಧರಿಸಿ ಹೋಗಿದ್ದರು. ಸಾಮಾನ್ಯವಾಗಿ ಕಲಾವಿದರು ಅವಾರ್ಡ್​ ಫಂಕ್ಷನ್​ಗಳಿಗೆ ಹೋಗುವಾಗ ಸೂಟು-ಬೂಟು ಧರಿಸುತ್ತಿದ್ದರು. ಆದರೆ ಕೆಲವು ನಟರು ಅಪ್ಪಟ ಸಾಂಪ್ರದಾಯಿಕ ಉಡುಗೆಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಅಂಥವರ ಸಾಲಿನಲ್ಲಿ ರಿಷಬ್​ ಶೆಟ್ಟಿ ಕೂಡ ಇದ್ದಾರೆ. ಪಂಚೆ ಧರಿಸಿ ಅವರು ವೇದಿಕೆ ಏರಿದ್ದಾರೆ.

ಇದನ್ನೂ ಓದಿ: ಜೂ.ಎನ್​ಟಿಆರ್​ ಹಾಗೂ ಪ್ರಶಾಂತ್​ ನೀಲ್​ಗೆ ಹುಟ್ಟೂರು ಪರಿಚಯಿಸಿದ ರಿಷಬ್ ಶೆಟ್ಟಿ

2022ರಲ್ಲಿ ‘ಕಾಂತಾರ’ ಸಿನಿಮಾ ತೆರೆಕಂಡಿತು. ‘ಹೊಂಬಾಳೆ ಫಿಲ್ಸ್​’ ಮೂಲಕ ನಿರ್ಮಾಣ ಆದ ಈ ಚಿತ್ರಕ್ಕೆ ಸ್ವತಃ ರಿಷಬ್​ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಭೂತಕೋಲದ ಕಥೆ ಇರುವ ಈ ಸಿನಿಮಾದಲ್ಲಿ ಸಪ್ತಮಿ ಗೌಡ, ಕಿಶೋರ್​, ಅಚ್ಯುತ್​ ಕುಮಾರ್​, ಪ್ರಮೋದ್​ ಶೆಟ್ಟಿ ಮುಂತಾದವರು ಅಭಿನಯಿಸಿದ್ದಾರೆ. ರಿಷಬ್​ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶಕನಕ್ಕೆ ಫ್ಯಾನ್ಸ್​ ಫಿದಾ ಆದರು. ಕನ್ನಡ ಮಾತ್ರವಲ್ಲೇ ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿಯೂ ಈ ಸಿನಿಮಾ ಸೂಪರ್​ ಹಿಟ್​ ಆಯಿತು. ನ್ಯಾಷನಲ್​ ಅವಾರ್ಡ್​ ಪಡೆದ ರಿಷಬ್​ ಶೆಟ್ಟಿ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ