Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರೀನಾ ಕೇಳಿದಷ್ಟು ಹಣ ಕೊಡಲಿಲ್ಲವೇ ‘ಟಾಕ್ಸಿಕ್’ ತಂಡದವರು? ಹೊಸ ಚರ್ಚೆ ಶುರು

ಯಶ್​ ಜೊತೆ ಕರೀನಾ ಕಪೂರ್​ ಖಾನ್ ನಟಿಸುತ್ತಾರೆ ಎಂದು ಅವರ ಅಭಿಮಾನಿಗಳು ಕನಸು ಕಂಡಿದ್ದರು. ಆದರೆ ಅದೇಕೋ ನಿಜವಾಗುವ ಹಾಗೆ ಕಾಣುತ್ತಿಲ್ಲ. ‘ಟಾಕ್ಸಿಕ್​’ ಚಿತ್ರತಂಡದಿಂದ ಕರೀನಾ ಕಪೂರ್​ ಖಾನ್​ ಅವರು ಹೊರಬಂದಿದ್ದಾರೆ ಎಂಬ ಗುಸುಗುಸು ಹರಡಿದೆ. ಅದಕ್ಕೆ ಸಂಭಾವನೆಯೇ ಕಾರಣ ಎಂದು ಕೆಲವರು ಊಹಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ಕರೀನಾ ಕೇಳಿದಷ್ಟು ಹಣ ಕೊಡಲಿಲ್ಲವೇ ‘ಟಾಕ್ಸಿಕ್’ ತಂಡದವರು? ಹೊಸ ಚರ್ಚೆ ಶುರು
ಕರೀನಾ ಕಪೂರ್​, ಯಶ್​
Follow us
ಮದನ್​ ಕುಮಾರ್​
| Updated By: Digi Tech Desk

Updated on:Aug 08, 2024 | 11:33 AM

ನಟಿ ಕರೀನಾ ಕಪೂರ್​ ಖಾನ್​ ಅವರು ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದಲ್ಲಿ ನಟಿಸುತ್ತಾರೆ ಎಂಬ ಗಾಸಿಪ್​ ಹರಡಿತ್ತು. ಆದರೆ ಇತ್ತೀಚೆಗೆ ಕೇಳಿಬಂದ ಗುಸುಗುಸು ಪ್ರಕಾರ, ಅವರು ಈ ಚಿತ್ರತಂಡದಿಂದ ಹೊರನಡೆದಿದ್ದಾರಂತೆ. ಅದಕ್ಕೆ ಕಾರಣ ಏನು ಎಂಬ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಅದರ ಬೆನ್ನಲ್ಲೇ ಕರೀನಾ ಕಪೂರ್​ ಖಾನ್​ (Kareena Kapoor Khan) ಅವರು ಮಾರ್ಮಿಕವಾಗಿ ಒಂದು ಪೋಸ್ಟ್​ ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ಬಳಿಕ, ಯಶ್​ (Yash) ಜೊತೆ ಕರೀನಾ ನಟಿಸುವುದು ಬಹುತೇಕ ಅನುಮಾನ ಎಂದು ಸಿನಿಪ್ರಿಯರು ಮಾತನಾಡಿಕೊಳ್ಳುತ್ತಿದ್ದಾರೆ.

ಕರೀನಾ ಕಪೂರ್​ ಅವರಿಗೆ ಸಖತ್​ ಬೇಡಿಕೆ ಇದೆ. ಇತ್ತೀಚೆಗೆ ಅವರು ನಟಿಸಿದ ‘ಕ್ರೂ’ ಸಿನಿಮಾ ಸೂಪರ್​ ಹಿಟ್​ ಆಗಿದೆ. ಹಾಗಾಗಿ ಅವರು ‘ಟಾಕ್ಸಿಕ್​’ ಚಿತ್ರದಲ್ಲಿ ನಟಿಸಲು ದುಬಾರಿ ಸಂಭಾವನೆ ಕೇಳಿರಬಹುದು. ಅದನ್ನು ಕೊಡಲು ಚಿತ್ರತಂಡ ಒಪ್ಪಿಲ್ಲ ಎನಿಸುತ್ತದೆ. ಅದೇ ಕಾರಣದಿಂದ ಅವರು ಚಿತ್ರತಂಡದಿಂದ ಹೊರನಡೆದಿದ್ದಾರೆ ಎಂಬ ಅನುಮಾನ ಮೂಡಿದೆ.

‘ಪದೇ ಪದೇ ಕಾಣಿಸಿಕೊಳ್ಳಬೇಕು ಎಂಬ ಆಸೆ ನನಗೆ ಇಲ್ಲ. ಕಣ್ಣಿಗೆ ಕಾಣದಂತೆ ಇರಬೇಕು, ತಲುಪಲು ಕಷ್ಟವಾಗುವಂತೆ ಇರಬೇಕು ಮತ್ತು ಸಂಭಾವನೆ ಪಡೆಯಬೇಕು’ ಎಂಬ ಸಾಲುಗಳನ್ನು ಕರೀನಾ ಕಪೂರ್​ ಖಾನ್​ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಹಾಗಾಗಿ ‘ಟಾಕ್ಸಿಕ್​’ ಚಿತ್ರತಂಡದ ಜೊತೆಗಿನ ಸಂಭಾವನೆ ವಿಚಾರವಾಗಿಯೇ ಕರೀನಾ ಕಪೂರ್​ ಅವರಿಗೆ ಭಿನ್ನಾಭಿಪ್ರಾಯ ಮೂಡಿರಬಹುದು ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಯಶ್ ಜೊತೆ ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸಲಿದ್ದಾರೆ ನಯನತಾರಾ?

ಕರೀನಾ ಕಪೂರ್​ ಖಾನ್​ ಅವರು ‘ಟಾಕ್ಸಿಕ್​’ ಸಿನಿಮಾ ತಂಡಕ್ಕೆ ಗುಡ್​​ಬೈ ಹೇಳಿದ ಬಳಿಕ ನಟಿ ನಯನಾತಾರಾ ಅವರಿಗೆ ಆಫರ್​ ನೀಡಲಾಗಿದೆ ಎಂಬ ಗುಸುಗುಸು ಹಬ್ಬಿದೆ. ಇದೆಲ್ಲ ನಿಜವೋ ಅಲ್ಲವೋ ಎಂಬ ಬಗ್ಗೆ ಚಿತ್ರತಂಡದವರೇ ಅಧಿಕೃತವಾಗಿ ಹೇಳಕೆ ನೀಡಬೇಕಿದೆ. ಅದಕ್ಕಾಗಿ ಫ್ಯಾನ್ಸ್​ ಕಾದಿದ್ದಾರೆ. ಈ ಸಿನಿಮಾಗೆ ಗೀತು ಮೂಹನ್​ದಾಸ್​ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:18 pm, Thu, 9 May 24

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್