AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾನುವಾರ ಭರ್ಜರಿ ಗಳಿಕೆ ಮಾಡಿದ ‘ಕರಾವಳಿ’ ಸಿನಿಮಾ; ಒಟ್ಟೂ ಕಲೆಕ್ಷನ್ ಎಷ್ಟು?

Karavali Movie Box Office Collection: ವಿವಾದಗಳ ನಡುವೆಯೂ ತೆರೆಕಂಡ ಪ್ರಜ್ವಲ್ ದೇವರಾಜ್ ಹಾಗೂ ರಾಜ್ ಬಿ. ಶೆಟ್ಟಿ ಅಭಿನಯದ 'ಕರಾವಳಿ' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಪಾಸಿಟಿವ್ ವಿಮರ್ಶೆಗಳೊಂದಿಗೆ ವೀಕೆಂಡ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿರುವ ಚಿತ್ರದ ಒಟ್ಟು ಗಳಿಕೆ ಈಗ 4 ಕೋಟಿ ರೂಪಾಯಿ ಸಮೀಪಿಸಿದೆ.

ಭಾನುವಾರ ಭರ್ಜರಿ ಗಳಿಕೆ ಮಾಡಿದ ‘ಕರಾವಳಿ’ ಸಿನಿಮಾ; ಒಟ್ಟೂ ಕಲೆಕ್ಷನ್ ಎಷ್ಟು?
ರಾಜ್
ರಾಜೇಶ್ ದುಗ್ಗುಮನೆ
|

Updated on:Jul 27, 2026 | 7:31 AM

Share

ಮುಖ್ಯಾಂಶಗಳು

  • ಮೂರೇ ದಿನಕ್ಕೆ 4 ಕೋಟಿಯ ಸಮೀಪ ಮುಟ್ಟಿದ 'ಕರಾವಳಿ'
  • ವಿವಾದಗಳನ್ನೆಲ್ಲ ಬದಿಗೊತ್ತಿ ಬಾಕ್ಸ್ ಆಫೀಸ್‌ನಲ್ಲಿ ಅಬ್ಬರ
  • ಕರಾವಳಿ ಮಣ್ಣಿನ ಸೊಗಡಿನ ಕಥೆಗೆ ಪ್ರೇಕ್ಷಕರು ಫಿದಾ

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದಾದ ‘ಕರಾವಳಿ’ (Karavali Movie) ಬಾಕ್ಸ್ ಆಫೀಸ್‌ನಲ್ಲಿ ಮೊದಲ ದಿನ ಸಾಧಾರಣ ಕಲೆಕ್ಷನ್ ಮಾಡಿತ್ತು. ಆದರೆ, ದಿನದಿಂದ ದಿನಕ್ಕೆ ಗಳಿಕೆಯಲ್ಲಿ ಭಾರಿ ಏರಿಕೆ ಕಾಣುತ್ತಿದೆ. ಬಿಡುಗಡೆಯಾದ ಮೊದಲ ದಿನ ಕೇವಲ 68 ಲಕ್ಷ ರೂಪಾಯಿ ಗಳಿಸಿದ್ದ ಈ ಚಿತ್ರ, ಆ ಬಳಿಕ ಪ್ರೇಕ್ಷಕರಿಂದ ಸಿಕ್ಕ ಪಾಸಿಟಿವ್ ವಿಮರ್ಶೆಗಳ ಬೆಂಬಲದೊಂದಿಗೆ ಗಲ್ಲಾಪೆಟ್ಟಿಗೆಯಲ್ಲಿ ಅಬ್ಬರಿಸುತ್ತಿದೆ. ಸದ್ಯ ಚಿತ್ರಮಂದಿರಗಳಲ್ಲಿ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿರುವ ಈ ಸಿನಿಮಾದ ಒಟ್ಟಾರೆ ಗಳಿಕೆ ಹೆಚ್ಚುತ್ತಿದೆ. ಸಿನಿಮಾದ ಒಟ್ಟೂ ಗಳಿಕೆ ನಾಲ್ಕು ಕೋಟಿ ರೂಪಾಯಿ ಸಮೀಪಕ್ಕೆ ಬಂದು ತಲುಪಿದೆ.

ಚಿತ್ರದ ದಿನಾವಾರು ಕಲೆಕ್ಷನ್ ನೋಡುವುದಾದರೆ, ಮೊದಲ ದಿನ 0.68 ಕೋಟಿ ರೂಪಾಯಿ ಗಳಿಸಿದ್ದ ಸಿನಿಮಾ, ಎರಡನೇ ದಿನ ಅಂದರೆ ಶನಿವಾರದಂದು 1.14 ಕೋಟಿ ರೂಪಾಯಿ ಬಾಚಿಕೊಂಡಿತು. ಇನ್ನು ಮೂರನೇ ದಿನ ಭಾನುವಾರದ ವೀಕೆಂಡ್ ಲಾಭವನ್ನು ಸಂಪೂರ್ಣವಾಗಿ ಪಡೆದುಕೊಂಡ ಚಿತ್ರ 1.64 ಕೋಟಿ ರೂಪಾಯಿ ಗಳಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಚಿತ್ರದ ಭಾರತದ ನೆಟ್ ಕಲೆಕ್ಷನ್ 3.46 ಕೋಟಿ ರೂಪಾಯಿಗೆ ತಲುಪಿದೆ. ಇಂಡಿಯಾ ಗ್ರಾಸ್ ಕಲೆಕ್ಷನ್ ಬರೋಬ್ಬರಿ 3.88 ಕೋಟಿ ರೂಪಾಯಿ ದಾಟಿದೆ ಎಂದು ಸ್ಯಾಸ್ನಿಲ್ಕ್​ ವರದಿ ಮಾಡಿದೆ.

ಇನ್ನು ಈ ಸಿನಿಮಾ ಬಿಡುಗಡೆಗೂ ಮುನ್ನ ನಟ ಪ್ರಜ್ವಲ್ ದೇವರಾಜ್ ವಿಷಯದಲ್ಲಿ ದೊಡ್ಡ ವಿವಾದವನ್ನೇ ಸೃಷ್ಟಿಸಿಕೊಂಡಿತ್ತು. ಟ್ರೈಲರ್ ಲಾಂಚ್ ವೇಳೆ ಪ್ರಜ್ವಲ್ ದೇವರಾಜ್ ಗೈರುಹಾಜರಿ, ಸಂಭಾವನೆ ಬಾಕಿ ಹಾಗೂ ಅವರ ಧ್ವನಿಗೆ ಬೇರೆ ಕಲಾವಿದರಿಂದ ಡಬ್ಬಿಂಗ್ ಮಾಡಿಸಿದ ವಿಚಾರವಾಗಿ ಅಭಿಮಾನಿಗಳಿಂದ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ; ವಿಡಿಯೋ ನೋಡಿ

ಸದ್ಯ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ, ಮಿತ್ರ ಹಾಗೂ ರಮೇಶ್ ಇಂದಿರ ಸೇರಿದಂತೆ ಪ್ರಮುಖ ತಾರಾಗಣದ ಅದ್ಭುತ ನಟನೆ ಮತ್ತು ಗುರುದತ್ ಗಾಣಿಗ ಅವರ ನಿರ್ದೇಶನವು ವಿವಾದಗಳನ್ನೆಲ್ಲ ಬದಿಗೊತ್ತಿ ಚಿತ್ರವನ್ನು ಯಶಸ್ಸಿನತ್ತ ಮುನ್ನಡೆಸುವಂತೆ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:30 am, Mon, 27 July 26

Follow Us
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್