AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಭಾ.ಮಾ.ಹರೀಶ್ ಆಯ್ಕೆ

ಚುನಾವಣಾ ಕಾವು ಮುಂಜಾನೆಯಿಂದಲೇ ಜೋರಾಗಿತ್ತು. ಭಾ.ಮಾ. ಹರೀಶ್ ಹಾಗೂ ಸಾರಾ ಗೋವಿಂದು ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದ್ದರು. ಮಧ್ಯಾಹ್ನ 2 ಗಂಟೆಯಿಂದ ಆರಂಭವಾಗಿದ್ದ ಮತದಾನ ಪ್ರಕ್ರಿಯೆ ಸಂಜೆ ಪೂರ್ಣಗೊಂಡಿತು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಭಾ.ಮಾ.ಹರೀಶ್ ಆಯ್ಕೆ
ಭಾಮಾ ಹರೀಶ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:May 29, 2022 | 9:38 AM

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (Karnataka Film Chamber Of Commerce) ಚುನಾವಣೆ ಮೇ 28ರಂದು ನಡೆಯಿತು. ಇದರ ಫಲಿತಾಂಶ ಹೊರಬಿದ್ದಿದೆ. ಭಾ.ಮ. ಹರೀಶ್​ ಅವರು ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಅವರಿಗೆ ಚಿತ್ರರಂಗದ ಕಡೆಯಿಂದ ಶುಭಾಶಯಗಳು ಬರುತ್ತಿವೆ. ನಿರ್ಮಾಪಕ ಸಾ.ರಾ. ಗೋವಿಂದು ಅವರು (Sa Ra Govindu) ಈಗಾಗಲೇ ಮೂರು ಬಾರಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಈ ಬಾರಿ ಅವರು ಮತ್ತೆ ಅಧ್ಯಕ್ಷ ಸ್ಥಾನಕ್ಕಾಗಿ ಚುನಾವಣೆಯಲ್ಲಿ ನಿಂತಿದ್ದರು. ಅವರಿಗೆ ಎದುರಾಳಿಯಾಗಿ ಭಾ.ಮ. ಹರೀಶ್​ ಅವರು (Bha Ma Harish) ಚುನಾವಣೆಯ ಕಣದಲ್ಲಿ ಇದ್ದರು. ಅಂತಿಮವಾಗಿ ಗೆಲುವು ಭಾ.ಮ. ಹರೀಶ್​ ಪಾಲಾಗಿದೆ. ಸಾ.ರಾ. ಗೋವಿಂದು ಅವರಿಗೆ 371  ಮತ ಹಾಗೂ ಭಾ.ಮ. ಹರೀಶ್ ಅವರಿಗೆ 781 ಮತಗಳು ಬಿದ್ದಿವೆ. ಈ ಮೂಲಕ 410 ವೋಟ್​ಗಳ ಅಂತರದಿಂದ ಹರೀಶ್ ಗೆಲುವು ಸಾಧಿಸಿದ್ದಾರೆ. ವಾಣಿಜ್ಯ ಮಂಡಳಿಯ ಉಪಾಧ್ಯಕ್ಷರಾಗಿ ಜೈ ಜಗದೀಶ್ ಹಾಗೂ ಖಜಾಂಚಿಯಾಗಿ ಟಿ.ಪಿ.ಸಿದ್ದರಾಜು ಆಯ್ಕೆ ಆಗಿದ್ದಾರೆ.

ನಿರ್ಮಾಪಕರ ವಲಯದಿಂದ 910 ವೋಟ್ ಚಲಾವಣೆ ಆಗಿತ್ತು. ವಿತರಕರಿಂದ 200ರ ಆಸುಪಾಸಿನಲ್ಲಿ  ವೋಟ್​ಗಳು ಚಲಾವಣೆಗೊಂಡವು. ಪೇಪರ್ ಹರಿಯದೇ ಮತ ಏಣಿಕೆ ಮಾಡಲಾಗಿದೆ. 8 ಆಫೀಸರ್​​ಗಳು ಮತ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಚುನಾವಣಾ ಕಾವು ಮುಂಜಾನೆಯಿಂದಲೇ ಜೋರಾಗಿತ್ತು. ಭಾ.ಮಾ. ಹರೀಶ್ ಹಾಗೂ ಸಾ.ರಾ. ಗೋವಿಂದು ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದ್ದರು. ಮೇ 28ರ ಮಧ್ಯಾಹ್ನ 2 ಗಂಟೆಯಿಂದ ಆರಂಭವಾಗಿದ್ದ ಮತದಾನ ಪ್ರಕ್ರಿಯೆ ಸಂಜೆ ಪೂರ್ಣಗೊಂಡಿತು. ರಾತ್ರಿ 7 ಗಂಟೆಯಿಂದ ಮತಗಳ ಎಣಿಕೆ ಕಾರ್ಯ ಆರಂಭ ಆಯಿತು.

ಇದನ್ನೂ ಓದಿ
Image
ಫಿಲ್ಮ್​ ಚೇಂಬರ್​ ಚುನಾವಣೆಯಲ್ಲಿ ಗೆಲುವಿಗಾಗಿ ದೇವರ ಮೊರೆ ಹೋದ ಭಾ.ಮ. ಹರೀಶ್​; ಇಲ್ಲಿದೆ ವಿಡಿಯೋ
Image
ಇಂದು ಫಿಲ್ಮ್​ ಚೇಂಬರ್ ಚುನಾವಣೆ; ಸಾ.ರಾ.ಗೋವಿಂದು, ಬಾ.ಮಾ.ಹರೀಶ್ ಮಧ್ಯೆ ಪ್ರಬಲ ಪೈಪೋಟಿ
Image
ಫಿಲ್ಮ್​ ಚೇಂಬರ್​ನಲ್ಲಿ ಚುನಾವಣೆ ಗಲಾಟೆ; ಭಾಮಾ ‌ಹರೀಶ್ ಹಾಗು ಸುರೇಶ್ ನಡುವೆ ಮಾತಿನ ಚಕಮಕಿ
Image
ನಿಧನರಾದ ಮೇಲೂ ಸಂಚಾರಿ ವಿಜಯ್​ಗೆ ಅಗೌರವ; ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಎಡವಟ್ಟು

ಇದನ್ನೂ ಓದಿ: ಫಿಲ್ಮ್​ ಚೇಂಬರ್​ ಚುನಾವಣೆಯಲ್ಲಿ ಗೆಲುವಿಗಾಗಿ ದೇವರ ಮೊರೆ ಹೋದ ಭಾ.ಮ. ಹರೀಶ್​; ಇಲ್ಲಿದೆ ವಿಡಿಯೋ

ಫಿಲ್ಮ್ ಚೇಂಬರ್ ಚುನಾವಣೆಗೆ ಮತ ಚಲಾಯಿಸಲು ಸ್ಯಾಂಡಲ್​​ವುಡ್​ನ ಅನೇಕರು ಆಗಮಿಸಿದ್ದರು. ರಾಘವೇಂದ್ರ ರಾಜ್​ಕುಮಾರ್, ನಟಿ ಲೀಲಾವತಿ, ವಿನೋದ್ ರಾಜ್, ನಿರ್ಮಾಪಕ ಮುನಿರತ್ನ, ರಾಕ್ ಲೈನ್ ವೆಂಕಟೇಶ್, ನಟಿ ಶೃತಿ, ದಿನಕರ್ ತೂಗುದೀಪ, ನಟಿ ಜಯಮಾಲಾ, ವಿಜಯ್ ರಾಘವೇಂದ್ರ, ಸೃಜನ್ ಲೋಕೇಶ್, ಓಂ ಸಾಯಿ ಪ್ರಕಾಶ್ ಮೊದಲಾದವರು ಮತ ಚಲಾಯಿಸಿದ್ದರು.

‘ನಮ್ಮ ಮೇಲೆ ನಂಬಿಕೆ ಇಟ್ಟು ಜಯ ತಂದುಕೊಟ್ಟ ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರಿಗೆ ಧನ್ಯವಾದ. ಮುಂದಿನ ದಿನಗಳಲ್ಲಿ ನಮ್ಮ ಬಣದಿಂದ ಒಳ್ಳೆಯ ಕೆಲಸ ಮಾಡುತ್ತೇವೆ. ಈ  ಮೂಲಕ  ಸದಸ್ಯರ ಸಮಸ್ಯೆಗಳನ್ನ ಬಗೆಹರಿಸುತ್ತೇವೆ’ ಎಂದು ಭಾ.ಮಾ. ಹರೀಶ್ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:28 am, Sun, 29 May 22

ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ