AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್​; ಸಿನಿಮಾ ಪ್ರದರ್ಶನ ಇರುತ್ತಾ? ಇಲ್ಲಿದೆ ಮಾಹಿತಿ

ಬಂದ್​ ವಿಚಾರದ ಕುರಿತಂತೆ ಇಂದು (ಡಿಸೆಂಬರ್​ 24) ವಾಣಿಜ್ಯ ಮಂಡಳಿ ಸಭೆ ನಡೆಸಿತ್ತು. ಈ ಸಭೆಯಲ್ಲಿ ಕೇವಲ ನೈತಿಕ ಬೆಂಬಲ ನೀಡುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ.

ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್​; ಸಿನಿಮಾ ಪ್ರದರ್ಶನ ಇರುತ್ತಾ? ಇಲ್ಲಿದೆ ಮಾಹಿತಿ
ಸ್ಯಾಂಡಲ್​ವುಡ್​
TV9 Web
| Edited By: |

Updated on: Dec 24, 2021 | 6:17 PM

Share

ಕನ್ನಡದ ಬಾವುಟಕ್ಕೆ ಅವಮಾನ, ಎಂಇಎಸ್​ ಪುಂಡಾಟಿಕೆ ಖಂಡಿಸಿ ಡಿಸೆಂಬರ್ 31ರಂದು ಕರ್ನಾಟಕ ಬಂದ್​​ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಇದಕ್ಕೆ ಅನೇಕ ಸಂಘಟನೆಗಳು ಬೆಂಬಲ ಸೂಚಿಸುತ್ತಿವೆ. ಇನ್ನೂ ಕೆಲವು ಸಂಘಟನೆಗಳು ನೈತಿಕ ಬೆಂಬಲವನ್ನಷ್ಟೇ ನೀಡಿವೆ. ಈ ಬಂದ್​ಅನ್ನು ಬೆಂಬಲಿಸ ಬೇಕೇ ಅಥವಾ ಬೇಡವೇ ಎನ್ನುವ ಬಗ್ಗೆ ದೀರ್ಘ ಚರ್ಚೆ ನಡೆದಿತ್ತು. ಈಗ ಈ ವಿಚಾರಕ್ಕೆ ಸಂಬಂಧಿಸಿ ಕನ್ನಡ ಚಿತ್ರರಂಗದವರು ಒಂದು ನಿರ್ಧಾರಕ್ಕೆ ಬಂದಿದ್ದಾರೆ. ಈ ಬಂದ್​ಗೆ ಕೇವಲ ನೈತಿಕ ಬೆಂಬಲ ಕೊಡುವುದಾಗಿ ಘೋಷಣೆ ಮಾಡಲಾಗಿದೆ.

ಬಂದ್​ ವಿಚಾರದ ಕುರಿತಂತೆ ಇಂದು (ಡಿಸೆಂಬರ್​ 24) ವಾಣಿಜ್ಯ ಮಂಡಳಿ ಸಭೆ ನಡೆಸಿತ್ತು. ಈ ಸಭೆಯಲ್ಲಿ ಕೇವಲ ನೈತಿಕ ಬೆಂಬಲ ನೀಡುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ. ಡಿಸೆಂಬರ್​ 31 ಶುಕ್ರವಾರ ಬಂದಿದೆ. ಆ ದಿನ ಹಲವು ಸಿನಿಮಾಗಳು ರಿಲೀಸ್​ ಆಗುತ್ತಿವೆ. ಈಗಾಗಲೇ ಕೊವಿಡ್​ನಿಂದ ಚಿತ್ರರಂಗದ ಸಾಕಷ್ಟು ತೊಂದರೆ ಅನುಭವಿಸಿದೆ. ಈಗ ಸಿನಿಮಾ ರಿಲೀಸ್​ ದಿನವೇ ಬಂದ್​ ಆದರೆ, ಚಿತ್ರರಂಗದ ಮೇಲೆ ಹೊಡೆತ ಬೀಳಲಿದೆ. ಈ ಕಾರಣಕ್ಕೆ ಕೇವಲ ನೈತಿಕ ಬೆಂಬಲ ನೀಡುವುದಾಗಿ ವಾಣಿಜ್ಯ ಮಂಡಳಿ ಘೋಷಿಸಿದೆ.

ವಾಣಿಜ್ಯ ಮಂಡಳಿಯ ಈ ನಿರ್ಧಾರದಿಂದ ಡಿಸೆಂಬರ್​ 31ರಂದು ಎಂದಿನಂತೆ ಚಿತ್ರಗಳು ಪ್ರದರ್ಶನ ಕಾಣಲಿವೆ. ಚಿತ್ರದ ಶೂಟಿಂಗ್​ ಕೂಡ ನಡೆಯಲಿದೆ, ಹೀಗಾಗಿ, ಈ ಬಂದ್​ನಿಂದ ಚಿತ್ರರಂಗಕ್ಕೆ ನೇರವಾಗಿ ಅಷ್ಟೊಂದು ತೊಂದರೆ ಆಗುವುದಿಲ್ಲ ಎನ್ನುವ ಅಭಿಪ್ರಾಯ ಕೇಳಿ ಬಂದಿದೆ.

ಈ ಬಗ್ಗೆ ವಾಟಾಳ್​ ನಾಗರಾಜ್​ ಅಸಮಾಧಾನಗೊಂಡಿದ್ದಾರೆ. ‘ನಿಮ್ಮ ನೈತಿಕ ಬೆಂಬಲ ತಿರಸ್ಕರಿಸಿದ್ದೇನೆ. ಫಿಲ್ಮ್ ಚೇಂಬರ್ ನೀಡಿರುವ ನೈತಿಕ ಬೆಂಬಲ‌ ನಮಗೆ ಬೇಡ. ಎಲ್ಲರೂ ಬೀದಿಗೆ ಇಳಿದು ಸಪೋರ್ಟ್​ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

‘ಕನ್ನಡದ ಹೋರಾಟ ಎಂಬುದು ಕನ್ನಡಿಗರ ವಿರುದ್ಧದ ಹೋರಾಟ ಆಗಬಾರದು. ಹೀಗೆಲ್ಲ ಬಂದ್​ ಮಾಡಿದರೆ ನಾವು ಸೂಸೈಡ್​ ಮಾಡಿಕೊಳ್ಳಬೇಕು ಅಷ್ಟೇ. ಕೋಟ್ಯಂತರ ರೂಪಾಯಿ ಬಂಡವಾಳ ಹಾಕಿದ ಸಿನಿಮಾ ಬಿಡುಗಡೆ ಆಗುವುದು ಶುಕ್ರವಾರ. ಅದೇ ದಿನ ಬಂದ್​ ಮಾಡಬೇಕೋ ಬೇಡವೋ ಎಂಬುದು ವಾಣಿಜ್ಯ ಮಂಡಳಿಯವರಿಗೆ ತಿಳಿಯುವುದಿಲ್ಲವಾ’ ಎಂದು ನಿರ್ದೇಶಕ ಗುರು ದೇಶಪಾಂಡೆ ಪ್ರಶ್ನಿಸಿದ್ದರು.

ಇದನ್ನೂ ಓದಿ: Badava Rascal Movie Review: ‘ಬಡವ ರಾಸ್ಕಲ್’ನ ಫ್ರೆಂಡ್​ಶಿಪ್​ ಗಟ್ಟಿ ಮಾಡಿದ ಪಂಚಿಂಗ್​ ಡೈಲಾಗ್

Karnataka Bandh: ಡಿ 31 ಕರ್ನಾಟಕ ಬಂದ್ -ಯಾರದೆಲ್ಲ ಬೆಂಬಲ ಇದೆ? ಕರವೇ, ಚಿತ್ರೋದ್ಯಮದ ನಿರ್ಧಾರವೇನು?

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು