AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಫಿಲಂ ಸಿಟಿ: 150 ಎಕರೆ ಜಮೀನು, 500 ಕೋಟಿ ಹಣ ಮೀಸಲು

Karnataka Budget 2025: ಕರ್ನಾಟಕದಲ್ಲಿ ಬೃಹತ್ ಆದ, ಸುಸಜ್ಜಿತವಾದ ಫಿಲಂ ಸಿಟಿ ನಿರ್ಮಾಣ ಮಾಡಬೇಕು ಎಂಬುದು ಚಿತ್ರರಂಗದವರು ದಶಕಗಳ ಬೇಡಿಕೆ. ಈಗಲೂ ಸಹ ರಾಜ್ಯದ ಸಿನಿಮಾ ತಂಡಗಳು ನೆರೆಯ ರಾಜ್ಯಕ್ಕೆ ಹೋಗಿ ಶೂಟಿಂಗ್ ಮಾಡುತ್ತವೆ. ಇದೀಗ ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯ, ಫಿಲಂ ಸಿಟಿ ನಿರ್ಮಾಣಕ್ಕೆ 500 ಕೋಟಿ ಬಜೆಟ್ ಮೀಸಲಿಟ್ಟಿದ್ದಾರೆ.

ಮೈಸೂರಿನಲ್ಲಿ ಫಿಲಂ ಸಿಟಿ: 150 ಎಕರೆ ಜಮೀನು, 500 ಕೋಟಿ ಹಣ ಮೀಸಲು
Karnataka Budget
ಮಂಜುನಾಥ ಸಿ.
|

Updated on:Mar 07, 2025 | 11:29 AM

Share

ಕರ್ನಾಟಕದಲ್ಲಿ ಸುಸಜ್ಜಿತ, ಅತ್ಯಾಧುನಿಕ ಸೌಕರ್ಯಗಳುಳ್ಳ ಫಿಲಂ ಸಿಟಿ (Film City) ನಿರ್ಮಾಣ ಆಗಬೇಕು ಎಂಬುದು ದಶಕಗಳ ಕೂಗಾಗಿದೆ. ಈ ವರೆಗೆ ಬಂದ ಎಲ್ಲ ಸರ್ಕಾರಗಳನ್ನು ಈ ಬಗ್ಗೆ ಚಿತ್ರರಂಗ ಮನವಿ ಮಾಡಿದೆ. ಕೆಲ ಸರ್ಕಾರಗಳು ಭರವಸೆಯನ್ನೂ ನೀಡಿದ್ದವು. ಆದರೆ ಈ ವರೆಗೆ ಫಿಲಂ ಸಿಟಿ ನಿರ್ಮಾಣ ಆಗಿಲ್ಲ. ಈ ಬಾರಿ ಮತ್ತೊಮ್ಮೆ ಸಿದ್ದರಾಮಯ್ಯ (Siddaramaiah) ಅವರು ಬಜೆಟ್​ನಲ್ಲಿ ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಾಣಕ್ಕೆ 500 ಕೋಟಿ ಹಣವನ್ನು ಮೀಸಲಿಟ್ಟಿದ್ದಾರೆ. ಜೊತೆಗೆ 150 ಎಕರೆ ಜಾಗವನ್ನು ಸಹ ಕಾಯ್ದಿರಿಸಿರುವುದಾಗಿ ಘೋಷಣೆ ಮಾಡಿದ್ದಾರೆ.

ಕೆಲ ದಿನಗಳ ಹಿಂದೆ ನಡೆದ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸದಲ್ಲಿ ಸಹ ಈ ಬಗ್ಗೆ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ನಮ್ಮ ಸರ್ಕಾರ ಫಿಲಂ ಸಿಟಿ ನಿರ್ಮಾಣಕ್ಕೆ ಬದ್ಧವಾಗಿದೆ ಎಂದು ಹೇಳಿದ್ದರು. ಅದರಂತೆ ಇಂದು ಬಜೆಟ್​ನಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ. ಅಸಲಿಗೆ ಈ ಹಿಂದೆ ಸಹ ಕೆಲ ಸರ್ಕಾರಗಳು ಫಿಲಂ ಸಿಟಿ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದವು. ಆದರೆ ಕಾರ್ಯರೂಪಕ್ಕೆ ಬಂದಿರಲಿಲ್ಲ. ಈಗಲಾದರೂ ಇದು ಕಾರ್ಯರೂಪಕ್ಕೆ ಬರಲಿದೆಯೇ ಕಾದು ನೋಡಬೇಕಿದೆ.

ಇಲ್ಲಿ ಗಮನಿಸಬೇಕಾದ ಅಂಶವೊಂದಿದೆ. ಭಾರತದ ಪ್ರಸಿದ್ಧ ಫಿಲಂ ಸಿಟಿಗಳಲ್ಲಿ ಪ್ರಮುಖವಾಗಿರುವ ರಾಮೋಜಿ ರಾವ್ ಫಿಲಂ ಸಿಟಿ ನಿರ್ಮಾಣವಾಗಿರುವುದು 1600 ಎಕರೆ ಪ್ರದೇಶದಲ್ಲಿ. ಆದರೆ ಈಗ ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಾಣಕ್ಕೆ ಸರ್ಕಾರ ಮೀಸಲಿಟ್ಟಿರುವುದು 150 ಎಕರೆ. ಫಿಲಂ ಸಿಟಿ ನಿರ್ಮಾಣಕ್ಕೆ ಇಷ್ಟು ಸ್ಥಳ ಸಾಕಾಗುತ್ತದೆಯೇ, ಇಷ್ಟು ಜಾಗದಲ್ಲಿ ಸೂಕ್ತವಾದ ಫಿಲಂ ಸಿಟಿ ನಿರ್ಮಾಣ ಸಾಧ್ಯವೇ ಎಂಬುದು ಸಹ ವಿಶ್ಲೇಷಣೆಗೆ ಒಳಗಾಗಬೇಕಿದೆ.

ಇದನ್ನೂ ಓದಿ
Image
ಕಂಡಕ್ಟರ್ ಆಗಿದ್ದಾಗಲೇ ರಜನಿಕಾಂತ್ ಸ್ಟೈಲಿಶ್​
Image
ಕನ್ನಡ ಸಿನಿಮಾ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಪುಷ್ಪ ಚಿತ್ರದ ಸಂಗೀತ ಸಂಯೋಜಕ
Image
‘ಮಾಣಿಕ್ಯ’ ಚಿತ್ರದ ನಟಿ ರನ್ಯಾ ಬಳಿ ಸಿಕ್ಕಿದ್ದು ಬರೋಬ್ಬರಿ 15 ಕೆಜಿ ಚಿನ್ನ
Image
ಪುಡಿರೌಡಿ ತರ ಆಡೋದು ಬಿಡಿ, ಸಿಎಂ ಆದ್ರೆ ಕಷ್ಟ ಇದೆ’; ಡಿಕೆಶಿಗೆ ಕೌಂಟರ್

ಇದನ್ನೂ ಓದಿ:ರಾಜಮೌಳಿ ಮುಂದಿನ ಸಿನಿಮಾ ಬಜೆಟ್ ಕೇಳಿದ್ರೆ ನೀವು ಹೌಹಾರ್ತೀರಾ

ಇದರ ಜೊತೆಗೆ ನಂದಿನಿ ಲೇಔಟ್​ನಲ್ಲಿರುವ ಚಲನಚಿತ್ರ ಅಕಾಡೆಮಿ ಅಭಿವೃದ್ಧಿ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಇಂದಿನ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ. ಚಲನಚಿತ್ರ ಅಕಾಡೆಮಿಯನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:24 am, Fri, 7 March 25

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?