AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್​; ಸಿನಿಮಾ ಪ್ರದರ್ಶನ ಇರುತ್ತಾ? ಇಲ್ಲಿದೆ ಮಾಹಿತಿ

ಬಂದ್​ ವಿಚಾರದ ಕುರಿತಂತೆ ಇಂದು (ಡಿಸೆಂಬರ್​ 24) ವಾಣಿಜ್ಯ ಮಂಡಳಿ ಸಭೆ ನಡೆಸಿತ್ತು. ಈ ಸಭೆಯಲ್ಲಿ ಕೇವಲ ನೈತಿಕ ಬೆಂಬಲ ನೀಡುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ.

ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್​; ಸಿನಿಮಾ ಪ್ರದರ್ಶನ ಇರುತ್ತಾ? ಇಲ್ಲಿದೆ ಮಾಹಿತಿ
ಸ್ಯಾಂಡಲ್​ವುಡ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Dec 24, 2021 | 6:17 PM

Share

ಕನ್ನಡದ ಬಾವುಟಕ್ಕೆ ಅವಮಾನ, ಎಂಇಎಸ್​ ಪುಂಡಾಟಿಕೆ ಖಂಡಿಸಿ ಡಿಸೆಂಬರ್ 31ರಂದು ಕರ್ನಾಟಕ ಬಂದ್​​ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಇದಕ್ಕೆ ಅನೇಕ ಸಂಘಟನೆಗಳು ಬೆಂಬಲ ಸೂಚಿಸುತ್ತಿವೆ. ಇನ್ನೂ ಕೆಲವು ಸಂಘಟನೆಗಳು ನೈತಿಕ ಬೆಂಬಲವನ್ನಷ್ಟೇ ನೀಡಿವೆ. ಈ ಬಂದ್​ಅನ್ನು ಬೆಂಬಲಿಸ ಬೇಕೇ ಅಥವಾ ಬೇಡವೇ ಎನ್ನುವ ಬಗ್ಗೆ ದೀರ್ಘ ಚರ್ಚೆ ನಡೆದಿತ್ತು. ಈಗ ಈ ವಿಚಾರಕ್ಕೆ ಸಂಬಂಧಿಸಿ ಕನ್ನಡ ಚಿತ್ರರಂಗದವರು ಒಂದು ನಿರ್ಧಾರಕ್ಕೆ ಬಂದಿದ್ದಾರೆ. ಈ ಬಂದ್​ಗೆ ಕೇವಲ ನೈತಿಕ ಬೆಂಬಲ ಕೊಡುವುದಾಗಿ ಘೋಷಣೆ ಮಾಡಲಾಗಿದೆ.

ಬಂದ್​ ವಿಚಾರದ ಕುರಿತಂತೆ ಇಂದು (ಡಿಸೆಂಬರ್​ 24) ವಾಣಿಜ್ಯ ಮಂಡಳಿ ಸಭೆ ನಡೆಸಿತ್ತು. ಈ ಸಭೆಯಲ್ಲಿ ಕೇವಲ ನೈತಿಕ ಬೆಂಬಲ ನೀಡುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ. ಡಿಸೆಂಬರ್​ 31 ಶುಕ್ರವಾರ ಬಂದಿದೆ. ಆ ದಿನ ಹಲವು ಸಿನಿಮಾಗಳು ರಿಲೀಸ್​ ಆಗುತ್ತಿವೆ. ಈಗಾಗಲೇ ಕೊವಿಡ್​ನಿಂದ ಚಿತ್ರರಂಗದ ಸಾಕಷ್ಟು ತೊಂದರೆ ಅನುಭವಿಸಿದೆ. ಈಗ ಸಿನಿಮಾ ರಿಲೀಸ್​ ದಿನವೇ ಬಂದ್​ ಆದರೆ, ಚಿತ್ರರಂಗದ ಮೇಲೆ ಹೊಡೆತ ಬೀಳಲಿದೆ. ಈ ಕಾರಣಕ್ಕೆ ಕೇವಲ ನೈತಿಕ ಬೆಂಬಲ ನೀಡುವುದಾಗಿ ವಾಣಿಜ್ಯ ಮಂಡಳಿ ಘೋಷಿಸಿದೆ.

ವಾಣಿಜ್ಯ ಮಂಡಳಿಯ ಈ ನಿರ್ಧಾರದಿಂದ ಡಿಸೆಂಬರ್​ 31ರಂದು ಎಂದಿನಂತೆ ಚಿತ್ರಗಳು ಪ್ರದರ್ಶನ ಕಾಣಲಿವೆ. ಚಿತ್ರದ ಶೂಟಿಂಗ್​ ಕೂಡ ನಡೆಯಲಿದೆ, ಹೀಗಾಗಿ, ಈ ಬಂದ್​ನಿಂದ ಚಿತ್ರರಂಗಕ್ಕೆ ನೇರವಾಗಿ ಅಷ್ಟೊಂದು ತೊಂದರೆ ಆಗುವುದಿಲ್ಲ ಎನ್ನುವ ಅಭಿಪ್ರಾಯ ಕೇಳಿ ಬಂದಿದೆ.

ಈ ಬಗ್ಗೆ ವಾಟಾಳ್​ ನಾಗರಾಜ್​ ಅಸಮಾಧಾನಗೊಂಡಿದ್ದಾರೆ. ‘ನಿಮ್ಮ ನೈತಿಕ ಬೆಂಬಲ ತಿರಸ್ಕರಿಸಿದ್ದೇನೆ. ಫಿಲ್ಮ್ ಚೇಂಬರ್ ನೀಡಿರುವ ನೈತಿಕ ಬೆಂಬಲ‌ ನಮಗೆ ಬೇಡ. ಎಲ್ಲರೂ ಬೀದಿಗೆ ಇಳಿದು ಸಪೋರ್ಟ್​ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

‘ಕನ್ನಡದ ಹೋರಾಟ ಎಂಬುದು ಕನ್ನಡಿಗರ ವಿರುದ್ಧದ ಹೋರಾಟ ಆಗಬಾರದು. ಹೀಗೆಲ್ಲ ಬಂದ್​ ಮಾಡಿದರೆ ನಾವು ಸೂಸೈಡ್​ ಮಾಡಿಕೊಳ್ಳಬೇಕು ಅಷ್ಟೇ. ಕೋಟ್ಯಂತರ ರೂಪಾಯಿ ಬಂಡವಾಳ ಹಾಕಿದ ಸಿನಿಮಾ ಬಿಡುಗಡೆ ಆಗುವುದು ಶುಕ್ರವಾರ. ಅದೇ ದಿನ ಬಂದ್​ ಮಾಡಬೇಕೋ ಬೇಡವೋ ಎಂಬುದು ವಾಣಿಜ್ಯ ಮಂಡಳಿಯವರಿಗೆ ತಿಳಿಯುವುದಿಲ್ಲವಾ’ ಎಂದು ನಿರ್ದೇಶಕ ಗುರು ದೇಶಪಾಂಡೆ ಪ್ರಶ್ನಿಸಿದ್ದರು.

ಇದನ್ನೂ ಓದಿ: Badava Rascal Movie Review: ‘ಬಡವ ರಾಸ್ಕಲ್’ನ ಫ್ರೆಂಡ್​ಶಿಪ್​ ಗಟ್ಟಿ ಮಾಡಿದ ಪಂಚಿಂಗ್​ ಡೈಲಾಗ್

Karnataka Bandh: ಡಿ 31 ಕರ್ನಾಟಕ ಬಂದ್ -ಯಾರದೆಲ್ಲ ಬೆಂಬಲ ಇದೆ? ಕರವೇ, ಚಿತ್ರೋದ್ಯಮದ ನಿರ್ಧಾರವೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ