AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ ನಟನೆಯ ‘ಟಾಕ್ಸಿಕ್​’ ಚಿತ್ರದಿಂದ ಹೊರನಡೆದ ಕರೀನಾ ಕಪೂರ್​ ಖಾನ್​?

ಬಹುನಿರೀಕ್ಷಿತ ‘ಟಾಕ್ಸಿಕ್​’ ಸಿನಿಮಾದ ಬಗ್ಗೆ ಸಖತ್​ ಚರ್ಚೆ ಆಗುತ್ತಿದೆ. ನಟ ಯಶ್​ ಅವರಿಗೆ ಇದು ಮಹತ್ವಾಕಾಂಕ್ಷಿ ಪ್ರಾಜೆಕ್ಟ್​. ಈ ಸಿನಿಮಾದಲ್ಲಿ ಅವರ ಜೊತೆ ಯಾರೆಲ್ಲ ನಟಿಸುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಅಭಿಮಾನಿಗಳಿಗೆ ಇದೆ. ಕರೀನಾ ಕಪೂರ್​ ಖಾನ್​ ಅವರು ಈ ಚಿತ್ರದಲ್ಲಿ ನಟಿಸುತ್ತಾರೆ ಎಂದು ಗಾಸಿಪ್​ ಹಬ್ಬಿತ್ತು. ಆದರೆ ಈಗ ಅವರು ಚಿತ್ರತಂಡದಿಂದ ಆಚೆ ಬಂದಿದ್ದಾರೆ ಎನ್ನಲಾಗಿದೆ.

ಯಶ್​ ನಟನೆಯ ‘ಟಾಕ್ಸಿಕ್​’ ಚಿತ್ರದಿಂದ ಹೊರನಡೆದ ಕರೀನಾ ಕಪೂರ್​ ಖಾನ್​?
ಯಶ್​, ಕರೀನಾ ಕಪೂರ್​
ಮದನ್​ ಕುಮಾರ್​
|

Updated on: May 03, 2024 | 6:23 PM

Share

ಪ್ಯಾನ್​ ಇಂಡಿಯಾ ಸ್ಟಾರ್​ ಯಶ್​ (Yash) ಅವರ ಸಂಪೂರ್ಣ ಗಮನ ಈಗ ‘ಟಾಕ್ಸಿಕ್​’ (Toxic) ಸಿನಿಮಾದ ಮೇಲಿದೆ. ಈ ಚಿತ್ರದ ಪಾತ್ರವರ್ಗದ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಹಾಗಿದ್ದರೂ ಕೂಡ ಅನೇಕ ಗಾಸಿಪ್​ಗಳು ಹರಿದಾಡುತ್ತಿವೆ. ಇವು ಪ್ಯಾನ್​ ಇಂಡಿಯಾ ಪ್ರಾಜೆಕ್ಟ್​ ಆದ್ದರಿಂದ ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಹೊಂದಿರುವ ಕಲಾವಿದರಿಗೆ ಮಣೆ ಹಾಕಲಾಗುತ್ತಿದೆ ಎನ್ನಲಾಗಿದೆ. ಕೆಲವು ದಿನಗಳಿಂದೀಚೆಗೆ ನಟಿ ಕರೀನಾ ಕಪೂರ್​ ಖಾನ್​ (Kareena Kapoor Khan) ಅವರ ಹೆಸರು ಕೇಳಿಬಂದಿತ್ತು. ಆದರೆ ಈಗ ಅವರು ‘ಟಾಕ್ಸಿಕ್​’ ಸಿನಿಮಾದಿಂದ ಹೊರನಡೆದಿದ್ದಾರೆ ಎಂದು ಕೆಲವು ಮಾಧ್ಯಮಗಳು ಸುದ್ದಿ ಮಾಡಿವೆ.

ವರದಿಗಳ ಪ್ರಕಾರ, ಕರೀನಾ ಕಪೂರ್​ ಖಾನ್​ ಅವರು ಡೇಟ್ಸ್​ ಸಮಸ್ಯೆಯಿಂದ ‘ಟಾಕ್ಸಿಕ್​’ ಸಿನಿಮಾದಲ್ಲಿ ನಟಿಸಲು ಸಾಧ್ಯವಾಗುತ್ತಿಲ್ಲ. ಈ ಚಿತ್ರದಲ್ಲಿ ಅಭಿನಯಿಸಲು ಅವರಿಗೆ ಸಂಪೂರ್ಣ ಇಷ್ಟ ಇತ್ತು. ಆದರೆ ‘ಟಾಕ್ಸಿಕ್​’ ಚಿತ್ರೀಕರಣಕ್ಕೆ ಅವಶ್ಯಕತೆ ಇರುವಷ್ಟು ಕಾಲ್​ಶೀಟ್​ ನೀಡಲು ಕರೀನಾಗೆ ಸಾಧ್ಯವಾಗಿಲ್ಲ. ಆ ಕಾರಣದಿಂದ ಅವರನ್ನು ಚಿತ್ರತಂಡದಿಂದ ಹೊರಗಿಡುವುದು ಅನಿವಾರ್ಯ ಆಗಿದೆ ಎಂಬ ಗಾಸಿಪ್​ ಹರಿದಾಡುತ್ತಿದೆ.

ಒಂದು ದೊಡ್ಡ ಸಿನಿಮಾ ಎಂದಾಗ ನೂರಾರು ಗಾಸಿಪ್​ಗಳು ಕೇಳಿಬರುತ್ತವೆ. ಪಾತ್ರಧಾರಿಗಳ ಹೆಸರು ಬಹಿರಂಗ ಆಗುವುದಕ್ಕೂ ಮೊದಲೇ ಅನೇಕ ಅಂತೆ-ಕಂತೆಗಳು ಹುಟ್ಟಿಕೊಳ್ಳುವುದು ಕೂಡ ಸಹಜ. ಅದೇ ರೀತಿ ‘ಟಾಕ್ಸಿಕ್​’ ಸಿನಿಮಾದಲ್ಲಿ ಕರೀನಾ ಕಪೂರ್​ ಖಾನ್​ ಅವರು ಯಶ್​ ಸಹೋದರಿಯಾಗಿ ನಟಿಸುತ್ತಾರೆ ಎಂದು ಗಾಸಿಪ್​ ಹರಡಿತ್ತು. ಆದರೆ ಈಗ ಅವರು ಈ ಚಿತ್ರದಲ್ಲಿ ನಟಿಸುತ್ತಿಲ್ಲ ಎಂದು ಹೇಳಲಾಗುತ್ತಿದೆ. ಚಿತ್ರತಂಡದಿಂದ ಅಧಿಕೃತ ಮಾಹಿತಿ ಬರಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ. ಹರಿದಾಡುತ್ತಿರುವ ಸುದ್ದಿಗಳ ಬಗ್ಗೆ ಕರೀನಾ ಕಪೂರ್​ ಅವರಾದರೂ ಪ್ರತಿಕ್ರಿಯೆ ನೀಡುತ್ತಾರಾ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ಸರ್ಕಾರದ ಈವರೆಗಿನ ಕೆಲಸ ತೃಪ್ತಿ ನೀಡಿದೆಯಾ? ಮತಗಟ್ಟೆಯಲ್ಲೇ ಉತ್ತರ ನೀಡಿದ ಯಶ್​

ಯಶ್​ ಹಾಗೂ ಅವರ ಅಭಿಮಾನಿಗಳ ಪಾಲಿಗೆ ‘ಟಾಕ್ಸಿಕ್​’ ಒಂದು ಮಹತ್ವಾಕಾಂಕ್ಷಿ ಪ್ರಾಜೆಕ್ಟ್​. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಅತಿ ದೊಡ್ಡ ಗೆಲುವಿನ ಬಳಿಕ ಯಶ್​ ಒಪ್ಪಿಕೊಂಡ ಸಿನಿಮಾ ಇದು. ಈ ಚಿತ್ರಕ್ಕೆ ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಭಾರಿ ಪ್ಲ್ಯಾನಿಂಗ್​ ಮಾಡಿಕೊಂಡು ಯಶ್​ ಅವರು ಪ್ರತಿ ಹೆಜ್ಜೆ ಇಡುತ್ತಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಮೂಲಕ ‘ಟಾಕ್ಸಿಕ್​’ ಸಿನಿಮಾ ನಿರ್ಮಾಣ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ