AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಕಷ್ಟು ಭಿನ್ನವಾಗಿರಲಿದೆ ‘ಕರಟಕ ದಮನಕ’ ಸಿನಿಮಾ; ಇಲ್ಲಿದೆ ಸಾಕ್ಷಿ

ಮಾರ್ಚ್ 8ರಂದು ‘ಕರಟಕ ದಮನಕ’ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಯೋಗರಾಜ್ ಭಟ್ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಕ್ಯಾರೆಕ್ಟರ್ ಟೀಸರ್​ನ ಕಿಚ್ಚ ಸುದೀಪ್ ಅವರು ರಿಲೀಸ್ ಮಾಡಿದ್ದಾರೆ. ಈ ಸಿನಿಮಾದಲ್ಲಿ ಹಲವು ಪಾತ್ರಗಳು ಬಂದು ಹೋಗುತ್ತವೆ. ಅವುಗಳ ಪರಿಚಯವನ್ನು ನೀಡಲಾಗಿದೆ.

ಸಾಕಷ್ಟು ಭಿನ್ನವಾಗಿರಲಿದೆ ‘ಕರಟಕ ದಮನಕ’ ಸಿನಿಮಾ; ಇಲ್ಲಿದೆ ಸಾಕ್ಷಿ
ಪ್ರಭುದೇವ-ಶಿವಣ್ಣ
ರಾಜೇಶ್ ದುಗ್ಗುಮನೆ
|

Updated on: Feb 28, 2024 | 10:55 AM

Share

ನಟ ಶಿವರಾಜ್​ಕುಮಾರ್ (Shivarajkumar) ಹಾಗೂ ಪ್ರಭುದೇವ ಅವರು ಇದೇ ಮೊದಲ ಬಾರಿಗೆ ‘ಕರಟಕ ದಮನಕ’ ಸಿನಿಮಾಗಾಗಿ ಒಂದಾಗಿದ್ದಾರೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದ ಕ್ಯಾರೆಕ್ಟರ್ ಟೀಸರ್​ನ ಕಿಚ್ಚ ಸುದೀಪ್ ಅವರು ರಿಲೀಸ್ ಮಾಡಿದ್ದಾರೆ. ಈ ಟೀಸರ್ ಸಾಕಷ್ಟು ಗಮನ ಸೆಳೆದಿದೆ. ಸಿನಿಮಾ ಸಾಕಷ್ಟು ಭಿನ್ನವಾಗಿ ಮೂಡಿ ಬರಲಿದೆ ಎಂಬುದಕ್ಕೆ ಈ ಟೀಸರ್ ಸಾಕ್ಷಿ ನೀಡಿದೆ. ಈ ಟೀಸರ್ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

‘ಕಾಟೇರ’ ಸಿನಿಮಾ ಮೂಲಕ ರಾಕ್​ಲೈನ್ ವೆಂಕಟೇಶ್ ಅವರು ದೊಡ್ಡ ಗೆಲುವು ಕಂಡಿದ್ದಾರೆ. ಈಗ ಅವರ ನಿರ್ಮಾಣದಲ್ಲಿ ‘ಕರಟಕ ದಮನಕ’ ಸಿನಿಮಾ ಮೂಡಿ ಬಂದಿದೆ. ಮಾರ್ಚ್ 8ರಂದು ರಿಲೀಸ್ ಆಗಲಿರುವ ಈ ಚಿತ್ರಕ್ಕೆ ಯೋಗರಾಜ್ ಭಟ್ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಹಲವು ಪಾತ್ರಗಳು ಬಂದು ಹೋಗುತ್ತವೆ. ಅವುಗಳ ಪರಿಚಯವನ್ನು ನೀಡಲಾಗಿದೆ. ಯೋಗರಾಜ್ ಭಟ್ ಅವರು ಹೊಸ ರೀತಿಯಲ್ಲಿ ಸಿನಿಮಾ ಕಟ್ಟಿಕೊಟ್ಟಿದ್ದಾರೆ.

ಆನಂದ್ ಆಡಿಯೋ ಟ್ವೀಟ್..

‘ಕರಟಕ ದಮನಕ’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಹಾಗೂ ಪ್ರಭುದೇವ ಒಟ್ಟಾಗಿ ನಟಿಸಿದ್ದಾರೆ. ಅವರ ಪಾತ್ರಗಳು ಗಮನ ಸೆಳೆದಿವೆ. ಶಿವರಾಜ್​ಕುಮಾರ್ ಹಾಗೂ ಪ್ರಭುದೇವ ಡ್ಯಾನ್ಸ್​​ ಮಾಡುವುದರಲ್ಲಿ ಕಿಂಗ್. ಈ ಸಿನಿಮಾದಲ್ಲಿ ಇವರು ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ. ಈ ಸಿನಿಮಾದಲ್ಲಿ ಪ್ರಿಯಾ ಆನಂದ್ ಹಾಗೂ ನಿಶ್ವಿಕಾ ನಾಯ್ಡು ನಾಯಕಿ ಪಾತ್ರ ಮಾಡಿದ್ದಾರೆ. ಪ್ರಿಯಾ ಆನಂದ್ ಅವರು ಭರ್ಜರಿಯಾಗಿ ಸ್ಟೆಪ್ ಹಾಕಿದ್ದಾರೆ. ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಬ್ಯಾಂಕನ್ನು ವಂಚಿಸಿರುವ ಆರೋಪದಲ್ಲಿ ಸಿಸಿಬಿಯಿಂದ ರಾಕ್​ಲೈನ್ ವೆಂಕಟೇಶ್ ಮಗನ ವಿಚಾರಣೆ!

ರಾಕ್​ಲೈನ್ ವೆಂಕಟೇಶ್ ಅವರು ಸಿನಿಮಾ ನಿರ್ಮಾಣ ಮಾಡುವುದರ ಜೊತೆಗೆ ಒಂದು ಪಾತ್ರವನ್ನೂ ಮಾಡಿದ್ದಾರೆ. ಪೊಲೀಸ್ ಗೆಟಪ್​ನಲ್ಲಿ ಅವರು ಎಂಟ್ರಿ ಕೊಟ್ಟಿದ್ದಾರೆ. ರಂಗಾಯಣ ರಘು, ರವಿಶಂಕರ್ ಹಾಗೂ ದೊಡ್ಡಣ್ಣ ಭಿನ್ನ ಗೆಟಪ್​​ಗಳಲ್ಲಿ ಮಿಂಚಿದ್ದಾರೆ. ‘ಕರಟಕ ದಮನಕ’ ಸಿನಿಮಾಗೆ ಈ ಕಿಚ್ಚ ಸುದೀಪ್ ಅವರು ಬೆಂಬಲ ನೀಡಿರುವುದು ತಂಡದ ಖುಷಿ ಹೆಚ್ಚಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್