AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ಪಾತ್ರದ ಬಗ್ಗೆ ಹರಡಿದ್ದ ಗಾಳಿಸುದ್ದಿಗೆ ಸ್ಪಷ್ಟನೆ ನೀಡಿದ ‘ಕರಾವಳಿ’ ಸಿನಿಮಾ ತಂಡ

ಪ್ರಜ್ವಲ್​ ದೇವರಾಜ್​ ಅವರು ‘ಕರಾವಳಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಗುರುದತ್ತ ಗಾಣಿಗ ನಿರ್ದೇಶನದ ಈ ಸಿನಿಮಾದ ಪೋಸ್ಟರ್​ಗಳು ಗಮನ ಸೆಳೆದಿವೆ. ಇದೇ ಸಿನಿಮಾದಲ್ಲಿ ದರ್ಶನ್​ ಕೂಡ ಅಭಿನಯಿಸುತ್ತಾರೆ ಎಂದು ಗಾಳಿಸುದ್ದಿ ಹರಡಿತ್ತು. ಅದಕ್ಕೆ ಸಂಬಂಧಿಸಿದಂತೆ ಈಗ ಚಿತ್ರತಂಡದವರು ಸ್ಪಷ್ಟನೆ ನೀಡಿದ್ದಾರೆ. ಇಂಥ ಗಾಸಿಪ್​ ಹರಡಿದ್ದು ಹೇಗೆ ಎಂಬುದನ್ನು ಕೂಡ ‘ಕರಾವಳಿ’ ವಿವರಿಸಿದೆ..

ದರ್ಶನ್​ ಪಾತ್ರದ ಬಗ್ಗೆ ಹರಡಿದ್ದ ಗಾಳಿಸುದ್ದಿಗೆ ಸ್ಪಷ್ಟನೆ ನೀಡಿದ ‘ಕರಾವಳಿ’ ಸಿನಿಮಾ ತಂಡ
ದರ್ಶನ್​, ಪ್ರಜ್ವಲ್​ ದೇವರಾಜ್​
ಮದನ್​ ಕುಮಾರ್​
|

Updated on: Jul 07, 2024 | 2:50 PM

Share

ಕಳೆದ ಒಂದಷ್ಟು ದಿನಗಳಿಂದ ಎಲ್ಲೆಲ್ಲೂ ದರ್ಶನ್​ ಕುರಿತ ಸುದ್ದಿಯೇ ಕೇಳಿಬರುತ್ತಿದೆ. ಒಂದು ಕಡೆ ರೇಣುಕಾ ಸ್ವಾಮಿಯ ಕೊಲೆ ಪ್ರಕರಣದಲ್ಲಿ ದರ್ಶನ್​ ಎ2 ಆಗಿರುವ ಕಾರಣದಿಂದ ಈ ಕೇಸ್​ ಹೈಪ್​ ಪಡೆದುಕೊಂಡಿದೆ. ಇನ್ನೊಂದೆಡೆ, ದರ್ಶನ್​ ಏನಾದರೂ ಜೈಲುಪಾಲಾದರೆ ಅವರು ನಟಿಸಬೇಕಿರುವ ಸಿನಿಮಾಗಳ ಗತಿ ಏನು ಎಂಬ ಬಗ್ಗೆ ಚರ್ಚೆ ಕೂಡ ನಡೆಯುತ್ತಿದೆ. ಈ ನಡುವೆ ಪ್ರಜ್ವಲ್​ ದೇವರಾಜ್​ ನಟನೆಯ ‘ಕರಾವಳಿ’ ಸಿನಿಮಾದಲ್ಲಿ ದರ್ಶನ್ ನಟಿಸಬೇಕಿತ್ತು ಎಂದು ಇತ್ತೀಚೆಗೆ ಗಾಸಿಪ್​ ಹಬ್ಬಿತ್ತು. ಅಲ್ಲದೇ, ದರ್ಶನ್​ ನ್ಯಾಯಾಂಗ ಬಂಧನದಲ್ಲಿ ಇರುವುದರಿಂದ ದರ್ಶನ್​ ಬದಲಿಗೆ ಬೇರೆ ನಟರನ್ನು ಆಯ್ಕೆ ಮಾಡಲು ಚಿತ್ರತಂಡ ಆಲೋಚಿಸಿದೆ ಎಂದು ಕೂಡ ವದಂತಿ ಹರಡಿತ್ತು. ಆ ವಿಚಾರಕ್ಕೆ ಸಂಬಂಧಿಸಿದಂತೆ ಈಗ ‘ಕರಾವಳಿ’ ಚಿತ್ರತಂಡವೇ ಸ್ಪಷ್ಟನೆ ನೀಡಿದೆ.

ಸ್ಟಾರ್​ ಕಲಾವಿದರಿಂದ ಅತಿಥಿ ಪಾತ್ರ ಮಾಡಿಸಿದರೆ ಸಿನಿಮಾದ ಮೆರುಗು ಹೆಚ್ಚುತ್ತದೆ. ‘ಕರಾವಳಿ’ ಸಿನಿಮಾ ಕೂಡ ಅಂಥ ಪ್ಲ್ಯಾನ್​ ಮಾಡಿಕೊಂಡಿರುವುದು ಹೌದು. ಆದರೆ ಆ ಪಾತ್ರದಲ್ಲಿ ಯಾವ ಹೀರೋ ನಟಿಸುತ್ತಾರೆ ಎಂಬುದು ಇನ್ನೂ ಅಂತಿಮವಾಗಿರಲಿಲ್ಲ. ಅಷ್ಟರಲ್ಲಾಗಲೇ ಗಾಸಿಪ್​ ಮಂದಿಯ ಬಾಯಲ್ಲಿ ದರ್ಶನ್​ ಹೆಸರು ಕೇಳಿಬರಲು ಆರಂಭಿಸಿತು. ಆದರೆ ಇದರ ಹಿಂದಿರುವ ಅಸಲಿಯತ್ತು ಏನು ಎಂಬುದನ್ನು ತಿಳಿಸಲು ‘ಕರಾವಳಿ‘ ಚಿತ್ರತಂಡದವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

‘ಮಾಧ್ಯಮಗಳಲ್ಲಿ ಕನ್ನಡ ಚಿತ್ರರಂಗದ ಜನಪ್ರಿಯ ನಟ ದರ್ಶನ್​ ತೂಗುದೀಪ ಅವರನ್ನು ಪ್ರಜ್ವಲ್ ದೇವರಾಜ್ ಅಭಿನಯದ, ಗುರುದತ್ತ ಗಾಣಿಗ ನಿರ್ದೇಶನದ ‘ಕರಾವಳಿ’ ಚಿತ್ರದಿಂದ ಕೈಬಿಡಲಾಗಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಆದರೆ ಈ ಸುದ್ದಿ ಸತ್ಯಕ್ಕೆ ದೂರವಾಗಿದೆ’ ಎಂದು ಚಿತ್ರತಂಡದವರು ಹೇಳಿದ್ದಾರೆ. ಆ ಮೂಲಕ ಎಲ್ಲ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಇದನ್ನೂ ಓದಿ: ದರ್ಶನ್​ಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದಕ್ಕೆ ಕಾರಣ ನೀಡಿದ ಮಾಜಿ ಮೇಯರ್

‘ಕರಾವಳಿ ಸಿನಿಮಾದ ಮಹಾವೀರ ಎನ್ನುವ ವಿಶೇಷ ಪಾತ್ರವನ್ನು ಶಿವರಾಜ್​ಕುಮಾರ್, ಕಿಚ್ಚ ಸುದೀಪ್, ದರ್ಶನ್​ ತೂಗುದೀಪ ಅವರಂತಹ ಜನಪ್ರಿಯ ನಟರು ಅಭಿನಯಿಸಬೇಕು ಎನ್ನುವುದು ಚಿತ್ರತಂಡದ ಖಾಸಗಿ ಚರ್ಚೆಗಾಗಿತ್ತು. ಆದರೆ ಈ ವಿಚಾರ ಕಿಡಿಗೇಡಿಗಳಿಂದ ಹೊರಬಿದ್ದು ತಿರುಚಲ್ಪಟ್ಟು ಮಾಧ್ಯಮಗಳಲ್ಲಿ ಪ್ರಸಾರಗೊಂಡಿರುವುದು ಚಿತ್ರತಂಡಕ್ಕೆ ಬೇಸರತಂದಿದೆ. ಮಹಾವೀರ ಎಂಬ ಪಾತ್ರವನ್ನು ಯಾರು ಮಾಡಲಿದ್ದಾರೆ ಎನ್ನುವ ವಿಚಾರವನ್ನು ಅಧಿಕೃತವಾಗಿ ಸಿನಿಮಾತಂಡವೇ ತಿಳಿಸಲಿದೆ’ ಎಂದು ಕೂಡ ಸ್ಪಷ್ಟನೆ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ