AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚ ಸುದೀಪ್​ಗೆ ಸಿಕ್ತು ಮತ್ತೊಂದು ಬ್ಯಾಟ್ ಗಿಫ್ಟ್​; ಇದರಲ್ಲಿದೆ ಹಲವು ದಿಗ್ಗಜರ ಆಟೋಗ್ರಾಫ್​

ಈಗ ಕಿಚ್ಚ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ವಿಶೇಷ ಸಂದರ್ಭದಲ್ಲಿ ಸುದೀಪ್​ಗೆ ಒಂದು ಅದ್ಭುತ ಗಿಫ್ಟ್ ಸಿಕ್ಕಿದೆ.

ಕಿಚ್ಚ ಸುದೀಪ್​ಗೆ ಸಿಕ್ತು ಮತ್ತೊಂದು ಬ್ಯಾಟ್ ಗಿಫ್ಟ್​; ಇದರಲ್ಲಿದೆ ಹಲವು ದಿಗ್ಗಜರ ಆಟೋಗ್ರಾಫ್​
ಸುದೀಪ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jun 26, 2022 | 12:46 PM

ನಟ ಕಿಚ್ಚ ಸುದೀಪ್ (Kichcha Sudeep) ಅವರಿಗೆ ಇತ್ತೀಚೆಗೆ ಖುಷಿಯ ಮೇಲೆ ಖುಷಿಯ ವಿಚಾರ ಸಿಗುತ್ತಿದೆ. ‘ವಿಕ್ರಾಂತ್ ರೋಣ’ ಚಿತ್ರದ (Vikrant Rona Movie) ಟ್ರೇಲರ್​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಅದಕ್ಕೂ ಮೊದಲು ಇಂಗ್ಲೆಂಡ್ ಆಟಗಾರ ಜೋಸ್ ಬಟ್ಲರ್ ಅವರಿಂದ ಬ್ಯಾಟ್ ಗಿಫ್ಟ್ ಸಿಕ್ಕಿತ್ತು. ಇಂದು (ಜೂನ್​ 26) ಸುದೀಪ್​ಗೆ ಮತ್ತೊಂದು ವಿಶೇಷ ಗಿಫ್ಟ್ ಸಿಕ್ಕಿದೆ. ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಅವರಿಂದ ಅನ್ನೋದು ವಿಶೇಷ. ಈ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಸುದೀಪ್​ ಅವರಿಗೆ ಸಿನಿಮಾ ಜತೆಗೆ ಕ್ರಿಕೆಟ್ ಬಗ್ಗೆಯೂ ಆಸಕ್ತಿ ಇದೆ. ಆಗಾಗ ಅವರು ಕ್ರಿಕೆಟ್ ಆಡುತ್ತಾರೆ. 1983ರಲ್ಲಿ ಟೀಂ ಇಂಡಿಯಾ ವಿಶ್ವಕಪ್ ಗೆದ್ದ ಕಥೆಯನ್ನು ಆಧರಿಸಿ ‘83’ ಚಿತ್ರ ಸಿದ್ಧಗೊಂಡಿತ್ತು. ಈ ಸಿನಿಮಾ ತಂಡ ಬೆಂಗಳೂರಿಗೆ ಬಂದಾಗ ಸುದೀಪ್ ಕೂಡ ಹಾಜರಿ ಹಾಕಿದ್ದರು. ಆ ಕ್ಷಣವನ್ನು ಅವರು ಆನಂದಿಸಿದ್ದರು. ಈಗ ಕಿಚ್ಚ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ವಿಶೇಷ ಸಂದರ್ಭದಲ್ಲಿ ಸುದೀಪ್​ಗೆ ಒಂದು ಅದ್ಭುತ ಗಿಫ್ಟ್ ಸಿಕ್ಕಿದೆ.

ಇದನ್ನೂ ಓದಿ
Image
‘ವಿಕ್ರಾಂತ್ ರೋಣ’ ಸಿನಿಮಾ ಕಲೆಕ್ಷನ್​ ಎಷ್ಟಾಗಲಿದೆ? ‘ಕಿಚ್ಚ’ ಸುದೀಪ್ ಕೊಟ್ರು ಲೆಕ್ಕಾಚಾರ
Image
Kichcha Sudeep: ಭಯಾನಕ ಕಥೆಯಲ್ಲಿ ಹೊಸ ಅಧ್ಯಾಯ ಆರಂಭ; ಗಮನ ಸೆಳೆದ ‘ವಿಕ್ರಾಂತ್ ರೋಣ’ ಟ್ರೇಲರ್
Image
Vikrant Rona: ಬಿಡುಗಡೆಗೂ ಮುನ್ನ ವಿದೇಶದಲ್ಲಿ 10 ಕೋಟಿ ರೂ. ಬಿಸ್ನೆಸ್​ ಮಾಡಿದ ‘ವಿಕ್ರಾಂತ್​ ರೋಣ’: ಸುದೀಪ್​ ಫ್ಯಾನ್ಸ್​ ಖುಷ್​
Image
ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರದ 3ಡಿ ದೃಶ್ಯ ನೋಡಿ ವಿಮರ್ಶೆ ನೀಡಿದ ಆರ್​ಜಿವಿ

1983ರಲ್ಲಿ ವಿಶ್ವಕಪ್​ ಆಡಿದ ಟೀಂ ಇಂಡಿಯಾ ಆಟಗಾರರ ಹೆಸರನ್ನು ಪುಟ್ಟ ಬ್ಯಾಟ್ ಮೇಲೆ ಬರೆಯಲಾಗಿದೆ. ಈ ಬ್ಯಾಟ್​ಮೇಲೆ ಆಟಗಾರರು ತಮ್ಮ ಹಸ್ತಾಕ್ಷರ ಹಾಕಿದ್ದಾರೆ. ಈ ಬ್ಯಾಟ್​ಅನ್ನು ಕಪಿಲ್​ ದೇವ್​ ಅವರು ಸುದೀಪ್​ಗೆ ಗಿಫ್ಟ್ ಆಗಿ ನೀಡಿದ್ದಾರೆ. ಈ ಬ್ಯಾಟ್​ನ ಫೋಟೋವನ್ನು ಹಂಚಿಕೊಂಡು ಸುದೀಪ್ ಸಂಭ್ರಮಿಸಿದ್ದಾರೆ. ‘ವಾವ್​..ಎಂತಹ ಭಾನುವಾರ. ಇಂತಹ ದೊಡ್ಡ ಸರ್​ಪ್ರೈಸ್​ಗೆ ನಿಮಗೆ ಧನ್ಯವಾದ. ಇದನ್ನು ನಾನು ನಿರೀಕ್ಷಿಸಿರಲಿಲ್ಲ. ನಾನು ವಿಶ್ವದ ತುತ್ತ ತುದಿಯಲ್ಲಿದ್ದೇನೆ. ಧನ್ಯವಾದಗಳು’ ಎಂದು ಸುದೀಪ್ ಬರೆದುಕೊಂಡಿದ್ದಾರೆ.

ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸುದೀಪ್ ಬಗ್ಗೆ ವಿಶೇಷ ಪ್ರೀತಿ ಇದೆ. ಈ ಮೊದಲು ರಾಜಸ್ಥಾನ್ ರಾಯಲ್ಸ್ ತಂಡದವರು ಸುದೀಪ್​ಗೆ ಜೆರ್ಸಿ ಗಿಫ್ಟ್ ನೀಡಿದ್ದರು. ರಾಜಸ್ಥಾನ್​ ತಂಡದ ಆಟಗಾರ ಜೋಸ್ ಬಟ್ಲರ್ ಅವರು ಬ್ಯಾಟ್​ಅನ್ನು ಸುದೀಪ್​ಗೆ ನೀಡಿದ್ದರು. ಈ ಸುದ್ದಿ ಕೂಡ ಸಾಕಷ್ಟು ಚರ್ಚೆ ಆಗಿತ್ತು.

ಇದನ್ನೂ ಓದಿ: ಜೋಸ್ ಬಟ್ಲರ್ ಕೊಟ್ಟ ಬ್ಯಾಟ್​ ಅನ್ನು ಸುದೀಪ್ ಎಲ್ಲಿಟ್ಟಿದ್ದಾರೆ? ಕಿಚ್ಚ ಕೊಟ್ರು ಉತ್ತರ

ಕೇರಳದಲ್ಲಿ ‘ವಿಕ್ರಾಂತ್​ ರೋಣ’: ಕೊಚ್ಚಿಗೆ ತೆರಳಿದ ಕಿಚ್ಚ ಸುದೀಪ್​ಗೆ ಅಭಿಮಾನಿಗಳ ಆತ್ಮೀಯ ಸ್ವಾಗತ

Published On - 12:16 pm, Sun, 26 June 22

ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ