ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ: ಅಧ್ಯಕ್ಷ ಸ್ಥಾನಕ್ಕೆ ಎನ್​ಎಂ​ ಸುರೇಶ್ ನಾಮಪತ್ರ, ಸಾರಾ ಗೋವಿಂದು ಬೆಂಬಲ

film chamber of commerce: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಇಂದು ನಿರ್ಮಾಪಕ ಎನ್​ಎಂ ಸುರೇಶ್ ಸೇರಿದಂತೆ ಹಲವು ಪ್ರಮುಖರು ವಿವಿಧ ಹುದ್ದೆಗಳಿಗಾಗಿ ಚುನಾವಣೆ ಎದುರಿಸಲು ನಾಮಪತ್ರ ಸಲ್ಲಿಸಿದ್ದಾರೆ.

ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ: ಅಧ್ಯಕ್ಷ ಸ್ಥಾನಕ್ಕೆ ಎನ್​ಎಂ​ ಸುರೇಶ್ ನಾಮಪತ್ರ, ಸಾರಾ ಗೋವಿಂದು ಬೆಂಬಲ
ಎನ್ಎಂ ಸುರೇಶ್ ನಾಮಪತ್ರ
Follow us
|

Updated on: Sep 09, 2023 | 5:08 PM

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (film chamber of commerce) ಚುನಾವಣೆ ಕಾವೇರಿದೆ. ಸೆಪ್ಟೆಂಬರ್ 23ರಂದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಚುನಾವಣೆ ನಡೆಯಲಿದ್ದು. ವಾಣಿಜ್ಯ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಈ ಬಾರಿಯೂ ಪೈಪೋಟಿ ಜೋರಾಗಿದೆ. ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ಎನ್.ಎಮ್.ಸುರೇಶ್ ತುರುಸಿನ ಪೈಪೋಟಿ ಒಡ್ಡುತ್ತಿದ್ದಾರೆ. ಗೆದ್ದೇ ಗೆಲ್ಲುವ ಭರವಸೆಯಲ್ಲಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಬೆಳಿಗ್ಗೆ ಫಿಲಂ ಚೇಂಬರ್‌ಗೆ ಆಗಮಿಸಿದ ಎನ್ ಎಮ್ ಸುರೇಶ್, ಡಾ. ರಾಜ್ ಕುಮಾರ್ ಪ್ರತಿಮೆಗೆ ಹಾರ ಹಾಕಿ ನಮಸ್ಕರಿಸಿ ಆ ನಂತರ ನಾಮಪತ್ರ ಸಲ್ಲಿಕೆ ಮಾಡಿದರು. ಸಾರಾ ಗೋವಿಂದ್ ಬಣ ಸೇರಿದಂತೆ ಆನೇಕ ವಿತರಕರು, ನಿರ್ಮಾಪರು ಎನ್ ಎಮ್ ಸುರೇಶ್ ಅವರಿಗೆ ಬೆಂಬಲ ನೀಡಿದ್ದು, ನಾಮಪತ್ರ ಸಲ್ಲಿಕೆ ವೇಳೆಯಲ್ಲಿ ಹಾಜರಿದ್ದರು. ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಎನ್ ಎಮ್ ಸುರೇಶ್, ”ಸಾರಾ ಗೋವಿಂದ್ ನನ್ನ ಮೇಲಿನ ಪ್ರೀತಿಗಾಗಿ ಬಂದಿದ್ದಾರೆ. ನನಗೆ ಇವತ್ತು ಈ ಭಾಗ್ಯ ಸಿಕ್ಕಿರುವುದು ನನ್ನ ಪುಣ್ಯ. ಒಳ್ಳೆಯ ಅಭ್ಯರ್ಥಿಗಳನ್ನು ಗೆಲ್ಲಿಸಿ. ಈಗಲೇ ಅದು ಮಾಡುತ್ತೇನೆ ಇದು ಮಾಡ್ತಿನಿ ಅಂತ ಹೇಳಲ್ಲ. ಆದರೆ ದೊಡ್ಡ ಸಮಸ್ಯೆಗಳಿವೆ ಅವುಗಳನ್ನು ಸರಿಪಡಿಸುವ ಕೆಲಸ ಖಂಡಿತ ಮಾಡುತ್ತೇನೆ. ಅವಕಾಶ ಕೋಡಿ” ಎಂದು ಮನವಿ ಮಾಡಿದರು.

ಸಾರಾ ಗೋವಿಂದ್ ಮಾತನಾಡಿ, ‘ಬಹಳ ದಿನ ಆದ ಬಳಿಕ ಎಲ್ಲರನ್ನೂ ಭೇಟಿ ಆಗುತ್ತಿದ್ದೀನಿ. ಈ ಬಾರಿಯ ಚುನಾವಣೆ ಪ್ರಾಮುಖ್ಯತೆ ಪಡೆದು ಕೊಂಡಿದೆ. ಬಹಳ ಪೈಪೋಟಿಯಲ್ಲಿ ಚುನಾವಣೆ ನಡೆಯುತ್ತಿರುವುದು ನೋಡಲು ಖುಷಿ ಆಗುತ್ತಿದೆ. ಎನ್ ಎಮ್ ಕುಮಾರ್ ಎಲ್ಲರ ಪ್ರೀತಿ, ಬೆಂಬಲದಿಂದ ನಾಮಪತ್ರ ಸಲ್ಲಿಸಿದ್ದಾರೆ. ಎನ್ ಎಮ್ ಸುರೇಶ್ ಅವರಿಗೆ ಬೆಂಬಲ ನೀಡುತ್ತಿದ್ದೀನಿ. ಅಭ್ಯರ್ಥಿಗಳ ಯೋಗ್ಯತೆ ನೋಡಿಕೊಂಡು ಗೆಲ್ಲಿಸಿ’ ಎಂದು ಹೇಳಿದರು.

ಇದನ್ನೂ ಓದಿ:ಫಿಲ್ಮ್​ ಚೇಂಬರ್​ ನೂತನ ಅಧ್ಯಕ್ಷ ಭಾಮಾ ಹರೀಶ್​ಗೆ ಪೊರಕೆ, ಫಿನಾಯಿಲ್​ ಗಿಫ್ಟ್​​! ಕಾರಣವೇನು?

2003ರಲ್ಲಿ ರಿಲೀಸ್ ಆದ ಹಿಟ್ ‘ಎಕ್ಸ್‌ಕ್ಯೂಸ್‌ಮೀ’ ಸಿನಿಮಾಗೆ ಬಂಡವಾಳ ಹೂಡುವ ಮೂಲಕ ನಿರ್ಮಾಪಕರಾಗಿ ಗುರುತಿಸಿಕೊಂಡ ಎನ್ ಎಮ್ ಸುರೇಶ್ ಬಳಿಕ ಅನೇಕ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಕಳೆದ ಬಾರಿ ಫಿಲ್ಮ್ ಚೇಂಬರ್ ಕಾರ್ಯದರ್ಶಿ ಆಗಿದ್ದ ಸುರೇಶ್ ಇದೀಗ ಮೊದಲ ಬಾರಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ.

ಅಂದಹಾಗೆ ಈ ಬಾರೆಯ ಚುನಾವಣೆ ವಿಳಂಬವಾಗಿದೆ. ಅಂದುಕೊಂಡಂತೆ ಆಗಿದ್ದರೆ ಮೇ ತಿಂಗಳಲ್ಲೆ ಚುನಾವಣೆ ನಡೆದು ಫಲಿತಾಂಶ ಕೂಡ ಹೊರಬೀಳಬೇಕಿತ್ತು. ಆದರೆ ಈ ಬಾರಿ ಸೆಪ್ಟಂಬರ್‌ನಲ್ಲಿ ನಡೆಯುತ್ತಿದೆ. ಇನ್ನು ಕಳೆದ ಬಾರಿ 2022ರಲ್ಲಿ ನಡೆದ ಚುನಾವಣೆಯಲ್ಲಿ ಭಾ.ಮ. ಹರೀಶ್​ ಅಧ್ಯಕ್ಷರಾಗಿ ಆಯ್ಕೆ ಆಗಿದ್ದರು. ಅವರ ಅಧಿಕಾರದ ಅವಧಿ 2023ರ ಮೇ 28ಕ್ಕೆ ಅಂತ್ಯವಾಗಿದೆ. ಹಾಗಿದ್ದರೂ ಕೂಡ ಚುನಾವಣೆ ನಡೆಸಿರಲಿಲ್ಲ. ಎ ಗಣೇಶ್, ಪ್ರಿಯಾ ಹಾಸನ್ ಇನ್ನೂ ಹಲವರು ವಿವಿಧ ಹುದ್ದೆಗಳಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ