AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಪುನೀತ್​ಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಗಣ್ಯರ ಒತ್ತಾಯ; ದನಿಗೂಡಿಸಿದ ಆನಂದ್ ಸಿಂಗ್, ಬಿಸಿ ಪಾಟೀಲ್, ನಟ ಪ್ರೇಮ್

Puneeth Rajkumar: ನಟ ಪುನೀತ್ ರಾಜಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತರಿಉ ನೀಡಬೇಕು ಎಂದು ಅಭಿಮಾನಿಗಳು ಒತ್ತಾಯಿಸುತ್ತಿರುವ ಬೆನ್ನಲ್ಲೇ, ಗಣ್ಯರೂ ಅದಕ್ಕೆ ದನಿಗೂಡಿಸಿದ್ದಾರೆ. ಸಚಿವರಾದ ಆನಂದ್ ಸಿಂಗ್, ಬಿಸಿ ಪಾಟೀಲ್, ನಟ ಪ್ರೇಮ್ ಮೊದಲಾದವರು ಈ ಕುರಿತು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಟ ಪುನೀತ್​ಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಗಣ್ಯರ ಒತ್ತಾಯ; ದನಿಗೂಡಿಸಿದ ಆನಂದ್ ಸಿಂಗ್, ಬಿಸಿ ಪಾಟೀಲ್, ನಟ ಪ್ರೇಮ್
ನಟ ಪುನೀತ್ ರಾಜ್​ಕುಮಾರ್
TV9 Web
| Updated By: shivaprasad.hs|

Updated on: Nov 07, 2021 | 3:21 PM

Share

ಹಾವೇರಿ: ನಟ ಪುನೀತ್​ಗೆ ಪದ್ಮಶ್ರೀ ಪ್ರಶಸ್ತಿ ಕೊಡಬೇಕೆಂಬ ವಿಚಾರಕ್ಕೆ ನಮ್ಮ ಬೆಂಬಲವಿದೆ ಎಂದು ಸಚಿವ ಆನಂದ್ ಸಿಂಗ್ ಹೇಳಿಕೆ ನೀಡಿದ್ದಾರೆ. ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಅಬಲೂರು ಗ್ರಾಮದಲ್ಲಿ ಅವರು ಮಾತನಾಡಿದರು. ನಟ ಪುನೀತ್​ ಸೇವಾ ಮನೋಭಾವ ಹೊಂದಿರುವ ವ್ಯಕ್ತಿಯಾಗಿದ್ದರು. ನಟ ಪುನೀತ್​ರಲ್ಲಿದ್ದ ವಿಚಾರಗಳು ಯಾರಿಗೂ ಬರಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಪುನೀತ್ ಅವರೊಂದಿಗಿನ ನೆನಪುಗಳನ್ನು ಮೆಲುಕು ಹಾಕಿದ ಅವರು, ಪುನೀತ್ ರಾಜಕುಮಾರ್ ನನಗೆ 2000ನೇ ಇಸವಿಯಿಂದ ಪರಿಚಿತರು. ನಾನಾಗ ರಾಜಕಾರಣಿ ಆಗಿರಲಿಲ್ಲ. ಆಗ ನಾನೊಬ್ಬ ಸಮಾಜ ಸೇವಕನಾಗಿದ್ದೆ. ಪುನೀತ್ ರಾಜಕುಮಾರ ಒಬ್ಬ ಸೇವಾ ಮನೋಭಾವನೆ ಇರೋ ವ್ಯಕ್ತಿ. ಅವರಲ್ಲಿರೋ ವಿಚಾರಗಳು ಯಾರಿಗೂ ಬರೋದಿಲ್ಲ. ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲು ನಮ್ಮ ಬೆಂಬಲವೂ ಇದೆ ಎಂದು ಹೇಳಿದ್ದಾರೆ.

ಸಚಿವ ಬಿಸಿ ಪಾಟೀಲ್ ಕೂಡ ಪುನೀತ್​ಗೆ ಪದ್ಮಶ್ರೀ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಶಿಫಾರಸ್ಸು ಮಾಡುವುದಕ್ಕೆ ಸರ್ಕಾರದಿಂದ ಕೈಗೊಳ್ಳಬೇಕಾದ ನಿರ್ಧಾರಕ್ಕೆ ನಾವು  ಪ್ರಯತ್ನಿಸುತ್ತೇವೆ. ಪುನೀತ್ ಅವರು ಕಲಾ ಸೇವೆ ಮಾಡಿದ್ದಾರೆ. ಅಷ್ಟೇ ಮುಖ್ಯವಾಗಿ ಸಮಾಜ ಸೇವೆಯನ್ನೂ ಮಾಡಿದ್ದಾರೆ. ಅವರಿಗೆ ಪದ್ಮಶ್ರೀ ನೀಡಬೇಕು ಎನ್ನುವುದು ನಮ್ಮೆಲ್ಲರ ಕೋರಿಕೆಯೂ ಹೌದು ಎಂದು ಅವರು ಹೇಳಿದ್ದಾರೆ.

ಪುನೀತ್​ಗೆ ಪದ್ಮಶ್ರೀ ನೀಡಬೇಕು; ನಟ ಪ್ರೇಮ್ ಒತ್ತಾಯ: ನಟ ಪುನೀತ್‌ಗೆ ಆದಷ್ಟು ಬೇಗ ‘ಪದ್ಮಶ್ರೀ’ ನೀಡಬೇಕು ಎಂದು ಚಿಕ್ಕಮಗಳೂರಿನಲ್ಲಿ ನಟ ನೆನಪಿರಲಿ ಪ್ರೇಮ್ ಒತ್ತಾಯಿಸಿದ್ದಾರೆ. ಪುನೀತ್ ಸರ್ ಅವರಿಗೆ ಆದಷ್ಟು ಬೇಗ ಪದ್ಮಶ್ರೀ ಕೊಡಲಿ ಎಂದು ನಾನು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ. ಇದೇ ವೇ:ಳೆ ಅವರು, 50-60 ವರ್ಷ ಮೇಲ್ಪಟ್ಟವರು ಜಿಮ್​ ಮಾಡುವಾಗ ಎಚ್ಚರಿಕೆಯಿಂದಿರಬೇಕು ಎಂದು ಸಲಹೆ ನೀಡಿದ್ದಾರೆ.

ನಟ ಪುನೀತ್‌ಗೆ ಪದ್ಮ ಪ್ರಶಸ್ತಿ ನೀಡುವಂತೆ ಒತ್ತಾಯ ಬಂದಿರುವ ಹಿನ್ನೆಲೆಯಲ್ಲಿ, ಸರ್ಕಾರ ಅಗತ್ಯ ಕ್ರಮಕ್ಕೆ ಮುಂದಾಗಿದೆ. ಈ ನಿಟ್ಟಿನಲ್ಲಿ ಸದ್ಯದಲ್ಲೇ ಕೇಂದ್ರಕ್ಕೆ ನಟ ಪುನೀತ್ ಹೆಸರಿನ ಶಿಫಾರಸು ಪತ್ರ ಕಳಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಈ ಕುರಿತು ನವೆಂಬರ್ 16ರ ಬಳಿಕ ಸರ್ಕಾರದ ಮಟ್ಟದಲ್ಲಿ ಹಾಗೂ ಪುನೀತ್ ಕುಟುಂಬದ ಜತೆ ಚರ್ಚಿಸಿ ಹೆಸರು ಶಿಫಾರಸು ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ಸಿಎಂ ಕೂಡ ಪುನೀತ್​ಗೆ ಪದ್ಮಶ್ರೀ ನೀಡುವ ವಿಚಾರಕ್ಕೆ ಸಮ್ಮತವಿದೆ ಎಂಬ ಸುಳಿವು ಬಿಟ್ಟುಕೊಟ್ಟಿದ್ದರು.

ಇದನ್ನೂ ಓದಿ:

Puneeth Rajkumar: ಪುನೀತ್​ಗೆ ಪದ್ಮ ಪ್ರಶಸ್ತಿ ನೀಡಲು ಅಭಿಮಾನಿಗಳ ಒತ್ತಾಯ; ಅಗತ್ಯ ಕ್ರಮಕ್ಕೆ ಮುಂದಾದ ಸರ್ಕಾರ

ಯಾದಗಿರಿ: ಪುನೀತ್ ಪ್ರೇರಣೆ; ಇಬ್ಬರು ದಂಪತಿಗಳು ದೇಹದಾನಕ್ಕೆ ಹಾಗೂ 52 ಜನರು ನೇತ್ರದಾನಕ್ಕೆ ನೋಂದಣಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!