AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆ.6ರಂದು ರಿಲೀಸ್ ಆಗಲಿದೆ ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ‘ಕರಿಕಾಡ’

ಶೀರ್ಷಿಕೆ ಹಾಗೂ ಟೀಸರ್ ಮೂಲಕ ‘ಕರಿಕಾಡ’ ಸಿನಿಮಾ ಈಗಾಗಲೇ ಕುತೂಹಲ ಮೂಡಿಸಿದೆ. ಈ ಸಿನಿಮಾಗೆ ಗಿಲ್ಲಿ ವೆಂಕಟೇಶ್ ಅವರು ಆ್ಯಕ್ಷನ್-ಕಟ್ ಹೇಳಿದ್ದು, ಕಾಡ ನಟರಾಜ್ ಪ್ರಮುಖ ಪಾತ್ರ ಮಾಡಿದ್ದಾರೆ. ಫೆಬ್ರವರಿ 6ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ರಿಲೀಸ್ ಆಗಲಿದೆ.

ಫೆ.6ರಂದು ರಿಲೀಸ್ ಆಗಲಿದೆ ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ‘ಕರಿಕಾಡ’
Karikaada Movie Poster
ಮದನ್​ ಕುಮಾರ್​
|

Updated on: Jan 27, 2026 | 6:46 PM

Share

ಕಾಡ ನಟರಾಜ್ (Kaada Natraj) ಅವರು ಹೀರೋ ಆಗಿ ನಟಿಸಿರುವ ‘ಕರಿಕಾಡ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದಲ್ಲಿ ನಿರೀಕ್ಷಾ ಶೆಟ್ಟಿ ಅವರು ನಾಯಕಿಯಾಗಿ ಅಭಿನಯಿಸಿದ್ದಾರೆ. ಈಗಾಗಲೇ ಈ ಸಿನಿಮಾದ ಹಾಡು ನೋಡಿರುವ ಸಿನಿಪ್ರಿಯರಿಗೆ ಕುತೂಹಲ ಮತ್ತು ನಿರೀಕ್ಷೆ ಮೂಡಿದೆ. ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಸನ್ನಿವೇಶಗಳು ಇವೆ. ಅದನ್ನು ನೋಡಲು ಪ್ರೇಕ್ಷಕರು ಕಾದಿದ್ದಾರೆ. ಫೆಬ್ರವರಿ 6ರಂದು ‘ಕರಿಕಾಡ’ (Karikaada) ಸಿನಿಮಾ ರಿಲೀಸ್ ಆಗಲಿದೆ. ಅದು ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಎಂಬುದು ವಿಶೇಷ.

‘ಕರಿಕಾಡ’ ಸಿನಿಮಾಗೆ ಗಿಲ್ಲಿ ವೆಂಕಟೇಶ್ ಅವರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರವನ್ನು ‘ರಿದ್ದಿ ಎಂಟರ್ಟೈನ್​ಮೆಂಟ್’ ಬ್ಯಾನರ್ ಮೂಲಕ ದೀಪ್ತಿ ದಾಮೋದರ್ ಅವರು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದ ಶೀರ್ಷಿಕೆ ಕೂಡ ಡಿಫರೆಂಟ್ ಆಗಿದ್ದು, ಆ ಕಾರಣದಿಂದಲೂ ಕುತೂಹಲ ಮೂಡಿಸಿದೆ. ಶೀರ್ಷಿಕೆಯ ಅರ್ಥ ಏನು? ಚಿತ್ರದ ಥೀಮ್ ಏನು ಎಂಬುದು ಫೆಬ್ರವರಿ 6ರಂದು ತಿಳಿಯಲಿದೆ.

ಇದು ಪ್ಯಾನ್ ಇಂಡಿಯಾ ಸಿನಿಮಾಗಳ ಜಮಾನ. ಕನ್ನಡದ ಸಿನಿಮಾಗಳು ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿ ಗಮನ ಸೆಳೆಯುತ್ತಿವೆ. ‘ಕರಿಕಾಡ’ ಸಿನಿಮಾ ಸಹ ಕನ್ನಡದ ಜೊತೆ ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ರಿಲೀಸ್ ಆಗಲಿದೆ. ಈಗಾಗಲೇ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿ ಗಮನ ಸೆಳೆದಿದೆ.

ಟೀಸರ್ ನೋಡಿದರೆ ಇದೊಂದು ಪಕ್ಕ ಹಳ್ಳಿಗಾಡಿನ ಕಥೆ ಇರುವ ಅಡ್ವೆಂಚರಸ್ ಸಿನಿಮಾ ಎಂಬ ಸುಳಿವು ಸಿಗುತ್ತದೆ. ಕಾಡಿನಲ್ಲಿ ನಡೆಯುವ ಕಥೆ ಇದು. ದ್ವೇಷ, ಪ್ರತಿಕಾರ, ಪ್ರೀತಿ ಮುಂತಾದ ಭಾವನೆಗಳ ಮಿಶ್ರಣ ಕೂಡ ಇರಲಿದೆ. ಹೊಸ ಪ್ರತಿಭೆಗಳಿಂದ ತುಂಬಿರುವ ಈ ಸಿನಿಮಾದ ಹಾಡುಗಳು ಈಗಾಗಲೇ ಗಮನ ಸೆಳೆದಿವೆ. ಯಶ್ ಶೆಟ್ಟಿ, ಬಲರಾಜ್ ವಾಡಿ ಮುಂತಾದವರು ಈ ಚಿತ್ರದ ಪಾತ್ರವರ್ಗದಲ್ಲಿ ಇದ್ದಾರೆ.

ಇದನ್ನೂ ಓದಿ: ಗಮನ ಸೆಳೆಯುತ್ತಿದೆ ‘ಕರಿಕಾಡ’, ಆಸಕ್ತ ತಂಡದ ಸಾಹಸಮಯ ಪ್ರಯತ್ನ

‘ಕರಿಕಾಡ’ ಚಿತ್ರಕ್ಕೆ ಅತೀಶಯ ಜೈನ್ ಹಾಗೂ ಶಶಾಂಕ್ ಶೇಷಗಿರಿ ಅವರು ಸಂಗೀತ ಸಂಯೋಜಿಸಿದ್ದಾರೆ. ‘ರತುನಿ ರತುನಿ’ ಹಾಗೂ ‘ಕಬ್ಬಿನ್ ಜಲ್ಲೆ’ ಹಾಡುಗಳು ಬಿಡುಗಡೆ ಆಗಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. 3ನೇ ಹಾಡು ‘ನೀ ಯಾರೇ ನನಗೆ’ ಜ.28ಕ್ಕೆ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!