Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Bandh: ಬಂದ್ ವೇಳೆ ಥಿಯೇಟರ್​ನಲ್ಲಿ ಸಿನಿಮಾ ನೋಡೋ ಪ್ಲ್ಯಾನ್ ಬೇಡ; ಇಷ್ಟು ಗಂಟೆವರೆಗೆ ಇರಲ್ಲ ಪ್ರದರ್ಶನ  

ಬೆಳಗಾವಿಯಲ್ಲಿ ಮರಾಠಿಗರ ಕಿರುಕುಳದಿಂದಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಇಂದು (ಮಾರ್ಚ್ 22) ರಾಜ್ಯಾದ್ಯಂತ ಬಂದ್‌ ಆಚರಿಸಲಾಗುತ್ತಿದೆ. ಚಲನಚಿತ್ರ ಪ್ರದರ್ಶನಗಳು ರದ್ದಾಗಿದ್ದು, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಿದೆ. ಹಲವು ಸಂಘ-ಸಂಸ್ಥೆಗಳು ಈ ಬಂದ್‌ಗೆ ಬೆಂಬಲ ನೀಡಿವೆ. ವೈದ್ಯಕೀಯ ಸೇವೆ ಮತ್ತು ಅಗತ್ಯ ವಸ್ತುಗಳ ಸರಬರಾಜು ಮಾತ್ರ ಇರಲಿದೆ.

Karnataka Bandh: ಬಂದ್ ವೇಳೆ ಥಿಯೇಟರ್​ನಲ್ಲಿ ಸಿನಿಮಾ ನೋಡೋ ಪ್ಲ್ಯಾನ್ ಬೇಡ; ಇಷ್ಟು ಗಂಟೆವರೆಗೆ ಇರಲ್ಲ ಪ್ರದರ್ಶನ  
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
|

Updated on: Mar 22, 2025 | 7:04 AM

ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟ ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ ನಮ್ಮ ರಾಜ್ಯದ ಸಾರಿಗೆ ಬಸ್ ಚಾಲಕನಿಗೆ ಕಿರುಕುಳ ಕೊಟ್ಟ ಘಟನೆ ಇದಕ್ಕೆ ತಾಜಾ ಉದಾಹರಣೆ. ಇದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಇಂದು (ಮಾರ್ಚ್​ 22) ರಾಜ್ಯ ಸ್ತಬ್ಧವಾಗಲಿದೆ. ಹಲವು ಸಂಘ-ಸಂಸ್ಥೆಗಳು ಈ ಬಂದ್​ಗೆ ಬೆಂಬಲ ಸೂಚಿಸಿವೆ. ಅದೇ ರೀತಿ ಕರ್ನಾಟಕ ಬಂದ್​ಗೆ (Karnataka Bandh) ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲ ಕೊಟ್ಟಿದೆ. ಇದರಿಂದ ಸಿನಿಮಾ ಪ್ರದರ್ಶನದಲ್ಲಿ ವ್ಯತ್ಯಾಸ ಕಾಣಲಿದೆ.

ಇಂದು ರಾಜ್ಯಾದ್ಯಂತ ಬೆಳಗಿನ ಶೋಗಳು ಬಂದ್ ಇರಲಿವೆ. ಬೆಳಿಗ್ಗೆ ಶೋ ಪ್ರದರ್ಶಿಸದಂತೆ ವಾಣಿಜ್ಯ ಮಂಡಳಿ ಕಡೆಯಿಂದ ಸುತ್ತೋಲೆ ಹೊರಡಿಸಲಾಗಿದೆ. ಸದ್ಯ ಬುಕ್ ಮೈ ಶೋನಲ್ಲಿ ಬುಕ್ಕಿಂಗ್ ಓಪನ್ ಇದೆ. ಆದರೆ, ಬಂದ್ ಬಿಸಿ ಹೆಚ್ಚಿದರೆ ನಂತರ ಶೋ ರದ್ದಾಗುವ ಸಾಧ್ಯತೆ ದಟ್ಟವಾಗಿದೆ. ಮಧ್ಯಾಹ್ನದ ಬಳಿಕ ಯಥಾ ಪ್ರಕಾರ ಶೋಗಳು ಪ್ರಸಾರ ಕಾಣಲಿವೆ. ಹೀಗಾಗಿ ಸಿನಿಮಾ ನೋಡುವ ಪ್ಲ್ಯಾನ್ ಇದ್ದರೆ ಮಧ್ಯಾಹ್ನದ ಬಳಿಕ ಯೋಜಿಸುವುದು ಉತ್ತಮ.

ಇದರ ಜೊತೆಗೆ ಫಿಲ್ಮ್ ಚೇಂಬರ್​ನ ಮಾಜಿ ಅಧ್ಯಕ್ಷರಾದ ಸಾರಾ ಗೋವಿಂದು ಸೇರಿದಂತೆ ಚಿತ್ರರಂಗಕ್ಕೆ ಸಂಬಂಧಿಸಿದ ಹಲವರು ಹೋರಾಟದಲ್ಲಿ ಭಾಗಿ ಆಗಲಿದ್ದಾರೆ. ಟೌನ್​ಹಾಲ್ ಸರ್ಕಲ್​ನಿಂದ ಫ್ರೀಡಂ ಪಾರ್ಕ್​ವರೆಗೆ ಮೆರವಣಿಗೆ ನಡೆಯಲಿದೆ. ಇದರಲ್ಲಿ ಇವರು ಭಾಗಿ ಆಗಲಿದ್ದು, ಮರಾಠಿ ಪುಂಡರ ವಿರುದ್ಧ ಹೋರಾಟದ ಮೆರವಣಿಗೆ ನಡೆಯಲಿದೆ.

ಇದನ್ನೂ ಓದಿ
Image
ಚಿರಂಜೀವಿ ಭೇಟಿ ಮಾಡಿಸೋ ನೆಪದಲ್ಲಿ ಹಣ ಪೀಕಿದ ಖದೀಮರು; ಚಿರಂಜೀವಿ ಎಚ್ಚರಿಕೆ
Image
4 ವರ್ಷಗಳ ದಾಂಪತ್ಯ ಅಂತ್ಯ; ಧನಶ್ರೀಗೆ ಒಂದು ದಿನಕ್ಕೆ ಸಿಕ್ಕ ಹಣ ಇಷ್ಟೊಂದಾ?
Image
ಸಿಹಿಯ ಆತ್ಮಕ್ಕೆ ಸಿಕ್ಕಿತು ಹನುಮಂತನ ರಕ್ಷಣೆ; ಪವರ್​ನಿಂದ ವಿಲನ್​ಗಳಿಗೆ ಭಯ
Image
ವಿಚ್ಛೇದನ ಪಡೆದ ದಿನ ಹಾಡಿನ ಮೂಲಕ ಅನೈತಿಕ ಸಂಬಂಧದ ಬಗ್ಗೆ ಮಾತನಾಡಿದ ಧನಶ್ರೀ

ಇದನ್ನೂ ಓದಿ: ಕರ್ನಾಟಕ ಬಂದ್, ನೀವು ತಿಳಿದಿರಲೇಬೇಕಾದ ಮಾಹಿತಿ ಇಲ್ಲಿದೆ

ಏನಿರುತ್ತೆ? ಏನಿರಲ್ಲ?

ಓಲಾ, ಉಬರ್, ಏರ್​​ಪೋರ್ಟ್​ ಟ್ಯಾಕ್ಸಿ, ಆಟೋ ಚಾಲಕರ ಸಂಘಟನೆ, ಖಾಸಗಿ ಸಾರಿಗೆ ಒಕ್ಕೂಟ, ಎಪಿಎಂಸಿ ಸಂಘಟನೆ, ಕಾರ್ಮಿಕ ಪರಿಷತ್ ಬಂದ್​ಗೆ ಬೆಂಬಲ ಸೂಚಿಸಿದ್ದು, ಈ ಸೇವೆಯಲ್ಲಿ ವ್ಯತ್ಯಾಸ ಆಗಲಿದೆ. ವೈದ್ಯಕೀಯ ಸೇವೆ, ಹಾಲು, ಅಗತ್ಯ ವಸ್ತುಗಳು, ನಮ್ಮ ಮೆಟ್ರೋ ಸೇವೆ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.