AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಕ್ರವಾರದ ಕರ್ನಾಟಕ ಬಂದ್​ಗೆ ಬೆಂಬಲ ನೀಡಿದ ಚಿತ್ರರಂಗ

ಶಿವರಾಜ್​ಕುಮಾರ್ ಅವರನ್ನು ಸಂಪರ್ಕಿಸಲು ಎನ್​ಎಂ ಸುರೇಶ್ ಅವರು ಪ್ರಯತ್ನಿಸುತ್ತಿದ್ದಾರೆ. ಸಭೆಯ ಬಳಿಕ ಅಂತಿಮ ನಿರ್ಧಾರ ಪ್ರಕಟ ಆಗಲಿದೆ. ಅಂದು ಶೂಟಿಂಗ್, ಸಿನಿಮಾ ಪ್ರದರ್ಶನ ಇರುವುದು ಅನುಮಾನ ಎನ್ನಲಾಗುತ್ತಿದೆ.

ಶುಕ್ರವಾರದ ಕರ್ನಾಟಕ ಬಂದ್​ಗೆ ಬೆಂಬಲ ನೀಡಿದ ಚಿತ್ರರಂಗ
ಎನ್​ಎಂ ಸುರೇಶ್
Malatesh Jaggin
| Edited By: |

Updated on: Sep 27, 2023 | 12:12 PM

Share

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಶುಕ್ರವಾರ (ಸೆಪ್ಟೆಂಬರ್ 29) ಕರ್ನಾಟಕ ಬಂದ್​ಗೆ ವಾಟಾಳ್ ನಾಗರಾಜ್ (Vatal Nagaraj) ಅವರು ಕರೆ ನೀಡಿದ್ದಾರೆ. ಇದಕ್ಕೆ ಚಿತ್ರರಂಗದವರು ಕೂಡ ಬೆಂಬಲ ನೀಡಿದ್ದಾರೆ. ಈ ಸಂಬಂಧ ಇಂದು (ಸೆಪ್ಟೆಂಬರ್ 27) ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ಕರೆಯಲಾಗಿದೆ. ಅಲ್ಲಿ ಸಂಪೂರ್ಣ ರೂಪುರೇಷೆ ಸಿದ್ಧವಾಗಲಿದೆ.

‘ನೆಲ, ಜಲ, ಭಾಷೆ ವಿಚಾರವಾಗಿ ಚಿತ್ರರಂಗದವರಿಂದ ಯಾವಾಗಲೂ ಬೆಂಬಲ ಇದ್ದೆ ಇರುತ್ತದೆ. ಶುಕ್ರವಾರದ ಬಂದ್​ಗೆ ನಮ್ಮ ಬೆಂಬಲ ಇದೆ. ಆದರೆ ನಮ್ಮ ಹೋರಾಟ ಹೇಗೆ ಎಂಬುದರ ಬಗ್ಗೆ ಇವತ್ತು ಸಭೆ ಮಾಡುತ್ತೇವೆ. ಪ್ರತ್ಯೇಕವಾಗಿ ಭಾಗಿಯಾಗಬೇಕಾ ಅಥವಾ ಕನ್ನಡ ಸಂಘಟನೆಗಳ ಜೊತೆಯೇ ಪ್ರತಿಭಟನೆ ಮಾಡಬೇಕಾ ಅನ್ನೋದನ್ನು ಚರ್ಚೆ ಮಾಡುತ್ತೇವೆ. ಕಲಾವಿದರ ಭಾಗಿ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ಮಾಡಿ ತಿಳಿಸುತ್ತೇವೆ’ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್​ಎಂ ಸುರೇಶ್ ಹೇಳಿದ್ದಾರೆ.

ಶಿವರಾಜ್​ಕುಮಾರ್ ಅವರನ್ನು ಸಂಪರ್ಕಿಸಲು ಎನ್​ಎಂ ಸುರೇಶ್ ಅವರು ಪ್ರಯತ್ನಿಸುತ್ತಿದ್ದಾರೆ. ಸಭೆಯ ಬಳಿಕ ಅಂತಿಮ ನಿರ್ಧಾರ ಪ್ರಕಟ ಆಗಲಿದೆ. ಅಂದು ಶೂಟಿಂಗ್, ಸಿನಿಮಾ ಪ್ರದರ್ಶನ ಇರುವುದು ಅನುಮಾನ ಎನ್ನಲಾಗುತ್ತಿದೆ.

ಇದನ್ನೂ ಓದಿ: ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ಫೈರ್ ಫ್ಲೈ ಸಿನಿಮಾದ ಮೊದಲ‌ ಹಂತದ ಚಿತ್ರೀಕರಣ ಮುಕ್ತಾಯ

ಶುಕ್ರವಾರ ಹಲವು ಸಿನಿಮಾಗಳು ರಿಲೀಸ್ ಆಗುವುದರಲ್ಲಿವೆ. ಕನ್ನಡದಲ್ಲಿ ಗಣೇಶ್ ನಟನೆಯ ‘ಬಾನದಾರಿಯಲ್ಲಿ’ ಸಿನಿಮಾ ರಿಲೀಸ್ ಆಗಲಿದೆ. ತಮಿಳಿನಲ್ಲಿ ‘ಚಂದ್ರಮುಖಿ 2’ ರಿಲೀಸ್ ಆಗುತ್ತಿದೆ. ಇದಲ್ಲದೆ, ‘ದಿ ವ್ಯಾಕ್ಸಿನ್ ವಾರ್’ ಕೂಡ ಅದೇ ದಿನ ಬಿಡುಗಡೆ ಆಗಲಿದೆ. ಇವುಗಳ ಗಳಿಕೆ ಮೇಲೆ ಬಂದ್ ಪರಿಣಾಮ ಬೀರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!