AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಕಷ್ಟು ಭಿನ್ನವಾಗಿರಲಿದೆ ‘ಕರಟಕ ದಮನಕ’ ಸಿನಿಮಾ; ಇಲ್ಲಿದೆ ಸಾಕ್ಷಿ

ಮಾರ್ಚ್ 8ರಂದು ‘ಕರಟಕ ದಮನಕ’ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಯೋಗರಾಜ್ ಭಟ್ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಕ್ಯಾರೆಕ್ಟರ್ ಟೀಸರ್​ನ ಕಿಚ್ಚ ಸುದೀಪ್ ಅವರು ರಿಲೀಸ್ ಮಾಡಿದ್ದಾರೆ. ಈ ಸಿನಿಮಾದಲ್ಲಿ ಹಲವು ಪಾತ್ರಗಳು ಬಂದು ಹೋಗುತ್ತವೆ. ಅವುಗಳ ಪರಿಚಯವನ್ನು ನೀಡಲಾಗಿದೆ.

ಸಾಕಷ್ಟು ಭಿನ್ನವಾಗಿರಲಿದೆ ‘ಕರಟಕ ದಮನಕ’ ಸಿನಿಮಾ; ಇಲ್ಲಿದೆ ಸಾಕ್ಷಿ
ಪ್ರಭುದೇವ-ಶಿವಣ್ಣ
ರಾಜೇಶ್ ದುಗ್ಗುಮನೆ
|

Updated on: Feb 28, 2024 | 10:55 AM

Share

ನಟ ಶಿವರಾಜ್​ಕುಮಾರ್ (Shivarajkumar) ಹಾಗೂ ಪ್ರಭುದೇವ ಅವರು ಇದೇ ಮೊದಲ ಬಾರಿಗೆ ‘ಕರಟಕ ದಮನಕ’ ಸಿನಿಮಾಗಾಗಿ ಒಂದಾಗಿದ್ದಾರೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದ ಕ್ಯಾರೆಕ್ಟರ್ ಟೀಸರ್​ನ ಕಿಚ್ಚ ಸುದೀಪ್ ಅವರು ರಿಲೀಸ್ ಮಾಡಿದ್ದಾರೆ. ಈ ಟೀಸರ್ ಸಾಕಷ್ಟು ಗಮನ ಸೆಳೆದಿದೆ. ಸಿನಿಮಾ ಸಾಕಷ್ಟು ಭಿನ್ನವಾಗಿ ಮೂಡಿ ಬರಲಿದೆ ಎಂಬುದಕ್ಕೆ ಈ ಟೀಸರ್ ಸಾಕ್ಷಿ ನೀಡಿದೆ. ಈ ಟೀಸರ್ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

‘ಕಾಟೇರ’ ಸಿನಿಮಾ ಮೂಲಕ ರಾಕ್​ಲೈನ್ ವೆಂಕಟೇಶ್ ಅವರು ದೊಡ್ಡ ಗೆಲುವು ಕಂಡಿದ್ದಾರೆ. ಈಗ ಅವರ ನಿರ್ಮಾಣದಲ್ಲಿ ‘ಕರಟಕ ದಮನಕ’ ಸಿನಿಮಾ ಮೂಡಿ ಬಂದಿದೆ. ಮಾರ್ಚ್ 8ರಂದು ರಿಲೀಸ್ ಆಗಲಿರುವ ಈ ಚಿತ್ರಕ್ಕೆ ಯೋಗರಾಜ್ ಭಟ್ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಹಲವು ಪಾತ್ರಗಳು ಬಂದು ಹೋಗುತ್ತವೆ. ಅವುಗಳ ಪರಿಚಯವನ್ನು ನೀಡಲಾಗಿದೆ. ಯೋಗರಾಜ್ ಭಟ್ ಅವರು ಹೊಸ ರೀತಿಯಲ್ಲಿ ಸಿನಿಮಾ ಕಟ್ಟಿಕೊಟ್ಟಿದ್ದಾರೆ.

ಆನಂದ್ ಆಡಿಯೋ ಟ್ವೀಟ್..

‘ಕರಟಕ ದಮನಕ’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಹಾಗೂ ಪ್ರಭುದೇವ ಒಟ್ಟಾಗಿ ನಟಿಸಿದ್ದಾರೆ. ಅವರ ಪಾತ್ರಗಳು ಗಮನ ಸೆಳೆದಿವೆ. ಶಿವರಾಜ್​ಕುಮಾರ್ ಹಾಗೂ ಪ್ರಭುದೇವ ಡ್ಯಾನ್ಸ್​​ ಮಾಡುವುದರಲ್ಲಿ ಕಿಂಗ್. ಈ ಸಿನಿಮಾದಲ್ಲಿ ಇವರು ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ. ಈ ಸಿನಿಮಾದಲ್ಲಿ ಪ್ರಿಯಾ ಆನಂದ್ ಹಾಗೂ ನಿಶ್ವಿಕಾ ನಾಯ್ಡು ನಾಯಕಿ ಪಾತ್ರ ಮಾಡಿದ್ದಾರೆ. ಪ್ರಿಯಾ ಆನಂದ್ ಅವರು ಭರ್ಜರಿಯಾಗಿ ಸ್ಟೆಪ್ ಹಾಕಿದ್ದಾರೆ. ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಬ್ಯಾಂಕನ್ನು ವಂಚಿಸಿರುವ ಆರೋಪದಲ್ಲಿ ಸಿಸಿಬಿಯಿಂದ ರಾಕ್​ಲೈನ್ ವೆಂಕಟೇಶ್ ಮಗನ ವಿಚಾರಣೆ!

ರಾಕ್​ಲೈನ್ ವೆಂಕಟೇಶ್ ಅವರು ಸಿನಿಮಾ ನಿರ್ಮಾಣ ಮಾಡುವುದರ ಜೊತೆಗೆ ಒಂದು ಪಾತ್ರವನ್ನೂ ಮಾಡಿದ್ದಾರೆ. ಪೊಲೀಸ್ ಗೆಟಪ್​ನಲ್ಲಿ ಅವರು ಎಂಟ್ರಿ ಕೊಟ್ಟಿದ್ದಾರೆ. ರಂಗಾಯಣ ರಘು, ರವಿಶಂಕರ್ ಹಾಗೂ ದೊಡ್ಡಣ್ಣ ಭಿನ್ನ ಗೆಟಪ್​​ಗಳಲ್ಲಿ ಮಿಂಚಿದ್ದಾರೆ. ‘ಕರಟಕ ದಮನಕ’ ಸಿನಿಮಾಗೆ ಈ ಕಿಚ್ಚ ಸುದೀಪ್ ಅವರು ಬೆಂಬಲ ನೀಡಿರುವುದು ತಂಡದ ಖುಷಿ ಹೆಚ್ಚಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್