‘ನೆನಪಿರಲಿ’ ಪ್ರೇಮ್​ ಜತೆ ನಟಿಸಿದ್ದ ಹೀರೋಯಿನ್​ಗೆ ಮದುವೆ; ವೈರಲ್​ ಆಯ್ತು ಫೋಟೋ

ಇಂದು ಸಂಜೆ ವೇಳೆಗೆ ಕರೀಷ್ಮಾ ಹಾಗೂ ವರುಣ್​ ಮದುವೆ ನೆರವೇರಿದೆ. ವರುಣ್​ ಅವರು ಕರೀಷ್ಮಾ ಹಣೆಗೆ ಕುಂಕುಮ ಇಡುತ್ತಿರುವ ಫೋಟೋ ವೈರಲ್​ ಆಗಿದೆ. ಕರೀಷ್ಮಾ ಅವರು ಯಾವುದೇ ಫೋಟೋಗಳನ್ನು ಹಂಚಿಕೊಂಡಿಲ್ಲ.

‘ನೆನಪಿರಲಿ’ ಪ್ರೇಮ್​ ಜತೆ ನಟಿಸಿದ್ದ ಹೀರೋಯಿನ್​ಗೆ ಮದುವೆ; ವೈರಲ್​ ಆಯ್ತು ಫೋಟೋ
ಕರೀಷ್ಮಾ ಮದುವೆ
Follow us
| Updated By: ರಾಜೇಶ್ ದುಗ್ಗುಮನೆ

Updated on: Feb 05, 2022 | 8:36 PM

ಕನ್ನಡ ಸಿನಿಮಾ ಹಾಗೂ ಹಿಂದಿ ಕಿರುತೆರೆಯಲ್ಲಿ ನಟಿಸಿದ್ದ ಕರೀಷ್ಮಾ ತನ್ನಾ (Karishma Tanna) ಅವರು ಪ್ರಿಯಕರ ವರುಣ್​ ಬಂಗೇರಾ (Varun Bangera) ಜತೆಗೆ ಇಂದು (ಫೆಬ್ರವರಿ 5) ಹಸೆಮಣೆ ಏರಿದ್ದಾರೆ. ಆಪ್ತರು ಹಾಗೂ ಕುಟುಂಬ ವರ್ಗದವರ ಸಮ್ಮುಖದಲ್ಲಿ ಈ ಮದುವೆ ನೆರವೇರಿದೆ. ಕರೀಷ್ಮಾ ಅವರು ಲೆಹಂಗಾದಲ್ಲಿ ತುಂಬಾನೇ ಬ್ಯೂಟಿಫುಲ್​ ಆಗಿ ಕಾಣಿಸುತ್ತಿದ್ದರು. ಸದ್ಯ, ಮದುವೆ ಫೋಟೋಗಳು ಹಾಗೂ ವಿಡಿಯೋಗಳು ಸಾಕಷ್ಟು ವೈರಲ್​ ಆಗುತ್ತಿವೆ. ಅವರಿಗೆ ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ.

ಇಂದು ಸಂಜೆ ವೇಳೆಗೆ ಕರೀಷ್ಮಾ ಹಾಗೂ ವರುಣ್​ ಮದುವೆ ನೆರವೇರಿದೆ. ವರುಣ್​ ಅವರು ಕರೀಷ್ಮಾ ಹಣೆಗೆ ಕುಂಕುಮ ಇಡುತ್ತಿರುವ ಫೋಟೋ ವೈರಲ್​ ಆಗಿದೆ. ಕರೀಷ್ಮಾ ಅವರು ಯಾವುದೇ ಫೋಟೋಗಳನ್ನು ಹಂಚಿಕೊಂಡಿಲ್ಲ. ಆದರೆ, ಮದುವೆಯಲ್ಲಿ ಪಾಲ್ಗೊಂಡ ಅವರ ಆಪ್ತರು ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅಭಿಮಾನಿಗಳ ವಲಯದಲ್ಲೂ ಇದು ವೈರಲ್​ ಆಗುತ್ತಿದೆ.

ಗುರುವಾರದಿಂದಲೇ ಕರೀಷ್ಮಾ ಹಾಗೂ ವರುಣ್​ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿತ್ತು. ಈ ಬಗ್ಗೆ ಕರೀಷ್ಮಾ ಅಪ್​ಡೇಟ್​ ನೀಡುತ್ತಲೇ ಬಂದಿದ್ದರು. ಗುರುವಾರ ಹಳದಿ ಕಾರ್ಯಕ್ರಮಗಳು ಜೋರಾಗಿ ನಡೆದಿತ್ತು. ಆ ಬಳಿಕ ಮೆಹಂದಿ ಕಾರ್ಯಕ್ರಮ ಕೂಡ ಅದ್ದೂರಿಯಾಗಿ ನಡೆದಿತ್ತು. ಇದರಲ್ಲಿ ಕುಟುಂಬದವರು ಪಾಲ್ಗೊಂಡಿದ್ದರು.

ಕೆಲ ವರ್ಷಗಳ ಹಿಂದೆ ಪಾರ್ಟಿ ಒಂದರಲ್ಲಿ ವರುಣ್​ ಹಾಗೂ ಕರೀಷ್ಮಾ ಭೇಟಿ ಆಗಿದ್ದರು. ಆ ಬಳಿಕ ಇವರ ನಡುವೆ ಫ್ರೆಂಡ್​ಶಿಪ್​ ಬೆಳೆದಿತ್ತು. ಅದು ಪ್ರೀತಿಗೆ ತಿರುಗಿ ಈಗ ಇಬ್ಬರೂ ದಂಪತಿಗಳಾಗಿದ್ದಾರೆ. ಕಳೆದ ನವೆಂಬರ್​ ತಿಂಗಳಲ್ಲಿ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿತ್ತು. ಆದರೆ, ಇದೂ ಗುಟ್ಟಾಗಿಯೇ ನಡೆದಿತ್ತು.

ಕರೀಷ್ಮಾ ಗೆಳತಿಯೊಬ್ಬರು ಇವರ ನಿಶ್ಚಿತಾರ್ಥದ ಫೋಟೋ ಪೋಸ್ಟ್ ಮಾಡಿದ್ದರು. ಆ ಬಳಿಕ ನಿರ್ಮಾಪಕಿ ಏಕ್ತಾ ಕಪೂರ್ ಈ ದಂಪತಿಗೆ ಶುಭಾಶಯ ತಿಳಿಸಿದ್ದರು. ಆ ಮೂಲಕ ಇವರ ಮದುವೆ ವಿಚಾರ ಅಧಿಕೃತವಾಗಿತ್ತು.

2001ರಲ್ಲೇ ಕರೀಷ್ಮಾ ಕಿರುತೆರೆ ಲೋಕಕ್ಕೆ ಕಾಲಿಟ್ಟರು. ಆ ಬಳಿಕ ಹಲವು ಸೀರಿಯಲ್​ಗಳಲ್ಲಿ ಅವರು ನಟಿಸಿದರು. ಈ ಮಧ್ಯೆ ಸಿನಿಮಾ ರಂಗದಲ್ಲೂ ಅವರಿಗೆ ಆಫರ್ ಬಂತು. 2005ರಲ್ಲಿ ತೆರೆಗೆ ಬಂದ ‘ದೋಸ್ತಿ: ಫ್ರೆಂಡ್ಸ್​ ಫಾರೆವರ್​’ ಚಿತ್ರದಲ್ಲಿ ನಟಿಸಿದರು. 2011ರಲ್ಲಿ ತೆರೆಗೆ ಬಂದ ಕನ್ನಡದ ‘ಐ ಆ್ಯಮ್​ ಸಾರಿ ಮತ್ತೆ ಬನ್ನಿ ಪ್ರೀತ್ಸೋಣ’ ಚಿತ್ರದಲ್ಲಿ ಪ್ರೇಮ್​ಗೆ ಜತೆಯಾಗಿ ನಟಿಸಿದರು. ರವೀಂದ್ರ ಎಚ್​.ಪಿ. ದಾಸ್​ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳಿದ್ದರು.

ಇದನ್ನೂ ಓದಿ: 20ನೇ ವಯಸ್ಸಿಗೆ ಕೋಟಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಕಿರುತೆರೆ ನಟಿ

‘ಜಿಮ್​ಗೆ ಹೋಗೋದ್ರಿಂದ ಸಾವು ಸಂಭವಿಸುತ್ತೆ ಅನ್ನೋದು ತಪ್ಪು’: ನಟ ನೆನಪಿರಲಿ ಪ್ರೇಮ್​

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ