AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಜೆಟ್ 2025: ಚಿತ್ರರಂಗಕ್ಕೆ ಸಿಕ್ಕಿದ್ದೇನು?

Karnataka Budget 2025: ಸಿಎಂ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ಬಜೆಟ್ ಮಂಡನೆ ಮಾಡಿದರು. ಹಲವು ಕ್ಷೇತ್ರಗಳು ಹಲವು ಯೋಜನೆಗಳು, ಅನುದಾನಗಳನ್ನು ನೀಡಿದರು. ಅದರಂತೆ ಕನ್ನಡ ಚಿತ್ರರಂಗಕ್ಕೂ ಸಹ ಕೆಲ ಅನುದಾನಗಳನ್ನು ನೀಡಿದ್ದಾರೆ. ಈ ಬಜೆಟ್​ನಲ್ಲಿ ಚಿತ್ರರಂಗಕ್ಕೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ...

ಕರ್ನಾಟಕ ಬಜೆಟ್ 2025: ಚಿತ್ರರಂಗಕ್ಕೆ ಸಿಕ್ಕಿದ್ದೇನು?
Cm Siddaramaiah
ಮಂಜುನಾಥ ಸಿ.
|

Updated on: Mar 07, 2025 | 12:50 PM

Share

ಸಿಎಂ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡಿದರು. ಹಲವು ಕ್ಷೇತ್ರಗಳಿಗೆ ಹಲವು ಅನುದಾನಗಳನ್ನು ಸಿದ್ದರಾಮಯ್ಯ ಘೋಷಣೆ ಮಾಡಿದರು. ಈ ಬಾರಿ ಕನ್ನಡ ಚಿತ್ರರಂಗಕ್ಕೂ ಸಹ ಸಿದ್ದರಾಮಯ್ಯ ಅವರು ಕೆಲವು ಸಿಹಿ ಸುದ್ದಿಗಳನ್ನು ಬಜೆಟ್​ನಲ್ಲಿ ನೀಡಿದ್ದಾರೆ. ಚಿತ್ರರಂಗದ ಕೆಲ ಬೇಡಿಕೆಗಳನ್ನು ಸಿದ್ದರಾಮಯ್ಯ ಅವರು ಈ ಬಾರಿಯ ಬಜೆಟ್​ನಲ್ಲಿ ಈಡೇರಿಸಿದ್ದಾರೆ. ಒಟ್ಟಾರೆಯಾಗಿ ಈ ಬಾರಿಯ ಬಜೆಟ್​ನಲ್ಲಿ ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ…

ಮೈಸೂರಿನಲ್ಲಿ ಫಿಲಂ ಸಿಟಿ

ಕನ್ನಡ ಚಿತ್ರರಂಗದ ದಶಕಗಳ ಬೇಡಿಕೆಯಾದ ಫಿಲಂ ಸಿಟಿ ನಿರ್ಮಾಣಕ್ಕೆ 500 ಕೋಟಿ ರೂಪಾಯಿ ಹಣವನ್ನು ಮೀಸಲಿಡಲಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫಿಲಂ ಸಿಟಿ ನಿರ್ಮಾಣಕ್ಕೆ ಮೈಸೂರಿನಲ್ಲಿ 150 ಎಕರೆ ಜಾಗವನ್ನು ಕಾಯ್ದಿರಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕನ್ನಡ ಸಿನಿಮಾಗಳಿಗೆ OTT ವೇದಿಕೆ

ಕನ್ನಡ ಸಿನಿಮಾಗಳನ್ನು ಯಾವ ಒಟಿಟಿಗಳೂ ಖರೀದಿಸುತ್ತಿಲ್ಲ ಎಂಬ ದೂರು ಕಳೆದ ಕೆಲ ವರ್ಷಗಳಿಂದ ಕೇಳಿ ಬರುತ್ತಿದೆ. ಹಾಗಾಗಿ ಈಗ ಸರ್ಕಾರವೇ ಮುಂದಾಗಿ ಒಟಿಟಿ ವೇದಿಕೆ ಸೃಷ್ಟಿಸಲು ಮುಂದಾಗಿದ್ದು, ಇಲ್ಲಿ ಕನ್ನಡ ಸಿನಿಮಾಗಳನ್ನು ಪ್ರದರ್ಶನ ಮಾಡಲಿದೆ. ಕೇರಳದಲ್ಲಿ ಈಗಾಗಲೇ ಈ ಮಾದರಿ ಚಾಲ್ತಿಯಲ್ಲಿದೆ.

ಸಿನಿಮಾ ಕ್ಷೇತ್ರ ಕೈಗಾರಿಕಾ ನೀತಿ ಅಡಿ ತರಲು ನಿರ್ಧಾರ

ಸಿನಿಮಾ ಉದ್ಯಮವನ್ನು ಸಿನಿಮಾ ಕೈಗಾರಿಕೆ ಎಂದು ಘೋಷಿಸಲಾಗಿದೆ. ಸಿನಿಮಾ ರಂಗವನ್ನು ಕೈಗಾರಿಕೆಯನ್ನಾಗಿ ಗುರುತಿಸುವ ಮೂಲಕ ಕೈಗಾರಿಕಾ ನೀತಿಯ ಅಡಿ ಸರ್ಕಾರ ನೀಡುವ ಸವಲತ್ತುಗಳು, ನಿಯಮಗಳು ಸಿನಿಮಾ ರಂಗಕ್ಕೂ ಅನ್ವಯ ಆಗಲಿದೆ.

ಮಲ್ಟಿಫ್ಲೆಕ್ಸ್​ಗಳಲ್ಲಿ ಏಕರೂಪದ ದರ

ಕರ್ನಾಟಕದಲ್ಲಿ ಮಲ್ಟಿಪ್ಲೆಕ್ಸ್​ಗಳು ಬಹಳ ದುಬಾರಿ ಬೆಲೆಗೆ ಟಿಕೆಟ್ ಮಾರಾಟ ಮಾಡುತ್ತಿವೆ. ಮಲ್ಟಿಪ್ಲೆಕ್ಸ್​ಗಳು ದುಬಾರಿ ಬೆಲೆಗೆ ಟಿಕೆಟ್ ಮಾರಾಟ ಮಾಡುತ್ತಿರುವುದರ ವಿರುದ್ಧ ಕ್ರಮಕ್ಕೆ ಬಹಳ ದಿನಗಳಿಂದಲೂ ಒತ್ತಾಯ ಕೇಳಿ ಬಂದಿತ್ತು. ಇದೀಗ ಸರ್ಕಾರವು, ಮಲ್ಟಿಪ್ಲೆಕ್ಸ್​ಗಳ ಟಿಕೆಟ್ ದರವನ್ನು 200 ರೂಪಾಯಿಗೆ ನಿಗದಿಪಡಿಸಿ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ:ಕನ್ನಡ ಸಿನಿಮಾಗಳಿಗಾಗಿ ಒಟಿಟಿ, ಕೈಗಾರಿಕಾ ನೀತಿಯಡಿ ಚಿತ್ರರಂಗ; ಬಜೆಟ್​ನಲ್ಲಿ ಘೋಷಣೆ ಮಾಡಿದ ಸಿದ್ದರಾಮಯ್ಯ

ಚಲನಚಿತ್ರ ಅಕಾಡೆಮಿ ಅಭಿವೃದ್ಧಿ

ಬೆಂಗಳೂರಿನ ನಂದಿನಿ ಲೇಔಟ್​ನಲ್ಲಿರುವ ಚಲನಚಿತ್ರ ಅಕಾಡೆಮಿಯನ್ನು ಅಭಿವೃದ್ಧಿಪಡಿಸುವುದಾಗಿ ಸರ್ಕಾರ ಘೋಷಣೆ ಮಾಡಿದೆ. ಖಾಸಗಿ ಸಹಭಾಗಿತ್ವದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಭಿವೃದ್ಧಿ ಮಾಡಲಾಗುತ್ತದೆಯಂತೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ