AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್​; ಸಿನಿಮಾ ಪ್ರದರ್ಶನ ಇರುತ್ತಾ? ಇಲ್ಲಿದೆ ಮಾಹಿತಿ

ಬಂದ್​ ವಿಚಾರದ ಕುರಿತಂತೆ ಇಂದು (ಡಿಸೆಂಬರ್​ 24) ವಾಣಿಜ್ಯ ಮಂಡಳಿ ಸಭೆ ನಡೆಸಿತ್ತು. ಈ ಸಭೆಯಲ್ಲಿ ಕೇವಲ ನೈತಿಕ ಬೆಂಬಲ ನೀಡುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ.

ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್​; ಸಿನಿಮಾ ಪ್ರದರ್ಶನ ಇರುತ್ತಾ? ಇಲ್ಲಿದೆ ಮಾಹಿತಿ
ಸ್ಯಾಂಡಲ್​ವುಡ್​
TV9 Web
| Edited By: |

Updated on: Dec 24, 2021 | 6:17 PM

Share

ಕನ್ನಡದ ಬಾವುಟಕ್ಕೆ ಅವಮಾನ, ಎಂಇಎಸ್​ ಪುಂಡಾಟಿಕೆ ಖಂಡಿಸಿ ಡಿಸೆಂಬರ್ 31ರಂದು ಕರ್ನಾಟಕ ಬಂದ್​​ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಇದಕ್ಕೆ ಅನೇಕ ಸಂಘಟನೆಗಳು ಬೆಂಬಲ ಸೂಚಿಸುತ್ತಿವೆ. ಇನ್ನೂ ಕೆಲವು ಸಂಘಟನೆಗಳು ನೈತಿಕ ಬೆಂಬಲವನ್ನಷ್ಟೇ ನೀಡಿವೆ. ಈ ಬಂದ್​ಅನ್ನು ಬೆಂಬಲಿಸ ಬೇಕೇ ಅಥವಾ ಬೇಡವೇ ಎನ್ನುವ ಬಗ್ಗೆ ದೀರ್ಘ ಚರ್ಚೆ ನಡೆದಿತ್ತು. ಈಗ ಈ ವಿಚಾರಕ್ಕೆ ಸಂಬಂಧಿಸಿ ಕನ್ನಡ ಚಿತ್ರರಂಗದವರು ಒಂದು ನಿರ್ಧಾರಕ್ಕೆ ಬಂದಿದ್ದಾರೆ. ಈ ಬಂದ್​ಗೆ ಕೇವಲ ನೈತಿಕ ಬೆಂಬಲ ಕೊಡುವುದಾಗಿ ಘೋಷಣೆ ಮಾಡಲಾಗಿದೆ.

ಬಂದ್​ ವಿಚಾರದ ಕುರಿತಂತೆ ಇಂದು (ಡಿಸೆಂಬರ್​ 24) ವಾಣಿಜ್ಯ ಮಂಡಳಿ ಸಭೆ ನಡೆಸಿತ್ತು. ಈ ಸಭೆಯಲ್ಲಿ ಕೇವಲ ನೈತಿಕ ಬೆಂಬಲ ನೀಡುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ. ಡಿಸೆಂಬರ್​ 31 ಶುಕ್ರವಾರ ಬಂದಿದೆ. ಆ ದಿನ ಹಲವು ಸಿನಿಮಾಗಳು ರಿಲೀಸ್​ ಆಗುತ್ತಿವೆ. ಈಗಾಗಲೇ ಕೊವಿಡ್​ನಿಂದ ಚಿತ್ರರಂಗದ ಸಾಕಷ್ಟು ತೊಂದರೆ ಅನುಭವಿಸಿದೆ. ಈಗ ಸಿನಿಮಾ ರಿಲೀಸ್​ ದಿನವೇ ಬಂದ್​ ಆದರೆ, ಚಿತ್ರರಂಗದ ಮೇಲೆ ಹೊಡೆತ ಬೀಳಲಿದೆ. ಈ ಕಾರಣಕ್ಕೆ ಕೇವಲ ನೈತಿಕ ಬೆಂಬಲ ನೀಡುವುದಾಗಿ ವಾಣಿಜ್ಯ ಮಂಡಳಿ ಘೋಷಿಸಿದೆ.

ವಾಣಿಜ್ಯ ಮಂಡಳಿಯ ಈ ನಿರ್ಧಾರದಿಂದ ಡಿಸೆಂಬರ್​ 31ರಂದು ಎಂದಿನಂತೆ ಚಿತ್ರಗಳು ಪ್ರದರ್ಶನ ಕಾಣಲಿವೆ. ಚಿತ್ರದ ಶೂಟಿಂಗ್​ ಕೂಡ ನಡೆಯಲಿದೆ, ಹೀಗಾಗಿ, ಈ ಬಂದ್​ನಿಂದ ಚಿತ್ರರಂಗಕ್ಕೆ ನೇರವಾಗಿ ಅಷ್ಟೊಂದು ತೊಂದರೆ ಆಗುವುದಿಲ್ಲ ಎನ್ನುವ ಅಭಿಪ್ರಾಯ ಕೇಳಿ ಬಂದಿದೆ.

ಈ ಬಗ್ಗೆ ವಾಟಾಳ್​ ನಾಗರಾಜ್​ ಅಸಮಾಧಾನಗೊಂಡಿದ್ದಾರೆ. ‘ನಿಮ್ಮ ನೈತಿಕ ಬೆಂಬಲ ತಿರಸ್ಕರಿಸಿದ್ದೇನೆ. ಫಿಲ್ಮ್ ಚೇಂಬರ್ ನೀಡಿರುವ ನೈತಿಕ ಬೆಂಬಲ‌ ನಮಗೆ ಬೇಡ. ಎಲ್ಲರೂ ಬೀದಿಗೆ ಇಳಿದು ಸಪೋರ್ಟ್​ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

‘ಕನ್ನಡದ ಹೋರಾಟ ಎಂಬುದು ಕನ್ನಡಿಗರ ವಿರುದ್ಧದ ಹೋರಾಟ ಆಗಬಾರದು. ಹೀಗೆಲ್ಲ ಬಂದ್​ ಮಾಡಿದರೆ ನಾವು ಸೂಸೈಡ್​ ಮಾಡಿಕೊಳ್ಳಬೇಕು ಅಷ್ಟೇ. ಕೋಟ್ಯಂತರ ರೂಪಾಯಿ ಬಂಡವಾಳ ಹಾಕಿದ ಸಿನಿಮಾ ಬಿಡುಗಡೆ ಆಗುವುದು ಶುಕ್ರವಾರ. ಅದೇ ದಿನ ಬಂದ್​ ಮಾಡಬೇಕೋ ಬೇಡವೋ ಎಂಬುದು ವಾಣಿಜ್ಯ ಮಂಡಳಿಯವರಿಗೆ ತಿಳಿಯುವುದಿಲ್ಲವಾ’ ಎಂದು ನಿರ್ದೇಶಕ ಗುರು ದೇಶಪಾಂಡೆ ಪ್ರಶ್ನಿಸಿದ್ದರು.

ಇದನ್ನೂ ಓದಿ: Badava Rascal Movie Review: ‘ಬಡವ ರಾಸ್ಕಲ್’ನ ಫ್ರೆಂಡ್​ಶಿಪ್​ ಗಟ್ಟಿ ಮಾಡಿದ ಪಂಚಿಂಗ್​ ಡೈಲಾಗ್

Karnataka Bandh: ಡಿ 31 ಕರ್ನಾಟಕ ಬಂದ್ -ಯಾರದೆಲ್ಲ ಬೆಂಬಲ ಇದೆ? ಕರವೇ, ಚಿತ್ರೋದ್ಯಮದ ನಿರ್ಧಾರವೇನು?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್