AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ವಿಧೇಯಕ ಅಂಗೀಕಾರ

ವಿಧಾನಸಭೆಯಲ್ಲಿ ‘ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ವಿಧೇಯಕ’ ಇಂದು (ಜು.23) ಅಂಗೀಕಾರಗೊಂಡಿದೆ. ಇದರಿಂದ ಈ ಕ್ಷೇತ್ರದ ಅಸಂಘಟಿತ ಕಾರ್ಮಿಕರಿಗೆ ಅನುಕೂಲ ಆಗಲಿದೆ. ಆದರೆ ಜನರಿಗೆ ಸಿನಿಮಾ ಟಿಕೆಟ್​ಗಳ ದರ ಜಾಸ್ತಿಯಾಗಲಿದೆ, ಒಟಿಟಿ ಚಂದಾದಾರರ ಶುಲ್ಕ ಕೂಡ ಹೆಚ್ಚಲಿದೆ. ಆ ಕಾರಣದಿಂದ ಕೆಲವರು ಇದನ್ನು ವಿರೋಧಿಸಿದ್ದಾರೆ.

ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ವಿಧೇಯಕ ಅಂಗೀಕಾರ
ಸಿನಿಮಾ ಹಾಲ್
ಮದನ್​ ಕುಮಾರ್​
|

Updated on:Jul 23, 2024 | 9:43 PM

Share

ಕರ್ನಾಟಕದ ಸಿನಿಮಾ ಹಾಗೂ ಸಾಂಸ್ಕೃತಿಕ ರಂಗದಲ್ಲಿ ದುಡಿಯುತ್ತಿರುವ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ‘ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ವಿಧೇಯಕ 2024’ಕ್ಕೆ ಇಂದು (ಜುಲೈ 23) ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ವಿಧಾನ ಪರಿಷತ್‌ನಲ್ಲಿ ಅಂಗೀಕಾರಗೊಂಡು, ಈ ಕಾಯ್ದೆ ಜಾರಿಗೆ ಬಂದರೆ ಸಿನಿಮಾ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಕಾರ್ಮಿಕರಿಗೆ ಅನುಕೂಲ ಆಗಲಿದೆ. ಆದರೆ ಪ್ರೇಕ್ಷಕರಿಗೆ ಹೊರೆ ಆಗಲಿದೆ. ಮನರಂಜನೆಯ ಶುಲ್ಕ ಹೆಚ್ಚಾಗಲಿದೆ.

ಸಿನಿಮಾ ಹಾಗೂ ಸಾಂಸ್ಕೃತಿಕ ವಲಯದ ಕಾರ್ಮಿಕರಿಗಾಗಿ ಈ ವಿದೇಯಕದಿಂದ ಸಾಕಷ್ಟು ನೆರವು ನೀಡಲು ಉದ್ದೇಶಿಸಲಾಗಿದೆ. ಇದರಿಂದಾಗಿ ಸಿನಿಮಾಗಳ ಟಿಕೆಟ್‌ ದರ ಮತ್ತು ಒಟಿಟಿ ಪ್ಲಾಟ್​ಫಾರ್ಮ್​ಗಳ ಚಂದದಾರರ ಶುಲ್ಕ ಕೂಡ ಜಾಸ್ತಿ ಆಗಲಿದೆ. ಆದರೆ ಕಾರ್ಮಿಕರಿಗೆ ಇಎಸ್ಐ, ಪಿಎಫ್ ಮುಂತಾದ ಸೌಕರ್ಯ ಸಿಗಲಿದೆ. ಇದಕ್ಕೆ ಸಂಬಂಧಿಸಿದಂತೆ ಸಾವರ್ಜನಿಕರ ವಲಯದಲ್ಲಿ ಪರ-ವಿರೋಧದ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: 2024ರ ಜನಪ್ರಿಯ, ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿ ರಿಲೀಸ್; ಕನ್ನಡದ ಒಂದು ಚಿತ್ರವೂ ಇಲ್ಲ

ಕನ್ನಡ ಚಿತ್ರರಂಗ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ವಿಧೇಯಕವನ್ನು ಮಂಡಿಸಲಾಗಿತ್ತು. ಈ ಯೋಜನೆಯ ಅಡಿಯಲ್ಲಿ ಅಸಂಘಟಿತ ಕಾರ್ಯಕರ್ತರನ್ನು ನೋಂದಾಯಿಸಿಕೊಳ್ಳಲಾಗುವುದು. ನೋಂದಾಯಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳಾದ ಜೀವ ಮಿಮೆ, ಅಪಘಾತ ಪರಿಹಾರ, ಹೆರಿಗೆ ಭತ್ಯೆ, ಶವ ಸಂಸ್ಕಾರ ವೆಚ್ಚ ನೀಡಲಾಗುವುದು.

ಇದನ್ನೂ ಓದಿ: ದರ್ಶನ್ ಚಿತ್ರರಂಗದ ಆಸ್ತಿ ಮತ್ತು ಕ್ಷೇತ್ರಕ್ಕೆ ಅವರು ನೀಡಿರುವ ಕೊಡುಗೆ ಬಹಳ ದೊಡ್ಡದು: ಹಂಸಲೇಖ

ಇಷ್ಟೇ ಅಲ್ಲದೇ, ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ ನೀಡಲು ಕೂಡ ಉದ್ದೇಶಿಸಲಾಗಿದೆ. ಆದರೆ ಈ ಯೋಜನೆಗಳಿಂದ ಸಾರ್ವಜನಿಕರಿಗೆ ಮನರಂಜನೆ ದುಬಾರಿ ಆಗಲಿದೆ. ಸಿನಿಮಾಗಳ ಟಿಕೆಟ್​ ದರ ಹೆಚ್ಚಲಿದೆ. ಅಲ್ಲದೇ, ಒಟಿಟಿ ಸಬ್​ಸ್ಕ್ರಿಪ್ಷನ್​ ಕೂಡ ದುಬಾರಿ ಆಗುತ್ತದೆ. ಆದ್ದರಿಂದ ವಿಧಾನಸಭೆಯಲ್ಲಿ ವಿರೋಧ ಪಕ್ಷದಿಂದ ಇದಕ್ಕೆ ವಿರೋಧ ವ್ಯಕ್ತವಾಗಿತ್ತು. ಅದರ ನಡುವೆಯೂ ವಿಧೇಯಕ ಅಂಗೀಕಾರ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:56 pm, Tue, 23 July 24

Follow Us
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ
ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ
ಆಷಾಢದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಗಮನಕ್ಕೆ ಬಿಗ್ ಅಪ್​ಡೇಟ್
ಆಷಾಢದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಗಮನಕ್ಕೆ ಬಿಗ್ ಅಪ್​ಡೇಟ್