AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ: ಅಧ್ಯಕ್ಷ ಸ್ಥಾನ ಪಡೆಯಲು ನಡೆದಿದೆ ಹಣಾಹಣಿ

ಕಳೆದ ಬಾರಿ ಭಾ.ಮ. ಹರೀಶ್​ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಅಧ್ಯಕ್ಷರಾಗಿ ಆಯ್ಕೆ ಆಗಿದ್ದರು. ಈಗ ಎನ್​ಎಂ ಸುರೇಶ್​, ಶಿಲ್ಪಾ ಶ್ರೀನಿವಾಸ್​, ಎ. ಗಣೇಶ್​ ಹಾಗೂ ಮಾರ್ಸ್​ ಸುರೇಶ್​ ಅವರ ನಡುವೆ ಸ್ಪರ್ಧೆ ಏರ್ಪಟ್ಟಿದೆ. ರೇಸ್​ ಕೋರ್ಸ್​ ಬಳಿ ಇರುವ ಗುರುರಾಜ ಕಲ್ಯಾಣ ಮಂಟಪದಲ್ಲಿ ವಾಣಿಜ್ಯ ಮಂಡಳಿಯ ಚುನಾವಣೆ ನಡೆಯಲಿದೆ.

ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ: ಅಧ್ಯಕ್ಷ ಸ್ಥಾನ ಪಡೆಯಲು ನಡೆದಿದೆ ಹಣಾಹಣಿ
ಎನ್​ಎಂ ಸುರೇಶ್​, ಎ. ಗಣೇಶ್​, ಮಾರ್ಸ್​ ಸುರೇಶ್​, ಶಿಲ್ಪಾ ಶ್ರೀನಿವಾಸ್​
Follow us
ಮದನ್​ ಕುಮಾರ್​
|

Updated on: Sep 23, 2023 | 1:11 PM

ಕನ್ನಡ ಚಿತ್ರರಂಗದ ಅನೇಕ ಚಟುವಟಿಕೆಗಳಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯೇ (​Karnataka ​Film Chamber of Commerce) ಕೇಂದ್ರ ಸ್ಥಾನ. ಸಿನಿಮಾ ನೋಂದಣಿಯಿಂದ ಹಿಡಿದು ಸ್ಯಾಂಡಲ್​ವುಡ್​ನಲ್ಲಿನ ತಕರಾರುಗಳನ್ನು ಬಗೆಹರಿಸುವ ಕಾಯಕದ ತನಕ ಅನೇಕ ಸಂಗತಿಗಳು ಫಿಲ್ಮ್​ ಚೇಂಬರ್​ನಲ್ಲಿ ನಡೆಯುತ್ತವೆ. ಮಂಡಳಿಯ ಅಧ್ಯಕ್ಷರಾದವರ ಮೇಲೆ ಸಾಕಷ್ಟು ಜವಾಬ್ದಾರಿ ಇರುತ್ತದೆ. ಪ್ರತಿ ಬಾರಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಾಗಲೂ ಸಖತ್​ ಪೈಪೋಟಿ ನಿರ್ಮಾಣ ಆಗುತ್ತದೆ. 2023ನೇ ಸಾಲಿನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ (​Film Chamber Elections) ಇಂದು (ಸೆಪ್ಟೆಂಬರ್​ 23) ನಡೆಯುತ್ತಿದೆ. ಕನ್ನಡ ಚಿತ್ರರಂಗದ ಅನೇಕರು ಬಂದು ಮತ ಚಲಾಯಿಸಲಿದ್ದಾರೆ. ಈ ಬಾರಿ ಅಧ್ಯಕ್ಷ ಸ್ಥಾನಕ್ಕಾಗಿ ಎನ್​ಎಂ ಸುರೇಶ್​ (NM Suresh), ಶಿಲ್ಪಾ ಶ್ರೀನಿವಾಸ್​, ಎ. ಗಣೇಶ್​ ಹಾಗೂ ಮಾರ್ಸ್​ ಸುರೇಶ್​ ಅವರ ನಡುವೆ ಹಣಾಹಣಿ ನಡೆಯುತ್ತಿದೆ. ಇವರ ಪೈಕಿ ಯಾರು ಅಧ್ಯಕ್ಷ ಸ್ಥಾನಕ್ಕೆ ಏರುತ್ತಾರೆ ಎಂಬುದನ್ನು ತಿಳಿಯುವ ಕೌತುಕ ನಿರ್ಮಾಣ ಆಗಿದೆ.

ಬೆಂಗಳೂರಿನ ರೇಸ್​ ಕೋರ್ಸ್​ ಬಳಿ ಇರುವ ಗುರುರಾಜ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ನಡೆಯಲಿದೆ. ಬೆಳಗ್ಗೆ ಸರ್ವ ಸದ್ಯಸ್ಯರ ಸಭೆ ನಡೆದಿದ್ದು, ಇದರಲ್ಲಿ ಅನೇಕರು ಭಾಗಿ ಆಗಿದ್ದಾರೆ. ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಫಿಲ್ಮ್​ ಚೇಂಬರ್ ಎಲೆಕ್ಷನ್​ ಶುರುವಾಗಲಿದೆ. ಸಂಜೆ ಆರು ಗಂಟೆ ತನಕ ವೋಟಿಂಗ್​ಗೆ ಅವಕಾಶ ಇರಲಿದೆ. ನಂತರ ಮತ ಎಣಿಕೆ ಆರಂಭ ಆಗಲಿದೆ. ರಾತ್ರಿ 8 ಗಂಟೆ ಸುಮಾರಿಗೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ.

ಇದನ್ನೂ ಓದಿ: ‘ಯಾವ ಕೆಲಸ ಮಾಡೋಕೂ ನಾನು ರೆಡಿ’: ವಾಣಿಜ್ಯ ಮಂಡಳಿ ಚುನಾವಣೆ ಕುರಿತು ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ

ಕಳೆದ ವರ್ಷ ಭಾ.ಮ. ಹರೀಶ್​ ಅವರು ವಾಣಿಜ್ಯ ಮಂಡಳಿಗೆ ಅಧ್ಯಕ್ಷರಾಗಿ ಆಯ್ಕೆ ಆಗಿದ್ದರು. ಅವರ ಅವಧಿ ಮುಗಿದಿದ್ದರೂ ಕೂಡ ಚುನಾವಣೆ ನಡೆಸಿಲ್ಲ ಎಂದು ಕೆಲವರು ಆಕ್ಷೇಪ ಎತ್ತಿದ್ದರು. ಈಗ ಚುನಾವಣೆ ನಡೆಯುತ್ತಿದೆ. ನಿರ್ಮಾಪಕರು, ಪ್ರದರ್ಶಕರು ಹಾಗೂ ವಿತರಕರ ವಲಯದಿಂದ ಅನೇಕರು ಬಂದು ಮತ ಚಲಾಯಿಸಲಿದ್ದಾರೆ. 1600 ಸದಸ್ಯರು ಭಾಗಿ ಆಗಲಿದ್ದಾರೆ. ಚಿತ್ರರಂಗಕ್ಕೆ ಸಂಬಂಧಿಸಿದಂತೆ ಅನೇಕ ಸಮಸ್ಯೆಗಳು ಇವೆ. ಸಬ್ಸಿಡಿ ವಿಳಂಬ, ಪೈರಸಿ ಕಾಟ, ಸಂಭಾವನೆ ತಾರತಮ್ಯ, ಚಿತ್ರೀಕರಣಕ್ಕೆ ಸಿಂಗಲ್​ ವಿಂಡೋ ಅನುಮತಿ ಸಿಗದೇ ಇರುವುದು ಸೇರಿದಂತೆ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮಂಡಳಿ ಪ್ರಯತ್ನಿಸಬೇಕಿದೆ.

ಇದನ್ನೂ ಓದಿ: ‘ನಾನು ಆಡಂಬರ ಮಾಡಲ್ಲ, ಸುಳ್ಳು ಆಶ್ವಾಸನೆ ಕೊಡಲ್ಲ’: ಫಿಲ್ಮ್​ ಚೇಂಬರ್​ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎನ್​ಎಂ ಸುರೇಶ್​ ಹೇಳಿಕೆ

ನಿರ್ಮಾಪಕರು, ಪ್ರದರ್ಶಕರು ಹಾಗೂ ವಿತರಕರ ವಲಯದ ಪೈಕಿ ಪ್ರತಿ ಬಾರಿ ಒಂದೊಂದು ವಲಯಕ್ಕೆ ಅಧ್ಯಕ್ಷ ಸ್ಥಾನ ಮೀಸಲಾಗಿರುತ್ತದೆ. ಈ ಬಾರಿ ವಿತರಕರ ವಲಯದಿಂದ ಅಧ್ಯಕ್ಷರು ಆಯ್ಕೆ ಆಗಲಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ವಿತರಕರಾಗಿ ಹಲವು ವರ್ಷಗಳ ಅನುಭವ ಹೊಂದಿರುವ ಮಾರ್ಸ್​ ಸುರೇಶ್​, ಎ. ಗಣೇಶ್​, ಶಿಲ್ಪಾ ಶ್ರೀನಿವಾಸ್​ ಹಾಗೂ ಎನ್​ಎಂ ಸುರೇಶ್​ ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ನೀಡುತ್ತಿದ್ದಾರೆ. ಬೇರೆ ಬೇರೆ ಕಾರ್ಯಯೋಜನೆಗಳನ್ನು ಮುಂದಿಟ್ಟುಕೊಂಡು ಅಧ್ಯಕ್ಷ ಸ್ಥಾನಕ್ಕಾಗಿ ಈ ಅಭ್ಯರ್ಥಿಗಳು ಮತ ಯಾಚಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು