AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಕ್ರವಾರದ ಕರ್ನಾಟಕ ಬಂದ್​ಗೆ ಬೆಂಬಲ ನೀಡಿದ ಚಿತ್ರರಂಗ

ಶಿವರಾಜ್​ಕುಮಾರ್ ಅವರನ್ನು ಸಂಪರ್ಕಿಸಲು ಎನ್​ಎಂ ಸುರೇಶ್ ಅವರು ಪ್ರಯತ್ನಿಸುತ್ತಿದ್ದಾರೆ. ಸಭೆಯ ಬಳಿಕ ಅಂತಿಮ ನಿರ್ಧಾರ ಪ್ರಕಟ ಆಗಲಿದೆ. ಅಂದು ಶೂಟಿಂಗ್, ಸಿನಿಮಾ ಪ್ರದರ್ಶನ ಇರುವುದು ಅನುಮಾನ ಎನ್ನಲಾಗುತ್ತಿದೆ.

ಶುಕ್ರವಾರದ ಕರ್ನಾಟಕ ಬಂದ್​ಗೆ ಬೆಂಬಲ ನೀಡಿದ ಚಿತ್ರರಂಗ
ಎನ್​ಎಂ ಸುರೇಶ್
ಮಾಲತೇಶ ಜಗ್ಗೀನ್
| Edited By: |

Updated on: Sep 27, 2023 | 12:12 PM

Share

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಶುಕ್ರವಾರ (ಸೆಪ್ಟೆಂಬರ್ 29) ಕರ್ನಾಟಕ ಬಂದ್​ಗೆ ವಾಟಾಳ್ ನಾಗರಾಜ್ (Vatal Nagaraj) ಅವರು ಕರೆ ನೀಡಿದ್ದಾರೆ. ಇದಕ್ಕೆ ಚಿತ್ರರಂಗದವರು ಕೂಡ ಬೆಂಬಲ ನೀಡಿದ್ದಾರೆ. ಈ ಸಂಬಂಧ ಇಂದು (ಸೆಪ್ಟೆಂಬರ್ 27) ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ಕರೆಯಲಾಗಿದೆ. ಅಲ್ಲಿ ಸಂಪೂರ್ಣ ರೂಪುರೇಷೆ ಸಿದ್ಧವಾಗಲಿದೆ.

‘ನೆಲ, ಜಲ, ಭಾಷೆ ವಿಚಾರವಾಗಿ ಚಿತ್ರರಂಗದವರಿಂದ ಯಾವಾಗಲೂ ಬೆಂಬಲ ಇದ್ದೆ ಇರುತ್ತದೆ. ಶುಕ್ರವಾರದ ಬಂದ್​ಗೆ ನಮ್ಮ ಬೆಂಬಲ ಇದೆ. ಆದರೆ ನಮ್ಮ ಹೋರಾಟ ಹೇಗೆ ಎಂಬುದರ ಬಗ್ಗೆ ಇವತ್ತು ಸಭೆ ಮಾಡುತ್ತೇವೆ. ಪ್ರತ್ಯೇಕವಾಗಿ ಭಾಗಿಯಾಗಬೇಕಾ ಅಥವಾ ಕನ್ನಡ ಸಂಘಟನೆಗಳ ಜೊತೆಯೇ ಪ್ರತಿಭಟನೆ ಮಾಡಬೇಕಾ ಅನ್ನೋದನ್ನು ಚರ್ಚೆ ಮಾಡುತ್ತೇವೆ. ಕಲಾವಿದರ ಭಾಗಿ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ಮಾಡಿ ತಿಳಿಸುತ್ತೇವೆ’ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್​ಎಂ ಸುರೇಶ್ ಹೇಳಿದ್ದಾರೆ.

ಶಿವರಾಜ್​ಕುಮಾರ್ ಅವರನ್ನು ಸಂಪರ್ಕಿಸಲು ಎನ್​ಎಂ ಸುರೇಶ್ ಅವರು ಪ್ರಯತ್ನಿಸುತ್ತಿದ್ದಾರೆ. ಸಭೆಯ ಬಳಿಕ ಅಂತಿಮ ನಿರ್ಧಾರ ಪ್ರಕಟ ಆಗಲಿದೆ. ಅಂದು ಶೂಟಿಂಗ್, ಸಿನಿಮಾ ಪ್ರದರ್ಶನ ಇರುವುದು ಅನುಮಾನ ಎನ್ನಲಾಗುತ್ತಿದೆ.

ಇದನ್ನೂ ಓದಿ: ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ಫೈರ್ ಫ್ಲೈ ಸಿನಿಮಾದ ಮೊದಲ‌ ಹಂತದ ಚಿತ್ರೀಕರಣ ಮುಕ್ತಾಯ

ಶುಕ್ರವಾರ ಹಲವು ಸಿನಿಮಾಗಳು ರಿಲೀಸ್ ಆಗುವುದರಲ್ಲಿವೆ. ಕನ್ನಡದಲ್ಲಿ ಗಣೇಶ್ ನಟನೆಯ ‘ಬಾನದಾರಿಯಲ್ಲಿ’ ಸಿನಿಮಾ ರಿಲೀಸ್ ಆಗಲಿದೆ. ತಮಿಳಿನಲ್ಲಿ ‘ಚಂದ್ರಮುಖಿ 2’ ರಿಲೀಸ್ ಆಗುತ್ತಿದೆ. ಇದಲ್ಲದೆ, ‘ದಿ ವ್ಯಾಕ್ಸಿನ್ ವಾರ್’ ಕೂಡ ಅದೇ ದಿನ ಬಿಡುಗಡೆ ಆಗಲಿದೆ. ಇವುಗಳ ಗಳಿಕೆ ಮೇಲೆ ಬಂದ್ ಪರಿಣಾಮ ಬೀರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್