AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karataka Damanaka Trailer: ಉತ್ತರ ಕರ್ನಾಟಕದ ಊರು, ನೀರು, ತೇರಿನ ಕಥೆ ಇರುವ ಸಿನಿಮಾ

ಬಹುನಿರೀಕ್ಷಿತ ‘ಕರಟಕ ದಮನಕ’ ಚಿತ್ರದ ಟ್ರೇಲರ್​ ಬಿಡುಗಡೆ ಆಗಿದೆ. ಮಾರ್ಚ್​ 8ರಂದು ಶಿವರಾತ್ರಿ ಹಬ್ಬದ ಪ್ರಯುಕ್ತ ತೆರೆಕಾಣುತ್ತಿರುವ ಈ ಸಿನಿಮಾಗೆ ಯೋಗರಾಜ್​ ಭಟ್​ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಕಥೆಯ ಬಗ್ಗೆ ಈ ಟ್ರೇಲರ್​ನಲ್ಲಿ ಸುಳಿವು ಬಿಟ್ಟುಕೊಡಲಾಗಿದೆ. ಪ್ರಭುದೇವ, ಶಿವರಾಜ್​ಕುಮಾರ್​ ನಟನೆಯ ಈ ಸಿನಿಮಾದಲ್ಲಿ ಉತ್ತರ ಕರ್ನಾಟಕದ ಕಥೆ ಇದೆ.

Karataka Damanaka Trailer: ಉತ್ತರ ಕರ್ನಾಟಕದ ಊರು, ನೀರು, ತೇರಿನ ಕಥೆ ಇರುವ ಸಿನಿಮಾ
ಶಿವರಾಜ್​ಕುಮಾರ್​, ಪ್ರಭುದೇವ
ಮದನ್​ ಕುಮಾರ್​
|

Updated on: Mar 07, 2024 | 7:18 PM

Share

ನಿರ್ದೇಶಕ ಯೋಗರಾಜ್​ ಭಟ್​ (Yogaraj Bhat) ಅವರು ಒಂದೇ ಪ್ರಕಾರದ ಸಿನಿಮಾಗಳಿಗೆ ಗಂಟು ಬಿದ್ದವರಲ್ಲ. ಪ್ರತಿ ಸಿನಿಮಾದಲ್ಲೂ ಅವರು ಏನಾದರೂ ವಿಶೇಷವಾದದ್ದನ್ನು ಪ್ರೇಕ್ಷಕರಿಗೆ ನೀಡುತ್ತಾರೆ. ಈಗ ಅವರು ‘ಕರಟಕ ದಮನಕ’ (Karataka Damanaka) ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಶಿವರಾತ್ರಿ ಪ್ರಯುಕ್ತ ಮಾರ್ಚ್​ 8ರಂದು ಈ ಸಿನಿಮಾ ಬಿಡುಗಡೆ ಆಗುತ್ತಿದೆ. ಸಿನಿಮಾ ತೆರೆಕಾಣುವುದಕ್ಕೂ ಒಂದು ದಿನ ಮುನ್ನ, ಅಂದರೆ ಇಂದು (ಮಾರ್ಚ್​ 7) ‘ಕರಟಕ ದಮನಕ’ ಸಿನಿಮಾದ ಟ್ರೇಲರ್​ (Karataka Damanaka Trailer) ಅನಾವರಣ ಮಾಡಲಾಗಿದೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್​, ಪ್ರಭುದೇವ, ನಿಶ್ವಿಕಾ ನಾಯ್ಡು, ಪ್ರಿಯಾ ಆನಂದ್​ ಮುಂತಾದವರು ನಟಿಸಿದ್ದಾರೆ.

ಮೊದಲ ಬಾರಿಗೆ ಶಿವರಾಜ್​ಕುಮಾರ್​ ಮತ್ತು ಪ್ರಭುದೇವ ಅವರು ಒಟ್ಟಾಗಿ ನಟಿಸಿರುವುದರಿಂದ ‘ಕರಟಕ ದಮನಕ’ ಸಿನಿಮಾದ ಮೇಲೆ ನಿರೀಕ್ಷೆ ಮೂಡಿದೆ. ಈ ಸಿನಿಮಾದ ತಿರುಳು ಏನು ಎಂಬುದನ್ನು ಟ್ರೇಲರ್​ ಮೂಲಕ ತಿಳಿಸಲಾಗಿದೆ. ಈ ಬಾರಿ ಯೋಗರಾಜ್​ ಭಟ್​ ಅವರು ಅಪ್ಪಟ ಉತ್ತರ ಕರ್ನಾಟಕದ ಕಹಾನಿ ಇರುವ ಸಿನಿಮಾವನ್ನು ಮಾಡಿದ್ದಾರೆ. ಈ ಸಿನಿಮಾದಲ್ಲಿ ಊರು, ನೀರು ಮತ್ತು ತೇರಿನ ಕಥೆ ಹೇಳಲಾಗುತ್ತಿದೆ.

ಈ ವರ್ಷ ಸರಿಯಾಗಿ ಮಳೆ ಆಗಿಲ್ಲ. ಹಾಗಾಗಿ ಅನೇಕ ಜಿಲ್ಲೆಗಳಲ್ಲಿ ಬರಗಾಲ ಎದುರಾಗಿದೆ. ನೀರಿಗಾಗಿ ಹಾಹಾಕಾರ ಶುರುವಾಗಿದೆ. ಈ ಸಮಯಕ್ಕೆ ಸರಿಯಾಗಿ ‘ಕರಕಟ ದಮನಕ’ ಸಿನಿಮಾ ಬಿಡುಗಡೆ ಆಗುತ್ತಿದೆ. ನೀರಿನ ಕಥೆ ಈ ಸಿನಿಮಾದಲ್ಲಿ ಇದೆ. ಹಾಗಾಗಿ ಪ್ರೇಕ್ಷಕರಿಗೆ ಹೆಚ್ಚು ಕನೆಕ್ಟ್​ ಆಗಲಿದೆ. ಇತ್ತೀಚೆಗೆ ‘ಕಾಟೇರ’ ಸಿನಿಮಾ ಮೂಲಕ ದೊಡ್ಡ ಯಶಸ್ಸು ಕಂಡಿರುವ ರಾಕ್​ಲೈನ್​ ವೆಂಕಟೇಶ್​ ಅವರು ‘ಕರಕಟ ದಮನಕ’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ.

‘ಕರಟಕ ದಮನಕ’ ಸಿನಿಮಾದ ಟ್ರೇಲರ್​:

‘ಕರಟಕ ದಮನಕ’ ಸಿನಿಮಾದ ಟ್ರೇಲರ್​ ನೋಡಿದ ಪ್ರೇಕ್ಷಕರ ಮನದಲ್ಲಿ ನಿರೀಕ್ಷೆ ಮೂಡಿದೆ. ‘ಈ ಸಿನಿಮಾವನ್ನು ನೋಡಲೇಬೇಕು’ ಎಂದು ಅನೇಕರು ಕಮೆಂಟ್​ ಮಾಡುತ್ತಿದ್ದಾರೆ. ‘ಉತ್ತರ ಕರ್ನಾಟಕದ ಜನರ ಪರಿಸ್ಥಿತಿ ಮತ್ತು ಅಲ್ಲಿನ ಇನ್ನಿತರ ಸನ್ನಿವೇಶಗಳನ್ನು ತೋರಿಸಲು ಹೊರಟಿರುವ ನಿರ್ದೇಶಕ ಯೋಗರಾಜ್​ ಭಟ್​ ಅವರಿಗೆ ಧನ್ಯವಾದಗಳು’ ಎಂಬ ಕಮೆಂಟ್​ ಕೂಡ ಬಂದಿದೆ. ಈ ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ ನೀಡಿದ್ದಾರೆ. ಕೆ.ಎಂ. ಪ್ರಕಾಶ್​ ಸಂಕಲನ ಮಾಡಿದ್ದಾರೆ. ಸಂತೋಷ್​ ರೈ ಪಾತಾಜೆ ಅವರ ಛಾಯಾಗ್ರಹಣವಿದೆ.

ಇದನ್ನೂ ಓದಿ: ಮಾಳು ನಿಪನಾಳ ಹಾಡಿದ ಗೀತೆಗೆ ಪ್ರಭುದೇವ ಡ್ಯಾನ್ಸ್​; ಮಿಲಿಯನ್​ ವೀವ್ಸ್​

ಶಿವರಾಜ್​ಕುಮಾರ್ ಮತ್ತು ಪ್ರಭುದೇವ ಅವರ ಜೊತೆ ದೊಡ್ಡಣ್ಣ, ರಾಕ್​ಲೈನ್​ ವೆಂಕಟೇಶ್​, ವೈಜನಾಥ ಬೀರಾದಾರ, ಪಿ. ರವಿಶಂಕರ್​, ರಂಗಾಯಣ ರಘು ಮುಂತಾದ ಕಲಾವಿದರು ‘ಕರಟಕ ದಮನಕ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾದ ಹಾಡುಗಳು ಹಿಟ್​ ಆಗಿವೆ. ‘ಹಿತಲಕ ಕರಿಬ್ಯಾಡ ಮಾವ..’, ‘ಡೀಗ ಡಿಗರಿ..’ ಹಾಡುಗಳು ಜನಮೆಚ್ಚುಗೆ ಪಡೆದಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್