AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಪ್ಪು ಬಿಳುಪಿನ ನಡುವೆ’ ಹಾರರ್​ ಸಿನಿಮಾ ಆದರೂ ಇದರಲ್ಲಿ ಇರೋದಿಲ್ಲ ದೆವ್ವ

ವಸಂತ್ ವಿಷ್ಣು ಮತ್ತು ವಿದ್ಯಾಶ್ರೀ ಗೌಡ ಅವರು ‘ಕಪ್ಪು ಬಿಳುಪಿನ ನಡುವೆ’ ಚಿತ್ರದಲ್ಲಿ ನಾಯಕ-ನಾಯಕಿಯಾಗಿ ಅಭಿನಯಿಸಿದ್ದಾರೆ. ಹಿರಿಯ ಕಲಾವಿದರಾದ ಶರತ್ ಲೋಹಿತಾಶ್ವ ಮತ್ತು ಬಿರಾದಾರ್ ಅವರಿಗೂ ಈ ಸಿನಿಮಾದಲ್ಲಿ ಮುಖ್ಯವಾದ ಪಾತ್ರಗಳಿವೆ. ಹಾಸ್ಯ ಕಲಾವಿದ ಹರೀಶ್, ನವೀನ್, ಮಾಹೀನ್, ತೇಜಸ್ವಿನಿ ಮುಂತಾದವರು ಈ ಚಿತ್ರದ ಪಾತ್ರವರ್ಗದಲ್ಲಿ ಇದ್ದಾರೆ.

‘ಕಪ್ಪು ಬಿಳುಪಿನ ನಡುವೆ’ ಹಾರರ್​ ಸಿನಿಮಾ ಆದರೂ ಇದರಲ್ಲಿ ಇರೋದಿಲ್ಲ ದೆವ್ವ
‘ಕಪ್ಪು ಬಿಳುಪಿನ ನಡುವೆ’ ಸಿನಿಮಾ ಟೀಮ್​
ಮದನ್​ ಕುಮಾರ್​
|

Updated on: Feb 09, 2024 | 2:48 PM

Share

ಸ್ಯಾಂಡಲ್​ವುಡ್​ನಲ್ಲಿ (Sandalwood) ನೂತನ ಪ್ರಯತ್ನಗಳಿಗೆ ಕನ್ನಡದ ಸಿನಿಪ್ರಿಯರು ಬೆಂಬಲ ನೀಡುತ್ತಾ ಬಂದಿದ್ದಾರೆ. ಹಾಗಾಗಿ ಅಂಥ ಸಿನಿಮಾಗಳು ನಿರ್ಮಾಣ ಆಗುತ್ತಿವೆ. ಈಗ ಹೊಸ ಮತ್ತು ಡಿಫರೆಂಟ್​ ಕಥೆಯ ಹಾರರ್ ಸಿನಿಮಾ (Horror Movie) ‘ಕಪ್ಪು ಬಿಳುಪಿನ ನಡುವೆ’ ಸಿದ್ಧವಾಗಿದೆ. ಧರ್ಮೇಂದ್ರ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ವೃತ್ತಿಯಲ್ಲಿ ಪಾರಂಪರಿಕ ಆಯುರ್ವೇದ ವೈದ್ಯರಾಗಿರುವ ಅವರು ಸಿನಿಮಾ ನಿರ್ಮಾಣದಲ್ಲಿ ಆಸಕ್ತಿ ತೋರಿಸಿದ್ದಾರೆ. ಅನೇಕ ವರ್ಷಗಳಿಂದ ಕನ್ನಡ ಚಿತ್ರರಂಗದ ಜೊತೆ ನಂಟು ಹೊಂದಿರುವ ವಸಂತ್ ವಿಷ್ಣು ಅವರು ಮೊದಲ ಬಾರಿಗೆ ‘ಕಪ್ಪು ಬಿಳುಪಿನ ನಡುವೆ’ (Kappu Bilupina Naduve) ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಜೊತೆಗೆ, ಅವರೇ ಹೀರೋ ಆಗಿ ನಟಿಸಿದ್ದಾರೆ. ಇತ್ತೀಚಿಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ‘ಕಪ್ಪು ಬಿಳುಪಿನ ನಡುವೆ’ ಸಿನಿಮಾತಂಡದ ಸದಸ್ಯರು ಒಂದಷ್ಟು ಮಾಹಿತಿ ಹಂಚಿಕೊಂಡರು.

ವಸಂತ್ ವಿಷ್ಣು, ವಿದ್ಯಾಶ್ರೀ ಗೌಡ ಅವರು ‘ಕಪ್ಪು ಬಿಳುಪಿನ ನಡುವೆ’ ಸಿನಿಮಾದಲ್ಲಿ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ಹಿರಿಯ ನಟರಾದ ಶರತ್ ಲೋಹಿತಾಶ್ವ, ವೈಜನಾಥ್​ ಬಿರಾದಾರ್ ಅವರಿಗೆ ಈ ಚಿತ್ರದಲ್ಲಿ ಮುಖ್ಯವಾದ ಪಾತ್ರಗಳಿವೆ. ಹಾಸ್ಯ ಕಲಾವಿದ ಹರೀಶ್, ನವೀನ್, ಮಾಹೀನ್, ತೇಜಸ್ವಿನಿ ಮುಂತಾದವರು ಈ ಚಿತ್ರದ ಪಾತ್ರವರ್ಗದಲ್ಲಿ ಇದ್ದಾರೆ. ಲಿಂಗೇಗೌಡ ಮತ್ತು ಶಣ್ಮಗ ಸುಂದರಂ ಅವರು ನಿರ್ಮಾಣದ ಉಸ್ತುವಾರಿ ನಿಭಾಯಿಸಿದ್ದಾರೆ.

ಇದನ್ನೂ ಓದಿ: ನಿಮಗೆ ಭೂತ ಕಂಡಿತ್ತಾ? ಈ ಸೆಲೆಬ್ರಿಟಿಗಳಿಗೆ ಆಗಿತ್ತು ಹಾರರ್​ ಅನುಭವ

ಮೊದಲ ಸಿನಿಮಾಗೆ ನಿರ್ದೇಶನ ಮಾಡಿರುವ ಖುಷಿಯಲ್ಲಿ ವಸಂತ್ ವಿಷ್ಣು ಮಾತನಾಡಿದ್ದಾರೆ. ‘ಈ ಮೊದಲು ನಾನು 4 ಸಿನಿಮಾಗಳಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದೆ. ಡೈರೆಕ್ಷನ್​ ವಿಭಾಗದಲ್ಲೂ ಕೆಲಸ ಮಾಡಿದ್ದೇನೆ. ಈಗ ಸ್ವತಂತ್ರವಾಗಿ ‘ಕಪ್ಪು ಬಿಳುಪಿನ ನಡುವೆ’ ಸಿನಿಮಾಗೆ ಡೈರೆಕ್ಷನ್​ ಮಾಡಿದ್ದೇನೆ. ಬೆಳಕು ಹಾಗೂ ಕತ್ತಲಿಗೆ ಪಾಸಿಟಿವ್ ಹಾಗೂ ನೆಗೆಟಿವ್ ಎನರ್ಜಿ ಅಂತಲೂ ಎನ್ನಬಹುದು. ಇದೊಂದು ಯೂಟ್ಯೂಬರ್​ಗಳ ಕುರಿತ ಸಿನಿಮಾ. ಹಾರರ್ ಸಿನಿಮಾ ಕೂಡ ಹೌದು. ಆದರೆ ಇಲ್ಲಿ ಭಯಪಡಿಸುವ ದೆವ್ವಗಳು ಇಲ್ಲ. ಹಾರಾರ್ ಜಾನರ್​ನಲ್ಲೇ ಹೊಸ ರೀತಿಯ ಪ್ರಯತ್ನವಿದು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಾರರ್ ಸಿನಿಮಾ ನೋಡುವುದರಿಂದ ತೂಕ ಇಳಿಸಿಕೊಳ್ಳಬಹುದು: ಅಧ್ಯಯನ

ಕನಕಪುರದಿಂದ 30 ಕಿಲೋಮೀಟರ್ ದೂರದ ದಟ್ಟ ಕಾಡಿನಲ್ಲಿ ‘ಕಪ್ಪು ಬಿಳುಪಿನ ನಡುವೆ’ ಚಿತ್ರದ ಹೆಚ್ಚಿನ ಶೂಟಿಂಗ್​ ಮಾಡಲಾಗಿದೆ. ಕನ್ನಡ ಮತ್ತು ತಮಿಳಿನಲ್ಲಿ ನಿರ್ಮಾಣ ಆಗಿರುವ ಈ ಚಿತ್ರವೀಗ ತೆರೆಗೆ ಬರಲು ಸಿದ್ಧವಾಗಿದೆ. ಶೀಘ್ರದಲ್ಲೇ ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ‌. ‘ಸಿನಿಮಾ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ನಿರ್ಮಾಪಕರಿಗೆ ಮತ್ತು ನನ್ನ ತಂಡಕ್ಕೆ ಧನ್ಯವಾದ’ ಎಂದು ನಿರ್ದೇಶಕರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

‘ಡೈರೆಕ್ಟರ್​ ಹೇಳಿದ ಕಥೆ ನನಗೆ ಇಷ್ಟವಾಯಿತು. ಪ್ರೇಕ್ಷಕರಿಗೆ ಒಂದು ಉತ್ತಮವಾದ ಸಂದೇಶ ನೀಡುವ ಸಿನಿಮಾವನ್ನು ನಿರ್ಮಿಸುವ ಆಸೆಯಿಂದ ಈ ಪ್ರಯತ್ನ ಮಾಡಿದ್ದೇನೆ. ಎಲ್ಲರ ಪ್ರೋತ್ಸಾಹವಿರಲಿ’ ಎಂದು ನಿರ್ಮಾಪಕ ಧರ್ಮೇಂದ್ರ ಹೇಳಿದ್ದಾರೆ. ಈ ಸಿನಿಮಾದಲ್ಲಿ 3 ಹಾಡುಗಳಿವೆ. ಎಲ್ಲದಕ್ಕೂ ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ. ‘ಕೆಜಿಎಫ್’ ಖ್ಯಾತಿಯ ಸಂತೋಷ್ ವೆಂಕಿ ಮತ್ತು ಶ್ರೀಧರ್ ಕಶ್ಯಪ್ ಧ್ವನಿ ನೀಡಿದ್ದಾರೆ. ‘ಜೀ ಮ್ಯೂಸಿಕ್​ ಸೌತ್’ ಮೂಲಕ ಹಾಡುಗಳು ರಿಲೀಸ್​ ಆಗಿವೆ. ಈ ಚಿತ್ರಕ್ಕೆ ರಿಶಾಲ್ ಸಾಯಿ ಸಂಗೀತ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ