AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರೀನಾ ಕೇಳಿದಷ್ಟು ಹಣ ಕೊಡಲಿಲ್ಲವೇ ‘ಟಾಕ್ಸಿಕ್’ ತಂಡದವರು? ಹೊಸ ಚರ್ಚೆ ಶುರು

ಯಶ್​ ಜೊತೆ ಕರೀನಾ ಕಪೂರ್​ ಖಾನ್ ನಟಿಸುತ್ತಾರೆ ಎಂದು ಅವರ ಅಭಿಮಾನಿಗಳು ಕನಸು ಕಂಡಿದ್ದರು. ಆದರೆ ಅದೇಕೋ ನಿಜವಾಗುವ ಹಾಗೆ ಕಾಣುತ್ತಿಲ್ಲ. ‘ಟಾಕ್ಸಿಕ್​’ ಚಿತ್ರತಂಡದಿಂದ ಕರೀನಾ ಕಪೂರ್​ ಖಾನ್​ ಅವರು ಹೊರಬಂದಿದ್ದಾರೆ ಎಂಬ ಗುಸುಗುಸು ಹರಡಿದೆ. ಅದಕ್ಕೆ ಸಂಭಾವನೆಯೇ ಕಾರಣ ಎಂದು ಕೆಲವರು ಊಹಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ಕರೀನಾ ಕೇಳಿದಷ್ಟು ಹಣ ಕೊಡಲಿಲ್ಲವೇ ‘ಟಾಕ್ಸಿಕ್’ ತಂಡದವರು? ಹೊಸ ಚರ್ಚೆ ಶುರು
ಕರೀನಾ ಕಪೂರ್​, ಯಶ್​
ಮದನ್​ ಕುಮಾರ್​
| Edited By: |

Updated on:Aug 08, 2024 | 11:33 AM

Share

ನಟಿ ಕರೀನಾ ಕಪೂರ್​ ಖಾನ್​ ಅವರು ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದಲ್ಲಿ ನಟಿಸುತ್ತಾರೆ ಎಂಬ ಗಾಸಿಪ್​ ಹರಡಿತ್ತು. ಆದರೆ ಇತ್ತೀಚೆಗೆ ಕೇಳಿಬಂದ ಗುಸುಗುಸು ಪ್ರಕಾರ, ಅವರು ಈ ಚಿತ್ರತಂಡದಿಂದ ಹೊರನಡೆದಿದ್ದಾರಂತೆ. ಅದಕ್ಕೆ ಕಾರಣ ಏನು ಎಂಬ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಅದರ ಬೆನ್ನಲ್ಲೇ ಕರೀನಾ ಕಪೂರ್​ ಖಾನ್​ (Kareena Kapoor Khan) ಅವರು ಮಾರ್ಮಿಕವಾಗಿ ಒಂದು ಪೋಸ್ಟ್​ ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ಬಳಿಕ, ಯಶ್​ (Yash) ಜೊತೆ ಕರೀನಾ ನಟಿಸುವುದು ಬಹುತೇಕ ಅನುಮಾನ ಎಂದು ಸಿನಿಪ್ರಿಯರು ಮಾತನಾಡಿಕೊಳ್ಳುತ್ತಿದ್ದಾರೆ.

ಕರೀನಾ ಕಪೂರ್​ ಅವರಿಗೆ ಸಖತ್​ ಬೇಡಿಕೆ ಇದೆ. ಇತ್ತೀಚೆಗೆ ಅವರು ನಟಿಸಿದ ‘ಕ್ರೂ’ ಸಿನಿಮಾ ಸೂಪರ್​ ಹಿಟ್​ ಆಗಿದೆ. ಹಾಗಾಗಿ ಅವರು ‘ಟಾಕ್ಸಿಕ್​’ ಚಿತ್ರದಲ್ಲಿ ನಟಿಸಲು ದುಬಾರಿ ಸಂಭಾವನೆ ಕೇಳಿರಬಹುದು. ಅದನ್ನು ಕೊಡಲು ಚಿತ್ರತಂಡ ಒಪ್ಪಿಲ್ಲ ಎನಿಸುತ್ತದೆ. ಅದೇ ಕಾರಣದಿಂದ ಅವರು ಚಿತ್ರತಂಡದಿಂದ ಹೊರನಡೆದಿದ್ದಾರೆ ಎಂಬ ಅನುಮಾನ ಮೂಡಿದೆ.

‘ಪದೇ ಪದೇ ಕಾಣಿಸಿಕೊಳ್ಳಬೇಕು ಎಂಬ ಆಸೆ ನನಗೆ ಇಲ್ಲ. ಕಣ್ಣಿಗೆ ಕಾಣದಂತೆ ಇರಬೇಕು, ತಲುಪಲು ಕಷ್ಟವಾಗುವಂತೆ ಇರಬೇಕು ಮತ್ತು ಸಂಭಾವನೆ ಪಡೆಯಬೇಕು’ ಎಂಬ ಸಾಲುಗಳನ್ನು ಕರೀನಾ ಕಪೂರ್​ ಖಾನ್​ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಹಾಗಾಗಿ ‘ಟಾಕ್ಸಿಕ್​’ ಚಿತ್ರತಂಡದ ಜೊತೆಗಿನ ಸಂಭಾವನೆ ವಿಚಾರವಾಗಿಯೇ ಕರೀನಾ ಕಪೂರ್​ ಅವರಿಗೆ ಭಿನ್ನಾಭಿಪ್ರಾಯ ಮೂಡಿರಬಹುದು ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಯಶ್ ಜೊತೆ ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸಲಿದ್ದಾರೆ ನಯನತಾರಾ?

ಕರೀನಾ ಕಪೂರ್​ ಖಾನ್​ ಅವರು ‘ಟಾಕ್ಸಿಕ್​’ ಸಿನಿಮಾ ತಂಡಕ್ಕೆ ಗುಡ್​​ಬೈ ಹೇಳಿದ ಬಳಿಕ ನಟಿ ನಯನಾತಾರಾ ಅವರಿಗೆ ಆಫರ್​ ನೀಡಲಾಗಿದೆ ಎಂಬ ಗುಸುಗುಸು ಹಬ್ಬಿದೆ. ಇದೆಲ್ಲ ನಿಜವೋ ಅಲ್ಲವೋ ಎಂಬ ಬಗ್ಗೆ ಚಿತ್ರತಂಡದವರೇ ಅಧಿಕೃತವಾಗಿ ಹೇಳಕೆ ನೀಡಬೇಕಿದೆ. ಅದಕ್ಕಾಗಿ ಫ್ಯಾನ್ಸ್​ ಕಾದಿದ್ದಾರೆ. ಈ ಸಿನಿಮಾಗೆ ಗೀತು ಮೂಹನ್​ದಾಸ್​ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:18 pm, Thu, 9 May 24

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ