ಕರೀನಾ ಕೇಳಿದಷ್ಟು ಹಣ ಕೊಡಲಿಲ್ಲವೇ ‘ಟಾಕ್ಸಿಕ್’ ತಂಡದವರು? ಹೊಸ ಚರ್ಚೆ ಶುರು

ಯಶ್​ ಜೊತೆ ಕರೀನಾ ಕಪೂರ್​ ಖಾನ್ ನಟಿಸುತ್ತಾರೆ ಎಂದು ಅವರ ಅಭಿಮಾನಿಗಳು ಕನಸು ಕಂಡಿದ್ದರು. ಆದರೆ ಅದೇಕೋ ನಿಜವಾಗುವ ಹಾಗೆ ಕಾಣುತ್ತಿಲ್ಲ. ‘ಟಾಕ್ಸಿಕ್​’ ಚಿತ್ರತಂಡದಿಂದ ಕರೀನಾ ಕಪೂರ್​ ಖಾನ್​ ಅವರು ಹೊರಬಂದಿದ್ದಾರೆ ಎಂಬ ಗುಸುಗುಸು ಹರಡಿದೆ. ಅದಕ್ಕೆ ಸಂಭಾವನೆಯೇ ಕಾರಣ ಎಂದು ಕೆಲವರು ಊಹಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ಕರೀನಾ ಕೇಳಿದಷ್ಟು ಹಣ ಕೊಡಲಿಲ್ಲವೇ ‘ಟಾಕ್ಸಿಕ್’ ತಂಡದವರು? ಹೊಸ ಚರ್ಚೆ ಶುರು
ಕರೀನಾ ಕಪೂರ್​, ಯಶ್​
Follow us
|

Updated on: May 09, 2024 | 7:18 PM

ನಟಿ ಕರೀನಾ ಕಪೂರ್​ ಖಾನ್​ ಅವರು ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದಲ್ಲಿ ನಟಿಸುತ್ತಾರೆ ಎಂಬ ಗಾಸಿಪ್​ ಹರಡಿತ್ತು. ಆದರೆ ಇತ್ತೀಚೆಗೆ ಕೇಳಿಬಂದ ಗುಸುಗುಸು ಪ್ರಕಾರ, ಅವರು ಈ ಚಿತ್ರತಂಡದಿಂದ ಹೊರನಡೆದಿದ್ದಾರಂತೆ. ಅದಕ್ಕೆ ಕಾರಣ ಏನು ಎಂಬ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಅದರ ಬೆನ್ನಲ್ಲೇ ಕರೀನಾ ಕಪೂರ್​ ಖಾನ್​ (Kareena Kapoor Khan) ಅವರು ಮಾರ್ಮಿಕವಾಗಿ ಒಂದು ಪೋಸ್ಟ್​ ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ಬಳಿಕ, ಯಶ್​ (Yash) ಜೊತೆ ಕರೀನಾ ನಟಿಸುವುದು ಬಹುತೇಕ ಅನುಮಾನ ಎಂದು ಸಿನಿಪ್ರಿಯರು ಮಾತನಾಡಿಕೊಳ್ಳುತ್ತಿದ್ದಾರೆ.

ಕರೀನಾ ಕಪೂರ್​ ಅವರಿಗೆ ಸಖತ್​ ಬೇಡಿಕೆ ಇದೆ. ಇತ್ತೀಚೆಗೆ ಅವರು ನಟಿಸಿದ ‘ಕ್ರೂ’ ಸಿನಿಮಾ ಸೂಪರ್​ ಹಿಟ್​ ಆಗಿದೆ. ಹಾಗಾಗಿ ಅವರು ‘ಟಾಕ್ಸಿಕ್​’ ಚಿತ್ರದಲ್ಲಿ ನಟಿಸಲು ದುಬಾರಿ ಸಂಭಾವನೆ ಕೇಳಿರಬಹುದು. ಅದನ್ನು ಕೊಡಲು ಚಿತ್ರತಂಡ ಒಪ್ಪಿಲ್ಲ ಎನಿಸುತ್ತದೆ. ಅದೇ ಕಾರಣದಿಂದ ಅವರು ಚಿತ್ರತಂಡದಿಂದ ಹೊರನಡೆದಿದ್ದಾರೆ ಎಂಬ ಅನುಮಾನ ಮೂಡಿದೆ.

‘ಪದೇ ಪದೇ ಕಾಣಿಸಿಕೊಳ್ಳಬೇಕು ಎಂಬ ಆಸೆ ನನಗೆ ಇಲ್ಲ. ಕಣ್ಣಿಗೆ ಕಾಣದಂತೆ ಇರಬೇಕು, ತಲುಪಲು ಕಷ್ಟವಾಗುವಂತೆ ಇರಬೇಕು ಮತ್ತು ಸಂಭಾವನೆ ಪಡೆಯಬೇಕು’ ಎಂಬ ಸಾಲುಗಳನ್ನು ಕರೀನಾ ಕಪೂರ್​ ಖಾನ್​ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಹಾಗಾಗಿ ‘ಟಾಕ್ಸಿಕ್​’ ಚಿತ್ರತಂಡದ ಜೊತೆಗಿನ ಸಂಭಾವನೆ ವಿಚಾರವಾಗಿಯೇ ಕರೀನಾ ಕಪೂರ್​ ಅವರಿಗೆ ಭಿನ್ನಾಭಿಪ್ರಾಯ ಮೂಡಿರಬಹುದು ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಯಶ್ ಜೊತೆ ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸಲಿದ್ದಾರೆ ನಯನತಾರಾ?

ಕರೀನಾ ಕಪೂರ್​ ಖಾನ್​ ಅವರು ‘ಟಾಕ್ಸಿಕ್​’ ಸಿನಿಮಾ ತಂಡಕ್ಕೆ ಗುಡ್​​ಬೈ ಹೇಳಿದ ಬಳಿಕ ನಟಿ ನಯನಾತಾರಾ ಅವರಿಗೆ ಆಫರ್​ ನೀಡಲಾಗಿದೆ ಎಂಬ ಗುಸುಗುಸು ಹಬ್ಬಿದೆ. ಇದೆಲ್ಲ ನಿಜವೋ ಅಲ್ಲವೋ ಎಂಬ ಬಗ್ಗೆ ಚಿತ್ರತಂಡದವರೇ ಅಧಿಕೃತವಾಗಿ ಹೇಳಕೆ ನೀಡಬೇಕಿದೆ. ಅದಕ್ಕಾಗಿ ಫ್ಯಾನ್ಸ್​ ಕಾದಿದ್ದಾರೆ. ಈ ಸಿನಿಮಾಗೆ ಗೀತು ಮೂಹನ್​ದಾಸ್​ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು