AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್​; ಸಿನಿಮಾ ಪ್ರದರ್ಶನ ಇರುತ್ತಾ? ಇಲ್ಲಿದೆ ಮಾಹಿತಿ

ಬಂದ್​ ವಿಚಾರದ ಕುರಿತಂತೆ ಇಂದು (ಡಿಸೆಂಬರ್​ 24) ವಾಣಿಜ್ಯ ಮಂಡಳಿ ಸಭೆ ನಡೆಸಿತ್ತು. ಈ ಸಭೆಯಲ್ಲಿ ಕೇವಲ ನೈತಿಕ ಬೆಂಬಲ ನೀಡುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ.

ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್​; ಸಿನಿಮಾ ಪ್ರದರ್ಶನ ಇರುತ್ತಾ? ಇಲ್ಲಿದೆ ಮಾಹಿತಿ
ಸ್ಯಾಂಡಲ್​ವುಡ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 24, 2021 | 6:17 PM

ಕನ್ನಡದ ಬಾವುಟಕ್ಕೆ ಅವಮಾನ, ಎಂಇಎಸ್​ ಪುಂಡಾಟಿಕೆ ಖಂಡಿಸಿ ಡಿಸೆಂಬರ್ 31ರಂದು ಕರ್ನಾಟಕ ಬಂದ್​​ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಇದಕ್ಕೆ ಅನೇಕ ಸಂಘಟನೆಗಳು ಬೆಂಬಲ ಸೂಚಿಸುತ್ತಿವೆ. ಇನ್ನೂ ಕೆಲವು ಸಂಘಟನೆಗಳು ನೈತಿಕ ಬೆಂಬಲವನ್ನಷ್ಟೇ ನೀಡಿವೆ. ಈ ಬಂದ್​ಅನ್ನು ಬೆಂಬಲಿಸ ಬೇಕೇ ಅಥವಾ ಬೇಡವೇ ಎನ್ನುವ ಬಗ್ಗೆ ದೀರ್ಘ ಚರ್ಚೆ ನಡೆದಿತ್ತು. ಈಗ ಈ ವಿಚಾರಕ್ಕೆ ಸಂಬಂಧಿಸಿ ಕನ್ನಡ ಚಿತ್ರರಂಗದವರು ಒಂದು ನಿರ್ಧಾರಕ್ಕೆ ಬಂದಿದ್ದಾರೆ. ಈ ಬಂದ್​ಗೆ ಕೇವಲ ನೈತಿಕ ಬೆಂಬಲ ಕೊಡುವುದಾಗಿ ಘೋಷಣೆ ಮಾಡಲಾಗಿದೆ.

ಬಂದ್​ ವಿಚಾರದ ಕುರಿತಂತೆ ಇಂದು (ಡಿಸೆಂಬರ್​ 24) ವಾಣಿಜ್ಯ ಮಂಡಳಿ ಸಭೆ ನಡೆಸಿತ್ತು. ಈ ಸಭೆಯಲ್ಲಿ ಕೇವಲ ನೈತಿಕ ಬೆಂಬಲ ನೀಡುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ. ಡಿಸೆಂಬರ್​ 31 ಶುಕ್ರವಾರ ಬಂದಿದೆ. ಆ ದಿನ ಹಲವು ಸಿನಿಮಾಗಳು ರಿಲೀಸ್​ ಆಗುತ್ತಿವೆ. ಈಗಾಗಲೇ ಕೊವಿಡ್​ನಿಂದ ಚಿತ್ರರಂಗದ ಸಾಕಷ್ಟು ತೊಂದರೆ ಅನುಭವಿಸಿದೆ. ಈಗ ಸಿನಿಮಾ ರಿಲೀಸ್​ ದಿನವೇ ಬಂದ್​ ಆದರೆ, ಚಿತ್ರರಂಗದ ಮೇಲೆ ಹೊಡೆತ ಬೀಳಲಿದೆ. ಈ ಕಾರಣಕ್ಕೆ ಕೇವಲ ನೈತಿಕ ಬೆಂಬಲ ನೀಡುವುದಾಗಿ ವಾಣಿಜ್ಯ ಮಂಡಳಿ ಘೋಷಿಸಿದೆ.

ವಾಣಿಜ್ಯ ಮಂಡಳಿಯ ಈ ನಿರ್ಧಾರದಿಂದ ಡಿಸೆಂಬರ್​ 31ರಂದು ಎಂದಿನಂತೆ ಚಿತ್ರಗಳು ಪ್ರದರ್ಶನ ಕಾಣಲಿವೆ. ಚಿತ್ರದ ಶೂಟಿಂಗ್​ ಕೂಡ ನಡೆಯಲಿದೆ, ಹೀಗಾಗಿ, ಈ ಬಂದ್​ನಿಂದ ಚಿತ್ರರಂಗಕ್ಕೆ ನೇರವಾಗಿ ಅಷ್ಟೊಂದು ತೊಂದರೆ ಆಗುವುದಿಲ್ಲ ಎನ್ನುವ ಅಭಿಪ್ರಾಯ ಕೇಳಿ ಬಂದಿದೆ.

ಈ ಬಗ್ಗೆ ವಾಟಾಳ್​ ನಾಗರಾಜ್​ ಅಸಮಾಧಾನಗೊಂಡಿದ್ದಾರೆ. ‘ನಿಮ್ಮ ನೈತಿಕ ಬೆಂಬಲ ತಿರಸ್ಕರಿಸಿದ್ದೇನೆ. ಫಿಲ್ಮ್ ಚೇಂಬರ್ ನೀಡಿರುವ ನೈತಿಕ ಬೆಂಬಲ‌ ನಮಗೆ ಬೇಡ. ಎಲ್ಲರೂ ಬೀದಿಗೆ ಇಳಿದು ಸಪೋರ್ಟ್​ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

‘ಕನ್ನಡದ ಹೋರಾಟ ಎಂಬುದು ಕನ್ನಡಿಗರ ವಿರುದ್ಧದ ಹೋರಾಟ ಆಗಬಾರದು. ಹೀಗೆಲ್ಲ ಬಂದ್​ ಮಾಡಿದರೆ ನಾವು ಸೂಸೈಡ್​ ಮಾಡಿಕೊಳ್ಳಬೇಕು ಅಷ್ಟೇ. ಕೋಟ್ಯಂತರ ರೂಪಾಯಿ ಬಂಡವಾಳ ಹಾಕಿದ ಸಿನಿಮಾ ಬಿಡುಗಡೆ ಆಗುವುದು ಶುಕ್ರವಾರ. ಅದೇ ದಿನ ಬಂದ್​ ಮಾಡಬೇಕೋ ಬೇಡವೋ ಎಂಬುದು ವಾಣಿಜ್ಯ ಮಂಡಳಿಯವರಿಗೆ ತಿಳಿಯುವುದಿಲ್ಲವಾ’ ಎಂದು ನಿರ್ದೇಶಕ ಗುರು ದೇಶಪಾಂಡೆ ಪ್ರಶ್ನಿಸಿದ್ದರು.

ಇದನ್ನೂ ಓದಿ: Badava Rascal Movie Review: ‘ಬಡವ ರಾಸ್ಕಲ್’ನ ಫ್ರೆಂಡ್​ಶಿಪ್​ ಗಟ್ಟಿ ಮಾಡಿದ ಪಂಚಿಂಗ್​ ಡೈಲಾಗ್

Karnataka Bandh: ಡಿ 31 ಕರ್ನಾಟಕ ಬಂದ್ -ಯಾರದೆಲ್ಲ ಬೆಂಬಲ ಇದೆ? ಕರವೇ, ಚಿತ್ರೋದ್ಯಮದ ನಿರ್ಧಾರವೇನು?

ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದಾರೆ: ಸೀಮಂತ್ ಸಿಂಗ್
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದಾರೆ: ಸೀಮಂತ್ ಸಿಂಗ್
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ